ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆ: ಕೇವಲ 30ರೂ.ಗೆ ಹೊಟ್ಟೆ‌ ತುಂಬಾ ಊಟ

ಕನ್ನಡಿಗರ ರಕ್ಷಣಾ ವೇದಿಕೆ(ಕನ್ನಡಿಗರ ಬಣ) ವತಿಯಿಂದ ರಿಯಾಯಿತಿ ದರದಲ್ಲಿ ಊಟದ ವ್ಯವಸ್ಥೆಗೆ ನಗರದ ಕನ್ನಡ ಜಾಗೃತ ಭವನದ ಬಳಿ ಚಾಲನೆ ನೀಡಲಾಯಿತು.

ನಗರದಲ್ಲಿನ ಬಡ ಬಗ್ಗರು, ಕೂಲಿ ಕಾರ್ಮಿಕರು, ನೇಕಾರ ಕಾರ್ಮಿಕರು, ತಾಲ್ಲೂಕು ಕಚೇರಿ, ಕೋರ್ಟ್ ಕೆಲಸಕ್ಕೆ ಬರುವಂತ ಗ್ರಾಮೀಣ ಭಾಗದ ಜನರಿಗೆ ಒಂದೊತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿ ಇದೆ. ಇದನ್ನು ಮನಗೊಂಡು ಉತ್ತಮ ಗುಣಮಟ್ಟದ ಆಹಾರವನ್ನು ಕೇವಲ 30ರೂ. ದರದಲ್ಲಿ ಎರಡು ಚಪಾತಿ, ಅನ್ನ-ಸಾರು, ಪಲ್ಯ, ಮಜ್ಜಿಗೆ ನೀಡಲಾಗುತ್ತಿದೆ. ಇತರೆ ಕಡೆಗಳಲ್ಲಿ ಊಟ ಬೇಕೆಂದರೆ ದುಬಾರಿ ದರ ತೆರಬೇಕು. ಹೆಚ್ಚು ಹಣ ಕೊಟ್ಟರೂ ಗುಣಮಟ್ಟ ಮಾತ್ರ ಅಷ್ಟಕ್ಕಷ್ಟೆ. ಆದರೆ ಇಲ್ಲಿ ಕಡಿಮೆ ದರದಲ್ಲಿ, ಗುಣಮಟ್ಟದ ಆಹಾರ ಪೂರೈಕೆಗೆ ಒತ್ತು ನೀಡಲಾಗುತ್ತಿದೆ.

ಪ್ರತಿನಿತ್ಯ ಅಡುಗೆ ಜವಾಬ್ದಾರಿ ವಹಿಸಿಕೊಂಡಿರುವ ಖಜಾಂಚಿ ಚೇತನ್ ಗೌಡ ಮಾತನಾಡಿ, ಕನಿಷ್ಠ ಬೆಲೆಗೆ ಸಾರ್ವಜನಿಕರಿಗೆ ಉತ್ತಮ ಗುಣಮಟ್ಡದ ಆಹಾರವನ್ನು ನೀಡಬೇಕು ಎಂಬ ಕಾರಣಕ್ಕೆ ಕೇವಲ 30ರೂ. ದರದಲ್ಲಿ ಎರಡು ಚಪಾತಿ, ಅನ್ನ-ಸಾರು, ಮಜ್ಜಿಗೆ ನೀಡಲಾಗುತ್ತಿದೆ. ಯಾವುದೇ ಲಾಭಕ್ಕಾಗಿ ಈ ಸಮಾಜಮುಖಿ ಕೆಲಸ ಮಾಡುತ್ತಿಲ್ಲ ಬದಲಾಗಿ ಬಡಬಗ್ಗರ ಹೊಟ್ಟೆ ತುಂಬಿಸುವ ಉದ್ದೇಶದಿಂದ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ ಎಂದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

13 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

17 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

2 days ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

2 days ago