ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ

 

ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಇಲ್ಲಿ‌ನ‌ ತಯಾರಿಕಾ ಘಟಕದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ ಮತ್ತು ಸುಸ್ಥಿರಗೊಳಿಸುವಂತಹ ಇಂತಹ ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ಆಗತೊಡಗಿರುವುದು ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಒಂದು ಉಜ್ಜ್ವಲ ಅಧ್ಯಾಯವಾಗಿದೆ. ಇದು ರಾಜ್ಯವು ಭವಿಷ್ಯದ ಸಂಚಾರ ವ್ಯವಸ್ಥೆಯ ನಿರ್ಮಾಣದ ಸರಿಯಾದ ಪಥದಲ್ಲಿ ಸಾಗುತ್ತಿರುವುದಕ್ಕೆ ಅತ್ಯುತ್ತಮ‌ ನಿದರ್ಶನವಾಗಿದೆ’ ಎಂದು ಬಣ್ಣಿಸಿದ್ದಾರೆ. ಇದೇ ವೇಳೆಯಲ್ಲಿ ಅವರು ಕಂಪನಿಯ ತಯಾರಿಕಾ ವ್ಯವಸ್ಥೆ ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು.

ಈ ಘಟಕದಲ್ಲಿ ವರ್ಷಕ್ಕೆ ಇಂತಹ ಉತ್ಕೃಷ್ಟ ಗುಣಮಟ್ಟದ 2 ಸಾವಿರ ಇ.ವಿ. ಬೈಕ್ ತಯಾರಿಸಲಾಗುವುದು. ಇವಕ್ಕೆ ಇಲ್ಲೇ ತಯಾರಿಸುವ ಬ್ಯಾಟರಿ ಅಳವಡಿಸಲಾಗುವುದು. ಇದು 1 ಲಕ್ಷ ಕಿ.ಮೀ. ವರೆಗೂ ವಾಹನ ಓಡಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕೆ 10 ವರ್ಷಗಳ ವಾರಂಟಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಉತ್ಪಾದನೆಯಿಂದ ವ್ಯಾಪಕ ಆರ್ಥಿಕ ಮೌಲ್ಯವೂ ಸೃಷ್ಟಿಯಾಗಲಿದೆ. ಇದು ಕೌಶಲ್ಯಪೂರ್ಣ ಉದ್ಯೋಗಗಳ ಸೃಷ್ಟಿ, ಸ್ಥಳೀಯ ಪೂರೈಕೆ ಸರಪಳಿ ಬಲವರ್ಧನೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾಲಿಗೆ ಸದವಕಾಶ ಇವೆಲ್ಲವನ್ನೂ ಸಾಧ್ಯವಾಗಿಸಲಿದೆ ಎಂದು ಅವರು ವಿವರಿಸಿದ್ದಾರೆ.

ವಾಹನ ಮಾರುಕಟ್ಟೆ ಈಗ ವಿದ್ಯುತ್ ಚಾಲಿತ ವಾಹನಗಳತ್ತ ಹೋಗುತ್ತಿದೆ. ರಾಜ್ಯದಲ್ಲಿ ಕೂಡ ಇದನ್ನು ಗಮನಿಸಿ, ಈಗಾಗಲೇ ಸಾವಿರಾರು ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇವುಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಲಾಗುವುದು. ಇದು ಇ.ವಿ. ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಸರಕಾರವು ಹೊಂದಿರುವ ಬದ್ಧತೆಯನ್ನು ಸೂಚಿಸುತ್ತದೆ ಎಂದು ಪಾಟೀಲ ಹೇಳಿದ್ದಾರೆ.

ಸಚಿವರು ಇಡೀ ಕಾರ್ಖಾನೆಯಲ್ಲಿ ಓಡಾಡಿ, ಬೈಕ್ ತಯಾರಿಕೆಯನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಯಮಾಹಾ ಇಂಡಿಯಾ ಅಧ್ಯಕ್ಷ ಜಿಮ್ ಅಯೋಟಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ರಿವರ್ ಸಿಇಒ ಅರವಿಂದ ಮಣಿ, ಸಹ ಸಂಸ್ಥಾಪಕ ವಿಪಿನ್ ಜಾರ್ಜ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

5 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

6 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago