ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ: ಕೇವಲ 30ರೂ.ಗೆ ಹೊಟ್ಟೆ‌ ತುಂಬಾ ಊಟ

ಕನ್ನಡಿಗರ ರಕ್ಷಣಾ ವೇದಿಕೆ(ಕನ್ನಡಿಗರ ಬಣ) ವತಿಯಿಂದ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆಗೆ ನಗರದ ಕನ್ನಡ ಜಾಗೃತ ಭವನದ ಬಳಿ ಚಾಲನೆ ನೀಡಲಾಯಿತು.

ನಗರದಲ್ಲಿನ ಬಡ ಬಗ್ಗರು, ಕೂಲಿ ಕಾರ್ಮಿಕರು, ನೇಕಾರ ಕಾರ್ಮಿಕರು, ತಾಲ್ಲೂಕು ಕಚೇರಿ, ಕೋರ್ಟ್ ಕೆಲಸಕ್ಕೆ ಬರುವಂತ ಗ್ರಾಮೀಣ ಭಾಗದ ಜನರಿಗೆ ಒಂದೊತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿ ಇದೆ. ಇದನ್ನು ಮನಗೊಂಡು ಉತ್ತಮ ಗುಣಮಟ್ಟದ ಆಹಾರವನ್ನು ಕೇವಲ 30ರೂ. ದರದಲ್ಲಿ ಎರಡು ಚಪಾತಿ, ಅನ್ನ-ಸಾರು, ಪಲ್ಯ, ಮಜ್ಜಿಗೆ ನೀಡಲಾಗುತ್ತಿದೆ. ಇತರೆ ಕಡೆಗಳಲ್ಲಿ ಊಟ ಬೇಕೆಂದರೆ ದುಬಾರಿ ದರ ತೆರಬೇಕು. ಹೆಚ್ಚು ಹಣ ಕೊಟ್ಟರೂ ಗುಣಮಟ್ಟ ಮಾತ್ರ ಅಷ್ಟಕ್ಕಷ್ಟೆ. ಆದರೆ ಇಲ್ಲಿ ಕಡಿಮೆ ದರದಲ್ಲಿ, ಗುಣಮಟ್ಟದ ಆಹಾರ ಪೂರೈಕೆಗೆ ಒತ್ತು ನೀಡಲಾಗುತ್ತಿದೆ.

ಪ್ರತಿನಿತ್ಯ ಅಡುಗೆ ಜವಾಬ್ದಾರಿ ವಹಿಸಿಕೊಂಡಿರುವ ಖಜಾಂಚಿ ಚೇತನ್ ಗೌಡ ಮಾತನಾಡಿ, ಕನಿಷ್ಠ ಬೆಲೆಗೆ ಸಾರ್ವಜನಿಕರಿಗೆ ಉತ್ತಮ ಗುಣಮಟ್ಡದ ಆಹಾರವನ್ನು ನೀಡಬೇಕು ಎಂಬ ಕಾರಣಕ್ಕೆ ಕೇವಲ 30ರೂ. ದರದಲ್ಲಿ ಎರಡು ಚಪಾತಿ, ಅನ್ನ-ಸಾರು, ಮಜ್ಜಿಗೆ ನೀಡಲಾಗುತ್ತಿದೆ. ಯಾವುದೇ ಲಾಭಕ್ಕಾಗಿ ಈ ಸಮಾಜಮುಖಿ ಕೆಲಸ ಮಾಡುತ್ತಿಲ್ಲ ಬದಲಾಗಿ ಬಡಬಗ್ಗರ ಹೊಟ್ಟೆ ತುಂಬಿಸುವ ಉದ್ದೇಶದಿಂದ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

14 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

14 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

2 days ago