ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ: ಕೇವಲ 30ರೂ.ಗೆ ಹೊಟ್ಟೆ‌ ತುಂಬಾ ಊಟ

ಕನ್ನಡಿಗರ ರಕ್ಷಣಾ ವೇದಿಕೆ(ಕನ್ನಡಿಗರ ಬಣ) ವತಿಯಿಂದ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆಗೆ ನಗರದ ಕನ್ನಡ ಜಾಗೃತ ಭವನದ ಬಳಿ ಚಾಲನೆ ನೀಡಲಾಯಿತು.

ನಗರದಲ್ಲಿನ ಬಡ ಬಗ್ಗರು, ಕೂಲಿ ಕಾರ್ಮಿಕರು, ನೇಕಾರ ಕಾರ್ಮಿಕರು, ತಾಲ್ಲೂಕು ಕಚೇರಿ, ಕೋರ್ಟ್ ಕೆಲಸಕ್ಕೆ ಬರುವಂತ ಗ್ರಾಮೀಣ ಭಾಗದ ಜನರಿಗೆ ಒಂದೊತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿ ಇದೆ. ಇದನ್ನು ಮನಗೊಂಡು ಉತ್ತಮ ಗುಣಮಟ್ಟದ ಆಹಾರವನ್ನು ಕೇವಲ 30ರೂ. ದರದಲ್ಲಿ ಎರಡು ಚಪಾತಿ, ಅನ್ನ-ಸಾರು, ಪಲ್ಯ, ಮಜ್ಜಿಗೆ ನೀಡಲಾಗುತ್ತಿದೆ. ಇತರೆ ಕಡೆಗಳಲ್ಲಿ ಊಟ ಬೇಕೆಂದರೆ ದುಬಾರಿ ದರ ತೆರಬೇಕು. ಹೆಚ್ಚು ಹಣ ಕೊಟ್ಟರೂ ಗುಣಮಟ್ಟ ಮಾತ್ರ ಅಷ್ಟಕ್ಕಷ್ಟೆ. ಆದರೆ ಇಲ್ಲಿ ಕಡಿಮೆ ದರದಲ್ಲಿ, ಗುಣಮಟ್ಟದ ಆಹಾರ ಪೂರೈಕೆಗೆ ಒತ್ತು ನೀಡಲಾಗುತ್ತಿದೆ.

ಪ್ರತಿನಿತ್ಯ ಅಡುಗೆ ಜವಾಬ್ದಾರಿ ವಹಿಸಿಕೊಂಡಿರುವ ಖಜಾಂಚಿ ಚೇತನ್ ಗೌಡ ಮಾತನಾಡಿ, ಕನಿಷ್ಠ ಬೆಲೆಗೆ ಸಾರ್ವಜನಿಕರಿಗೆ ಉತ್ತಮ ಗುಣಮಟ್ಡದ ಆಹಾರವನ್ನು ನೀಡಬೇಕು ಎಂಬ ಕಾರಣಕ್ಕೆ ಕೇವಲ 30ರೂ. ದರದಲ್ಲಿ ಎರಡು ಚಪಾತಿ, ಅನ್ನ-ಸಾರು, ಮಜ್ಜಿಗೆ ನೀಡಲಾಗುತ್ತಿದೆ. ಯಾವುದೇ ಲಾಭಕ್ಕಾಗಿ ಈ ಸಮಾಜಮುಖಿ ಕೆಲಸ ಮಾಡುತ್ತಿಲ್ಲ ಬದಲಾಗಿ ಬಡಬಗ್ಗರ ಹೊಟ್ಟೆ ತುಂಬಿಸುವ ಉದ್ದೇಶದಿಂದ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

1 hour ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

4 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

21 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

22 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago