ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ

 

ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಇಲ್ಲಿ‌ನ‌ ತಯಾರಿಕಾ ಘಟಕದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ ಮತ್ತು ಸುಸ್ಥಿರಗೊಳಿಸುವಂತಹ ಇಂತಹ ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ಆಗತೊಡಗಿರುವುದು ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಒಂದು ಉಜ್ಜ್ವಲ ಅಧ್ಯಾಯವಾಗಿದೆ. ಇದು ರಾಜ್ಯವು ಭವಿಷ್ಯದ ಸಂಚಾರ ವ್ಯವಸ್ಥೆಯ ನಿರ್ಮಾಣದ ಸರಿಯಾದ ಪಥದಲ್ಲಿ ಸಾಗುತ್ತಿರುವುದಕ್ಕೆ ಅತ್ಯುತ್ತಮ‌ ನಿದರ್ಶನವಾಗಿದೆ’ ಎಂದು ಬಣ್ಣಿಸಿದ್ದಾರೆ. ಇದೇ ವೇಳೆಯಲ್ಲಿ ಅವರು ಕಂಪನಿಯ ತಯಾರಿಕಾ ವ್ಯವಸ್ಥೆ ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು.

ಈ ಘಟಕದಲ್ಲಿ ವರ್ಷಕ್ಕೆ ಇಂತಹ ಉತ್ಕೃಷ್ಟ ಗುಣಮಟ್ಟದ 2 ಸಾವಿರ ಇ.ವಿ. ಬೈಕ್ ತಯಾರಿಸಲಾಗುವುದು. ಇವಕ್ಕೆ ಇಲ್ಲೇ ತಯಾರಿಸುವ ಬ್ಯಾಟರಿ ಅಳವಡಿಸಲಾಗುವುದು. ಇದು 1 ಲಕ್ಷ ಕಿ.ಮೀ. ವರೆಗೂ ವಾಹನ ಓಡಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕೆ 10 ವರ್ಷಗಳ ವಾರಂಟಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಉತ್ಪಾದನೆಯಿಂದ ವ್ಯಾಪಕ ಆರ್ಥಿಕ ಮೌಲ್ಯವೂ ಸೃಷ್ಟಿಯಾಗಲಿದೆ. ಇದು ಕೌಶಲ್ಯಪೂರ್ಣ ಉದ್ಯೋಗಗಳ ಸೃಷ್ಟಿ, ಸ್ಥಳೀಯ ಪೂರೈಕೆ ಸರಪಳಿ ಬಲವರ್ಧನೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾಲಿಗೆ ಸದವಕಾಶ ಇವೆಲ್ಲವನ್ನೂ ಸಾಧ್ಯವಾಗಿಸಲಿದೆ ಎಂದು ಅವರು ವಿವರಿಸಿದ್ದಾರೆ.

ವಾಹನ ಮಾರುಕಟ್ಟೆ ಈಗ ವಿದ್ಯುತ್ ಚಾಲಿತ ವಾಹನಗಳತ್ತ ಹೋಗುತ್ತಿದೆ. ರಾಜ್ಯದಲ್ಲಿ ಕೂಡ ಇದನ್ನು ಗಮನಿಸಿ, ಈಗಾಗಲೇ ಸಾವಿರಾರು ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇವುಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಲಾಗುವುದು. ಇದು ಇ.ವಿ. ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಸರಕಾರವು ಹೊಂದಿರುವ ಬದ್ಧತೆಯನ್ನು ಸೂಚಿಸುತ್ತದೆ ಎಂದು ಪಾಟೀಲ ಹೇಳಿದ್ದಾರೆ.

ಸಚಿವರು ಇಡೀ ಕಾರ್ಖಾನೆಯಲ್ಲಿ ಓಡಾಡಿ, ಬೈಕ್ ತಯಾರಿಕೆಯನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಯಮಾಹಾ ಇಂಡಿಯಾ ಅಧ್ಯಕ್ಷ ಜಿಮ್ ಅಯೋಟಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ರಿವರ್ ಸಿಇಒ ಅರವಿಂದ ಮಣಿ, ಸಹ ಸಂಸ್ಥಾಪಕ ವಿಪಿನ್ ಜಾರ್ಜ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

15 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

16 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

21 hours ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

22 hours ago

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನರಸಿಂಹ ಮೂರ್ತಿ ನೇಮಕ

ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…

1 day ago

ಪ್ರತಿಯೊಬ್ಬ ಭಾರತೀಯನ ತಲೆ ಮೇಲೆ ರೂ. 4.8 ಲಕ್ಷದಷ್ಟು ಸಾಲದ ಹೊರೆ ಇದೆ- ಸಿಎಂ‌ ಸಿದ್ದರಾಮಯ್ಯ

ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…

2 days ago