Categories: ಕೊಡಗು

ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆ ಯತ್ನ: ತಾಯಿ, ಮಗ ಅಂದರ್

ಕೊಡಗಿನ ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದ ರೋಷನ್ ಕುಮಾರ್ ಎಂಬಿಬ್ಬರು ಸಹೋದರರ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪಿಗಳಾದ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಿ.ಪಿ. ಸಚಿನ್ ಕುಮಾರ್ ರವರು ದಿನಾಂಕ 13-05-2025 ರಂದು ಮಧ್ಯಾಹ್ನ 4.30 ಗಂಟೆಗೆ ಮನೆಯಲ್ಲಿದ್ದಾಗ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಕಾರಿನಲ್ಲಿ ಬಂದಿದ್ದಾರೆ. ನಿನ್ನೊಂದಿಗೆ ಮಾತನಾಡಬೇಕು ಎಂದು ಸಚಿನ್ ಕುಮಾರ್ ರವರನ್ನು ಕರೆದಿದ್ದಾರೆ. ಮನೆಯಿಂದ ಹೊರಗೆ ಬಂದ ಸಚಿನ್ ಕುಮಾರ್ ಜೊತೆ ಟಿಮ್ಸ್ ಜಗಳ ನಿರತನಾಗಿದ್ದಾನೆ. ಜೋರಾದ ಬೊಬ್ಬೆ ಶಬ್ದವನ್ನು ಕೇಳಿ ಸಚಿನ್ ಕುಮಾರ್ ರವರ ಚಿಕ್ಕಪ್ಪನ ಮಗನಾದ ರೋಷನ್ ಕುಮಾರ್ ಸ್ಥಳಕ್ಕೆ ಬಂದಿದ್ದಾರೆ. ಅವರಿಗೆ ಟಿಮ್ಸ ನಿಂದಿಸಿ ತಲೆಗೆ ಹೊಡೆದಿದ್ದು, ಆತನ ತಾಯಿ ಜ್ಯೋತಿ ಸಚಿನ್ ಕುಮಾರ್ ರವರ ಎಡ ಬೆನ್ನಿಗೆ ಕಚ್ಚಿದ್ದಾರೆ. ನಂತರ ಟಿಮ್ಸ ಕಾರಿನಲ್ಲಿದ್ದ ರಿವಾಲ್ವಾರ್ ತಂದು ಏಕಾಏಕಿ ಸಚಿನ್ ಕುಮಾರ್ ರವರ ಬಲಗಾಲಿಗೆ ಮತ್ತು ರೋಷನ್ ಕುಮಾರ್ ರವರ ಎಡ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಇವರಿಬ್ಬರ ವಿರುದ್ಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ವಿರಾಜಪೇಟೆ ಉಪವಿಭಾಗದ ಡಿಎಸ್ಪಿ ಮಹೇಶ್ ಕುಮಾರ್, ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಶ್ರೀಮಂಗಲ ಸಬ್ ಇನ್ಸ್ ಪೆಕ್ಟರ್ ರವೀಂದ್ರ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿ ದಿನಾಂಕ 14-05-2025ರಂದು ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಆರೋಪಿಗಳಾದ ಟಿಮ್ಸ ಮತ್ತು ಜ್ಯೋತಿ ಆಸ್ತಿ ವಿಚಾರವಾಗಿ ಜಗಳವಾಡಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

*ಘಟನೆಗೆ ಕಾರಣ*

ಕಳೆದ ಹಲವಾರು ವರ್ಷಗಳಿಂದ ಆಸ್ತಿ ಸಂಬಂಧವಾಗಿ ಎರಡು ಕಡೆ ವಾದ ವಿವಾದಗಳು ಏರ್ಪಟ್ಟು, ಗಾಯಾಳುಗಳ ತಂದೆಯವರಾದ ಪೂವಪ್ಪನವರು , ಟಿಮ್ಸ್ ಅವರಿಗೆ ಕಂದಾಯ ಇಲಾಖೆ ದಾಖಲಾತಿಗಳಿಗೆ ಸಹಿ ಹಾಕಿಕೊಡದೆ ಕಿರುಕುಳ ನೀಡುತ್ತಿದ್ದರು. ಹಲವು ಬಾರಿ ಈ ಬಗ್ಗೆ ಕೇಳಿಕೊಂಡರು ಸ್ಪಂದಿಸದೆ ಇದ್ದಾಗ, ಮೊನ್ನೆ ಈ ಬಗೆ ಮತ್ತೊಮ್ಮೆ ಮನೆಯ ಬಳಿಗೆ ತಾಯಿ ಮಗ ತೆರಳಿ ಕೇಳಿಕೊಂಡಾಗಲೂ ಕೂಡ ಸ್ಪಂದಿಸದ ಇದ್ದಾಗ, ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ ಎಂದು ಈ ವಿಚಾರ ಬಲ್ಲವರು ಹಲವರು ಹೇಳಿಕೊಂಡಿದ್ದಾರೆ.

Ramesh Babu

Journalist

Recent Posts

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ…

3 hours ago

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

18 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

1 day ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

1 day ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

2 days ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

2 days ago