ರಿಪೇರಿ ಹಣ ಪಡೆದಿದ್ದರೂ ಮಾಲೀಕರಿಗೆ ವಾಹನ ಹಿಂತಿರುಗಿಸದೇ ಮೀನಾಮೇಷ ಆರೋಪ: ಹೆಚ್ಚುವರಿ ಹಣ ಪಡೆಯಲು ವಾಹನ ಮಾಲೀಕರಿಗೆ ಕಿರುಕುಳ ಆರೋಪ:PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ಎದರು ಧರಣಿ

ರಸ್ತೆ ಅಪಘಾತಕ್ಕೆ ತುತ್ತಾಗಿದ್ದ ಗೂಡ್ಸ್ ಗಾಡಿಯ(ಕ್ಯಾಂಟರ್) ರಿಪೇರಿಗೆಂದು PSN ಆಟೋಮೆಟಿವ್ ಮಾರ್ಕೆಟಿಂಗ್ ಕಂಪನಿ ನೀಡಲಾಗಿತ್ತು, ವಾಹನದ ರಿಪೇರಿ ಹಣವನ್ನ ಇನ್ಷುರೆನ್ಸ್ ಕಂಪನಿ ಬಿಡುಗಡೆ ಮಾಡಿತ್ತು, ಹಣ ಪಾವತಿಯಾಗಿದ್ದರು ವಾಹನ ಬಿಡುಗಡೆ ಮಾಡುವುದಕ್ಕೆ ಮೀನಾಮೇಷ ಎಣಿಸಿ ವಾಹನ ಮಾಲೀಕರಿಗೆ ನಷ್ಟವನ್ನುಂಟು ಮಾಡಲಾಗಿದೆ ಎಂದು ಆರೋಪಿಸಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿ ಕಂಪನಿಯ ಸಿಬ್ಬಂದಿಯನ್ನ ತರಾಟೆಗೆ ತೆಗೆದುಕೊಂಡಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕು ಕೆಸ್ತೂರ್ ಗೇಟ್ ಬಳಿ ಇರುವ PSN ಆಟೋಮೇಟಿವ್ ಮಾರ್ಕೆಟಿಂಗ್ ಕಂಪನಿ ಮುಂದೆ ನಡೆದಿದೆ.

ಗಾಡಿ ಮಾಲೀಕನ ಬಳಿ ಹೆಚ್ಚುವರಿ ಹಣದ ಬೇಡಿಕೆ ಇಟ್ಟ PSN ಕಂಪನಿ ಸಿಬ್ಬಂದಿ ಮಾನಸಿಕ ಕಿರುಕುಳ ನೀಡಲಾಗಿದೆ ಎಂದು ಆರೋಪಿಸಿ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಬೆಂಗಳೂರಿನ ಸಿದ್ದಾರ್ಥ ನಗರದ ನಿವಾಸಿ ಅಶ್ವತ್ಥನಾರಾಯಣರವರು ಹರೀಶ್ ಕಾರ್ಗೋ ಮೂವರ್ಸ್ ಕಂಪನಿಯ ಮಾಲೀಕರು, ಇವರ ಮಾಲೀಕತ್ವದ ಕೆಎ02ಎಹೆಚ್ 8714 ನೋಂದಣಿ ಸಂಖ್ಯೆ ಗೂಡ್ಸ್ ವಾಹನ ಮೂರ್ಚ್ 29 ರಂದು ಪೆನಗೊಂಡ ಬಳಿ ಅಪಘಾತಕ್ಕೆ ತುತ್ತಾಗಿತ್ತು. ಈ ಹಿನ್ನೆಲೆ ಅದೇ ದಿನ ರಿಪೇರಿ ಮಾಡಿಸಲು ದೊಡ್ಡಬಳ್ಳಾಪುರದ ಕೆಸ್ತೂರ್ ಗೇಟ್ ಬಳಿಯ PSN ಅಟೋಮೇಟಿವ್ ಮಾರ್ಕೆಟಿಂಗ್ ಕಂಪನಿಯಲ್ಲಿ ಬಿಡಲಾಗಿತು.

ವಾಹನದ ರಿಪೇರಿಯ ಸುಮಾರು 5 ಲಕ್ಷ ಹಣವನ್ನ ಓರಿಯಂಟಲ್ ಇನ್ಷುರೆನ್ಸ್ ಕಂಪನಿ ಆನ್ ಲೈನ್ ಮೂಲಕವೇ PSN ಕಂಪನಿಗೆ ಪಾವತಿ ಮಾಡಿದೆ. ಕಂಪನಿಗೆ ಹಣ ಪಾವತಿಯಾದರೂ ಮಾಲೀಕರಿಂದ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟು ಮಾಲೀಕರಿಗೆ ವಂಚನೆ ಮಾಡಲು ಮುಂದಾಗಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.

PSN ಕಂಪನಿ ಮ್ಯಾನೇಜರ್ ಯುವರಾಜ್ ಹಾಗೂ ಜನರಲ್ ಮ್ಯಾನೇಜರ್ ಸುದರ್ಶನ್ 34 ಸಾವಿರ ಹೆಚ್ಚುವರಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಡದಿದ್ದಾರೆ ವಾಹನ ಕೊಡುವುದಿಲ್ಲವೆಂದು ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆಂದು ಅಶ್ವತ್ಥನಾರಾಯಣ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

PSN ಕಂಪನಿ ಸಿಬ್ಬಂದಿ ದೌರ್ಜನ್ಯ ಹಾಗೂ ಕಿರುಕುಳ ವಿರೋಧಿಸಿ ಕನ್ನಡಪರ ಸಂಘಟನಗಳು ಕಂಪನಿ ಮುಂದೆ ಪ್ರತಿಭಟನೆಯನ್ನ ನಡೆಸಿದವು.

ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಕನ್ನಡಪರ ಹೋರಾಟಗಾರ ರಘುವರ್ಮಾ, ಕಳೆದ ಎರಡು ತಿಂಗಳಿಂದ ಅಶ್ವತ್ಥನಾರಾಯಣರವರ ಗಾಡಿಯನ್ನ ಕೊಡದೆ ಹಣಕ್ಕಾಗಿ ಕಿರುಕುಳ ಕೊಡುತ್ತಿದ್ದಾರೆ, ಇನ್ಷುರೆನ್ಸ್ ಕಂಪನಿಯಿಂದ ಹಣ ಪಾವತಿಯಾಗಿದ್ರು ಹಣ ಬಂದಿಲ್ಲ ಎಂದು ಸುಳ್ಳು ಹೇಳಿ ಗೂಡ್ಸ್ ಮಾಲೀಕರಿಗೆ ಎರಡು ತಿಂಗಳ ಆದಾಯಕ್ಕೆ ಕನ್ನ ಹಾಕಿದ್ದಾರೆ, ಎರಡು ತಿಂಗಳಿಂದ ಸುಮಾರು 90 ಹಣ ನಷ್ಟವನ್ನ ಅನುಭವಿಸಿದ್ದಾರೆ ಅಶ್ವತ್ಥನಾರಾಯಣರವರು, ಅವರಿಗಾದ ನಷ್ಟವನ್ನ ತುಂಬಿಕೊಡಬೇಕು ಮತ್ತು PSN ಕಂಪನಿ ಸಿಬ್ಬಂದಿಗಳಾದ ಯುವರಾಜ್ ಮತ್ತು ಸುದರ್ಶನ್ ಗೂಡ್ಸ್ ಮಾಲೀಕರ ಬಳಿ ಕ್ಷಮೆ ಕೇಳಿ ಬೇಕೆಂದು ಒತ್ತಾಯಿಸಿದರು.

Ramesh Babu

Journalist

Recent Posts

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 minutes ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

3 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

4 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

8 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

12 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

13 hours ago