Categories: ಕೋಲಾರ

ರಿಯಾಲಿಟಿ ಶೋ ಮೂಲಕ ಈ ನೆಲದ ಸಂಸ್ಕೃತಿ ನಾಶವಾಗಿದೆ-ಗೊಲ್ಲಹಳ್ಳಿ ಶಿವಪ್ರಸಾದ್ ವಿಷಾದ

ಕೋಲಾರ: ಸಮಾಜದಲ್ಲಿ ರಿಯಾಲಿಟಿ ಶೋಗಳ ಮೂಲಕ ಜನಮಾನಸದಲ್ಲಿ ವಿಷಕಾರಿಯಾಗಿಬಿಟ್ಟಿದೆ ಜನಪದವು ಈ ನೆಲದ ಸಂಬಂಧಗಳನ್ನು ಬೆಸೆಯುವ ಸಂಸ್ಕೃತವನ್ನು ಹೊಸದಾಗಿ ಕಟ್ಟಿ ಮುಂದಿನ ಯುವ ಪೀಳಿಗೆಗೆ ತೋರಿಸಬೇಕಾದ ಅನಿವಾರ್ಯತೆ ಬಂದಿದೆ ಎಂದು ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ವಿಷಾದ ವ್ಯಕ್ತಪಡಿಸಿದರು,

ನಗರದ ಜೂನಿಯರ್ ಕಾಲೇಜ್ ಮೈದಾನದಲ್ಲಿ ರಾಜ್ಯ ಮಟ್ಟದ ಜನಪರ ಉತ್ಸವದ ಸಮಾರೋಪ ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಅವರು ಪೂರ್ವಜರು ಮಾತಿನ ಮೂಲಕವೇ ಮನಸ್ಸಿಗೆ ಹತ್ತಿರವಾದ ಸಂಬಂಧಗಳನ್ನು ಕಟ್ಟಿದ್ದಾರೆ ಇವತ್ತು ನಮ್ಮ ನಡುವಿನ ಪೂರ್ವಜರು ಗೊತ್ತಿಲ್ಲ ಅದೇ ಸಿನಿಮಾ ನಟರು ಮಾತ್ರ ಎಲ್ಲರಿಗೂ ಗೊತ್ತಿದೆ ಮುಂದೊಂದು ದಿನ ನಮಗೆಲ್ಲ ಅಪಾಯಕಾರಿಯಾಗುತ್ತದೆ ಜನಪದ ಮೂಲಕ ಕಲಾವಿದರು ನಾಳೆಗೆ ಬಳ್ಳಿಯ ಮೂಲಕ ಹೊಸ ಭರವಸೆಯನ್ನು ಮೂಡಿಸಿ ಮುಂದಿನ ಪೀಳಿಗೆಗೆ ಕೊಡಬೇಕಾಗಿದೆ ಎಂದರು.

ಇವತ್ತಿನ ಕಲಾವಿದರು ಮಕ್ಕಳಂತೆ ಮುಗ್ಧತೆಯಿಂದ ಇರಬೇಕು‌ ಸಮಾಜವನ್ನು ಕಟ್ಟುವ ಕಡೆಗೆ ಕಲಾವಿದರು ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಎರಡು ದಿನಗಳ ಜಾನಪದ ಸಂಭ್ರಮದಲ್ಲಿ ಸಂಸ್ಕೃತಿಯ ನೈಜತೆಯ ಸಮಾಜವನ್ನು ಕಟ್ಟುವ ಜವಾಬ್ದಾರಿಯು ಇವತ್ತಿನ ಕಲಾವಿದರು ಕೈಯಲ್ಲಿದೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕಾಗಿದೆ ಕಲಾವಿದರು ಹಾಡು, ನಾಟಕ, ಹರಿಕಥೆ ಭಜನೆ ಮೂಲಕ ಸಮಾಜದಲ್ಲಿ ಉತ್ತಮ ಸಂದೇಶಗಳನ್ನು ನೀಡಬೇಕು ಎಂದರು.

ಕಲಾವಿದರು ಶರಣರು ಸಂತರ ಕಾಲದಿಂದಲೂ ಸಮಾಜಕ್ಕೆ ಕೊಡುಗೆ ಕೊಟ್ಟಿದ್ದಾರೆ ದಾರ್ಶನಿಕರ ನೆಲದಲ್ಲಿ ಜನಪದ ಇದೆ ಅದು ಮಾಯಾಲೋಕದಲ್ಲಿ ಸಿಲುಕಿ ಅಪಾಯಗಳನ್ನು ಎದುರಿಸಬೇಕಾಯಿತು ಜನಪದದ ಮೂಲಕ ಉತ್ತಮ ಬದುಕು ಕಟ್ಟಿಕೊಳ್ಳಬೇಕು ಜನಪರ ಜೀವಪರ ಮನುಷ್ಯ ಪರವಾದ ಹಾಡುಗಳನ್ನು ಕೊಟ್ಟಿದ್ದಾರೆ ಕಲಾವಿದರಲ್ಲಿ ಮಗುವಾಗಿ ಮುಗ್ಧ ಪ್ರೀತಿ ಬರಬೇಕು ಕೇವಲ ಕೆಲವು ಗೂಟಕ್ಕೆ ಸೀಮಿತವಾಗಬಾರದು ಕಲಾವಿದರು ಇಲ್ಲದೇ ಜೀವಪರವಾರವಾಗಿರಲು ಸಾಧ್ಯವಿಲ್ಲ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ ಕಲಾವಿದರು ಸಮಾಜಕ್ಕೆ ಕೊಡುಗೆ ಕೊಟ್ಟಿದ್ದಾರೆ ಕಲೆ ಎಂಬುದು ನಮ್ಮ ಆಸ್ತಿಯಾಗಿದೆ ಅದನ್ನು ತೋರಿಸುವುದು ನಮ್ಮಂತವರ ಜವಾಬ್ದಾರಿಯಾಗಿದೆ ಜಿಲ್ಲೆಯಲ್ಲಿ ಇರುವ ಕಲಾವಿದರನ್ನು ಮತ್ತು ಕಲೆಯನ್ನು ಉಳಿಸಿ ಅಭಿವೃದ್ಧಿ ಮಾಡಬೇಕು ಕೋಲಾರ ಬಯಲುಸೀಮೆ ಪ್ರದೇಶವಾಗಿದೆ ಇಲ್ಲಿ ಕಲೆಗಳನ್ನು ಮರೆಯಬಾರದು ಮುಂದೆ ಕೆರೆ ಮತ್ತು ರಾಜಕಾಲುವೆ ಮರೆಯುವ ಪರಿಸ್ಥಿತಿ ಬರುತ್ತದೆ ಅಂತಹ ಸಂದರ್ಭ ಬರಬಾರದು ಕಲೆಯ ಉಳಿವಿಗೆ
ರಂಗಮಂದಿರದಲ್ಲಿ ವಾರಕ್ಕೊಮ್ಮೆ ಕಾರ್ಯಕ್ರಮ ಮಾಡಲಿ‌ ಜೊತೆಗೆ ಇದ್ದು ಪೋತ್ಸಾಹಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಸಂಸದ ಎಂ ಮಲ್ಲೇಶ್ ಬಾಬು ಮಾತನಾಡಿ ಕಲೆ ಎಂಬುದು ಎಲ್ಲರಿಗೂ ಬರುವುದಿಲ್ಲ ಕಲಾವಿದರನ್ನು ಪೋತ್ಸಾಹಿಸುವುದು ಕೂಡ ನಮ್ಮ ಜವಾಬ್ದಾರಿಯಾಗಬೇಕು ಜಿಲ್ಲೆಯ ಕಲಾವಿದರನ್ನು ಗುರುತಿಸಿ ಪೋತ್ಸಾಹಿಸಲು ಜಿಲ್ಲಾ ಕೇಂದ್ರದಲ್ಲಿ ಜಾನಪದ ಅಕಾಡೆಮಿಯ ಶಾಖೆಯನ್ನು ಪ್ರಾರಂಭ ಮಾಡುವಂತೆ ಸರ್ಕಾರ ಮತ್ತು ಜಿಲ್ಲಾಡಳಿತವನ್ನು ಒತ್ತಾಯಿಸಿದರು ಮೊಬೈಲ್ ಮಾಯಾಲೋಕದಲ್ಲಿ ಕಲೆ ಸಾಂಸ್ಕೃತಿಕ ಕಾರ್ಯಕ್ರಮಗಳು ಮರೆಯಾಗಬಾರದು ಪ್ರತಿ ವರ್ಷ ಇಂತಹ ಆಚರಣೆ ನಡೆಯುವಂತಾಗಬೇಕು ಎಂದರು.

ಮಾಲೂರು ಕ್ಷೇತ್ರದ ಶಾಸಕ ಕೆ‌.ವೈ ನಂಜೇಗೌಡ ಮಾತನಾಡಿ ಜನಪರ ಉತ್ಸವ ಜಿಲ್ಲೆಗೆ ಕೊಟ್ಟ ಅವಕಾಶವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಲಾಗಿದೆ ಜನಪದ ಕಲೆ ಮರೆಯುವ ಸಂದರ್ಭದಲ್ಲಿ ಸರ್ಕಾರ ಅವಕಾಶ ಕೊಟ್ಟಿದೆ ಇಂತಹ ಕಲೆಗಳು ಹಿಂದಿನ ಕಾಲದಲ್ಲಿ ನೋಡಿದ್ದೇವೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ಇತ್ತು ಇವತ್ತಿನ ಮಕ್ಕಳಿಗೆ ವೇದಿಕೆ ಮಾಡಿ ತೋರಿಸಬೇಕಾಗಿದೆ ಜಿಲ್ಲೆಯಲ್ಲಿ ಜನಪದ ಕಲಾವಿದರು ಹೆಚ್ಚು ಇದ್ದು ಜಿಲ್ಲೆಗೆ ಹೆಸರು ತಂದಿದ್ದಾರೆ ಪ್ರತಿ ಹಂತದಲ್ಲಿ ಕಲಾವಿದರಿಗೆ ಸಹಕಾರ ಕೊಡತ್ತೇನೆ ಎಂದರು.

ವೇದಿಕೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್ ರವಿ, ಜಿಪಂ ಸಿಇಒ ಡಾ ಪ್ರವೀಣ್ ಬಾಗೇವಾಡಿ, ಎಸ್ಪಿ ಬಿ.ನಿಖಿಲ್, ಜಿಪಂ ಕಾರ್ಯದರ್ಶಿ ಶಿವಕುಮಾರ್, ಎಡಿಸಿ ಮಂಗಳಾ, ಎಸಿ ಡಾ ಮೈತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ ಛಲವಾದಿ, ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಮುಂತಾದವರು ಇದ್ದರು.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

7 minutes ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

23 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago