ರಿವರ್ ಮೊಬಿಲಿಟಿ ತಯಾರಿಕೆಯ ವಿದ್ಯುತ್ ಚಾಲಿತ ಯಮಾಹಾ ಇಸಿ-06 ಬೈಕ್ ಹಸ್ತಾಂತರ

 

ಹೊಸಕೋಟೆ: ಸ್ಥಳೀಯವಾಗಿ ಉತ್ಪಾದನೆಯನ್ನು ಸಾಧ್ಯವಾಗಿಸುವ ಕೈಗಾರಿಕಾ ಸಹಭಾಗಿತ್ವದ ಅಡಿ ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ಅನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಇಲ್ಲಿ‌ನ‌ ತಯಾರಿಕಾ ಘಟಕದಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ ಮತ್ತು ಸುಸ್ಥಿರಗೊಳಿಸುವಂತಹ ಇಂತಹ ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ಆಗತೊಡಗಿರುವುದು ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಒಂದು ಉಜ್ಜ್ವಲ ಅಧ್ಯಾಯವಾಗಿದೆ. ಇದು ರಾಜ್ಯವು ಭವಿಷ್ಯದ ಸಂಚಾರ ವ್ಯವಸ್ಥೆಯ ನಿರ್ಮಾಣದ ಸರಿಯಾದ ಪಥದಲ್ಲಿ ಸಾಗುತ್ತಿರುವುದಕ್ಕೆ ಅತ್ಯುತ್ತಮ‌ ನಿದರ್ಶನವಾಗಿದೆ’ ಎಂದು ಬಣ್ಣಿಸಿದ್ದಾರೆ. ಇದೇ ವೇಳೆಯಲ್ಲಿ ಅವರು ಕಂಪನಿಯ ತಯಾರಿಕಾ ವ್ಯವಸ್ಥೆ ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು.

ಈ ಘಟಕದಲ್ಲಿ ವರ್ಷಕ್ಕೆ ಇಂತಹ ಉತ್ಕೃಷ್ಟ ಗುಣಮಟ್ಟದ 2 ಸಾವಿರ ಇ.ವಿ. ಬೈಕ್ ತಯಾರಿಸಲಾಗುವುದು. ಇವಕ್ಕೆ ಇಲ್ಲೇ ತಯಾರಿಸುವ ಬ್ಯಾಟರಿ ಅಳವಡಿಸಲಾಗುವುದು. ಇದು 1 ಲಕ್ಷ ಕಿ.ಮೀ. ವರೆಗೂ ವಾಹನ ಓಡಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕೆ 10 ವರ್ಷಗಳ ವಾರಂಟಿ ಇರಲಿದೆ ಎಂದು ಅವರು ತಿಳಿಸಿದ್ದಾರೆ.

ಸ್ಥಳೀಯ ಉತ್ಪಾದನೆಯಿಂದ ವ್ಯಾಪಕ ಆರ್ಥಿಕ ಮೌಲ್ಯವೂ ಸೃಷ್ಟಿಯಾಗಲಿದೆ. ಇದು ಕೌಶಲ್ಯಪೂರ್ಣ ಉದ್ಯೋಗಗಳ ಸೃಷ್ಟಿ, ಸ್ಥಳೀಯ ಪೂರೈಕೆ ಸರಪಳಿ ಬಲವರ್ಧನೆ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾಲಿಗೆ ಸದವಕಾಶ ಇವೆಲ್ಲವನ್ನೂ ಸಾಧ್ಯವಾಗಿಸಲಿದೆ ಎಂದು ಅವರು ವಿವರಿಸಿದ್ದಾರೆ.

ವಾಹನ ಮಾರುಕಟ್ಟೆ ಈಗ ವಿದ್ಯುತ್ ಚಾಲಿತ ವಾಹನಗಳತ್ತ ಹೋಗುತ್ತಿದೆ. ರಾಜ್ಯದಲ್ಲಿ ಕೂಡ ಇದನ್ನು ಗಮನಿಸಿ, ಈಗಾಗಲೇ ಸಾವಿರಾರು ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲಾಗಿದೆ. ಇವುಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಲಾಗುವುದು. ಇದು ಇ.ವಿ. ವಲಯದ ಮೂಲಸೌಕರ್ಯ ಅಭಿವೃದ್ಧಿಗೆ ಸರಕಾರವು ಹೊಂದಿರುವ ಬದ್ಧತೆಯನ್ನು ಸೂಚಿಸುತ್ತದೆ ಎಂದು ಪಾಟೀಲ ಹೇಳಿದ್ದಾರೆ.

ಸಚಿವರು ಇಡೀ ಕಾರ್ಖಾನೆಯಲ್ಲಿ ಓಡಾಡಿ, ಬೈಕ್ ತಯಾರಿಕೆಯನ್ನು ವೀಕ್ಷಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಮತ್ತು ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಯಮಾಹಾ ಇಂಡಿಯಾ ಅಧ್ಯಕ್ಷ ಜಿಮ್ ಅಯೋಟಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ರಿವರ್ ಸಿಇಒ ಅರವಿಂದ ಮಣಿ, ಸಹ ಸಂಸ್ಥಾಪಕ ವಿಪಿನ್ ಜಾರ್ಜ್ ಮುಂತಾದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

4 minutes ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

11 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

12 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

12 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

20 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

22 hours ago