Categories: ಕೋಲಾರ

ರಿಯಾಲಿಟಿ ಶೋ ಮೂಲಕ ಈ ನೆಲದ ಸಂಸ್ಕೃತಿ ನಾಶವಾಗಿದೆ-ಗೊಲ್ಲಹಳ್ಳಿ ಶಿವಪ್ರಸಾದ್ ವಿಷಾದ

ಕೋಲಾರ: ಸಮಾಜದಲ್ಲಿ ರಿಯಾಲಿಟಿ ಶೋಗಳ ಮೂಲಕ ಜನಮಾನಸದಲ್ಲಿ ವಿಷಕಾರಿಯಾಗಿಬಿಟ್ಟಿದೆ ಜನಪದವು ಈ ನೆಲದ ಸಂಬಂಧಗಳನ್ನು ಬೆಸೆಯುವ ಸಂಸ್ಕೃತವನ್ನು ಹೊಸದಾಗಿ ಕಟ್ಟಿ ಮುಂದಿನ ಯುವ ಪೀಳಿಗೆಗೆ ತೋರಿಸಬೇಕಾದ ಅನಿವಾರ್ಯತೆ ಬಂದಿದೆ ಎಂದು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ವಿಷಾದ ವ್ಯಕ್ತಪಡಿಸಿದರು,

ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ರಾಜ್ಯ ಮಟ್ಟದ ಜನಪರ ಉತ್ಸವದ ಸಮಾರೋಪ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಅವರು ಪೂರ್ವಜರು ಮಾತಿನ ಮೂಲಕವೇ ಮನಸ್ಸಿಗೆ ಹತ್ತಿರವಾದ ಸಂಬಂಧಗಳನ್ನು ಕಟ್ಟಿದ್ದಾರೆ ಇವತ್ತು ನಮ್ಮ ನಡುವಿನ ಪೂರ್ವಜರು ಗೊತ್ತಿಲ್ಲ ಅದೇ ಸಿನಿಮಾ ನಟರು ಮಾತ್ರ ಎಲ್ಲರಿಗೂ ಗೊತ್ತಿದೆ ಮುಂದೊಂದು ದಿನ ನಮಗೆಲ್ಲ ಅಪಾಯಕಾರಿಯಾಗುತ್ತದೆ ಜನಪದ ಮೂಲಕ ಕಲಾವಿದರು ನಾಳೆಗೆ ಬಳ್ಳಿಯ ಮೂಲಕ ಹೊಸ ಭರವಸೆಯನ್ನು ಮೂಡಿಸಿ ಮುಂದಿನ ಪೀಳಿಗೆಗೆ ಕೊಡಬೇಕಾಗಿದೆ ಎಂದರು.

ಇವತ್ತಿನ ಕಲಾವಿದರು ಮಕ್ಕಳಂತೆ ಮುಗ್ಧತೆಯಿಂದ ಇರಬೇಕು‌ ಸಮಾಜವನ್ನು ಕಟ್ಟುವ ಕಡೆಗೆ ಕಲಾವಿದರು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎರಡು ದಿನಗಳ ಜಾನಪದ ಸಂಭ್ರಮದಲ್ಲಿ ಸಂಸ್ಕೃತಿಯ ನೈಜತೆಯ ಸಮಾಜವನ್ನು ಕಟ್ಟುವ ಜವಾಬ್ದಾರಿಯು ಇವತ್ತಿನ ಕಲಾವಿದರು ಕೈಯಲ್ಲಿದೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕಾಗಿದೆ ಕಲಾವಿದರು ಹಾಡು, ನಾಟಕ, ಹರಿಕಥೆ ಭಜನೆ ಮೂಲಕ ಸಮಾಜದಲ್ಲಿ ಉತ್ತಮ ಸಂದೇಶಗಳನ್ನು ನೀಡಬೇಕು ಎಂದರು.

ಕಲಾವಿದರು ಶರಣರು ಸಂತರ ಕಾಲದಿಂದಲೂ ಸಮಾಜಕ್ಕೆ ಕೊಡುಗೆ ಕೊಟ್ಟಿದ್ದಾರೆ ದಾರ್ಶನಿಕರ ನೆಲದಲ್ಲಿ ಜನಪದ ಇದೆ ಅದು ಮಾಯಾಲೋಕದಲ್ಲಿ ಸಿಲುಕಿ ಅಪಾಯಗಳನ್ನು ಎದುರಿಸಬೇಕಾಯಿತು ಜನಪದದ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಜನಪರ ಜೀವಪರ ಮನುಷ್ಯ ಪರವಾದ ಹಾಡುಗಳನ್ನು ಕೊಟ್ಟಿದ್ದಾರೆ ಕಲಾವಿದರಲ್ಲಿ ಮಗುವಾಗಿ ಮುಗ್ಧ ಪ್ರೀತಿ ಬರಬೇಕು ಕೇವಲ ಕೆಲವು ಗೂಟಕ್ಕೆ ಸೀಮಿತವಾಗಬಾರದು ಕಲಾವಿದರು ಇಲ್ಲದೇ ಜೀವಪರವಾರವಾಗಿರಲು ಸಾಧ್ಯವಿಲ್ಲ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಕಲಾವಿದರು ಸಮಾಜಕ್ಕೆ ಕೊಡುಗೆ ಕೊಟ್ಟಿದ್ದಾರೆ ಕಲೆ ಎಂಬುದು ನಮ್ಮ ಆಸ್ತಿಯಾಗಿದೆ ಅದನ್ನು ತೋರಿಸುವುದು ನಮ್ಮಂತವರ ಜವಾಬ್ದಾರಿಯಾಗಿದೆ ಜಿಲ್ಲೆಯಲ್ಲಿ ಇರುವ ಕಲಾವಿದರನ್ನು ಮತ್ತು ಕಲೆಯನ್ನು ಉಳಿಸಿ ಅಭಿವೃದ್ಧಿ ಮಾಡಬೇಕು ಕೋಲಾರ ಬಯಲುಸೀಮೆ ಪ್ರದೇಶವಾಗಿದೆ ಇಲ್ಲಿ ಕಲೆಗಳನ್ನು ಮರೆಯಬಾರದು ಮುಂದೆ ಕೆರೆ ಮತ್ತು ರಾಜಕಾಲುವೆ ಮರೆಯುವ ಪರಿಸ್ಥಿತಿ ಬರುತ್ತದೆ ಅಂತಹ ಸಂದರ್ಭ ಬರಬಾರದು ಕಲೆಯ ಉಳಿವಿಗೆ
ರಂಗಮಂದಿರದಲ್ಲಿ ವಾರಕ್ಕೊಮ್ಮೆ ಕಾರ್ಯಕ್ರಮ ಮಾಡಲಿ‌ ಜೊತೆಗೆ ಇದ್ದು ಪೋತ್ಸಾಹಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಸದ ಎಂ ಮಲ್ಲೇಶ್ ಬಾಬು ಮಾತನಾಡಿ ಕಲೆ ಎಂಬುದು ಎಲ್ಲರಿಗೂ ಬರುವುದಿಲ್ಲ ಕಲಾವಿದರನ್ನು ಪೋತ್ಸಾಹಿಸುವುದು ಕೂಡ ನಮ್ಮ ಜವಾಬ್ದಾರಿಯಾಗಬೇಕು ಜಿಲ್ಲೆಯ ಕಲಾವಿದರನ್ನು ಗುರುತಿಸಿ ಪೋತ್ಸಾಹಿಸಲು ಜಿಲ್ಲಾ ಕೇಂದ್ರದಲ್ಲಿ ಜಾನಪದ ಅಕಾಡೆಮಿಯ ಶಾಖೆಯನ್ನು ಪ್ರಾರಂಭ ಮಾಡುವಂತೆ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿದರು ಮೊಬೈಲ್ ಮಾಯಾಲೋಕದಲ್ಲಿ ಕಲೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮರೆಯಾಗಬಾರದು ಪ್ರತಿ ವರ್ಷ ಇಂತಹ ಆಚರಣೆ ನಡೆಯುವಂತಾಗಬೇಕು ಎಂದರು.

ಮಾಲೂರು ಕ್ಷೇತ್ರದ ಶಾಸಕ ಕೆ‌.ವೈ ನಂಜೇಗೌಡ ಮಾತನಾಡಿ ಜನಪರ ಉತ್ಸವ ಜಿಲ್ಲೆಗೆ ಕೊಟ್ಟ ಅವಕಾಶವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಲಾಗಿದೆ ಜನಪದ ಕಲೆ ಮರೆಯುವ ಸಂದರ್ಭದಲ್ಲಿ ಸರ್ಕಾರ ಅವಕಾಶ ಕೊಟ್ಟಿದೆ ಇಂತಹ ಕಲೆಗಳು ಹಿಂದಿನ ಕಾಲದಲ್ಲಿ ನೋಡಿದ್ದೇವೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಇತ್ತು ಇವತ್ತಿನ ಮಕ್ಕಳಿಗೆ ವೇದಿಕೆ ಮಾಡಿ ತೋರಿಸಬೇಕಾಗಿದೆ ಜಿಲ್ಲೆಯಲ್ಲಿ ಜನಪದ ಕಲಾವಿದರು ಹೆಚ್ಚು ಇದ್ದು ಜಿಲ್ಲೆಗೆ ಹೆಸರು ತಂದಿದ್ದಾರೆ ಪ್ರತಿ ಹಂತದಲ್ಲಿ ಕಲಾವಿದರಿಗೆ ಸಹಕಾರ ಕೊಡತ್ತೇನೆ ಎಂದರು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ, ಜಿಪಂ ಸಿಇಒ ಡಾ ಪ್ರವೀಣ್ ಬಾಗೇವಾಡಿ, ಎಸ್ಪಿ ಬಿ.ನಿಖಿಲ್, ಜಿಪಂ ಕಾರ್ಯದರ್ಶಿ ಶಿವಕುಮಾರ್, ಎಡಿಸಿ ಮಂಗಳಾ, ಎಸಿ ಡಾ ಮೈತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಛಲವಾದಿ, ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

6 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

22 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

23 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago