ಕೊಡಗಿನ ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದ ರೋಷನ್ ಕುಮಾರ್ ಎಂಬಿಬ್ಬರು ಸಹೋದರರ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪಿಗಳಾದ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿ.ಪಿ. ಸಚಿನ್ ಕುಮಾರ್ ರವರು ದಿನಾಂಕ 13-05-2025 ರಂದು ಮಧ್ಯಾಹ್ನ 4.30 ಗಂಟೆಗೆ ಮನೆಯಲ್ಲಿದ್ದಾಗ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಕಾರಿನಲ್ಲಿ ಬಂದಿದ್ದಾರೆ. ನಿನ್ನೊಂದಿಗೆ ಮಾತನಾಡಬೇಕು ಎಂದು ಸಚಿನ್ ಕುಮಾರ್ ರವರನ್ನು ಕರೆದಿದ್ದಾರೆ. ಮನೆಯಿಂದ ಹೊರಗೆ ಬಂದ ಸಚಿನ್ ಕುಮಾರ್ ಜೊತೆ ಟಿಮ್ಸ್ ಜಗಳ ನಿರತನಾಗಿದ್ದಾನೆ. ಜೋರಾದ ಬೊಬ್ಬೆ ಶಬ್ದವನ್ನು ಕೇಳಿ ಸಚಿನ್ ಕುಮಾರ್ ರವರ ಚಿಕ್ಕಪ್ಪನ ಮಗನಾದ ರೋಷನ್ ಕುಮಾರ್ ಸ್ಥಳಕ್ಕೆ ಬಂದಿದ್ದಾರೆ. ಅವರಿಗೆ ಟಿಮ್ಸ ನಿಂದಿಸಿ ತಲೆಗೆ ಹೊಡೆದಿದ್ದು, ಆತನ ತಾಯಿ ಜ್ಯೋತಿ ಸಚಿನ್ ಕುಮಾರ್ ರವರ ಎಡ ಬೆನ್ನಿಗೆ ಕಚ್ಚಿದ್ದಾರೆ. ನಂತರ ಟಿಮ್ಸ ಕಾರಿನಲ್ಲಿದ್ದ ರಿವಾಲ್ವಾರ್ ತಂದು ಏಕಾಏಕಿ ಸಚಿನ್ ಕುಮಾರ್ ರವರ ಬಲಗಾಲಿಗೆ ಮತ್ತು ರೋಷನ್ ಕುಮಾರ್ ರವರ ಎಡ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಇವರಿಬ್ಬರ ವಿರುದ್ಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ವಿರಾಜಪೇಟೆ ಉಪವಿಭಾಗದ ಡಿಎಸ್ಪಿ ಮಹೇಶ್ ಕುಮಾರ್, ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಶ್ರೀಮಂಗಲ ಸಬ್ ಇನ್ಸ್ ಪೆಕ್ಟರ್ ರವೀಂದ್ರ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿ ದಿನಾಂಕ 14-05-2025ರಂದು ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳಾದ ಟಿಮ್ಸ ಮತ್ತು ಜ್ಯೋತಿ ಆಸ್ತಿ ವಿಚಾರವಾಗಿ ಜಗಳವಾಡಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
*ಘಟನೆಗೆ ಕಾರಣ*
ಕಳೆದ ಹಲವಾರು ವರ್ಷಗಳಿಂದ ಆಸ್ತಿ ಸಂಬಂಧವಾಗಿ ಎರಡು ಕಡೆ ವಾದ ವಿವಾದಗಳು ಏರ್ಪಟ್ಟು, ಗಾಯಾಳುಗಳ ತಂದೆಯವರಾದ ಪೂವಪ್ಪನವರು , ಟಿಮ್ಸ್ ಅವರಿಗೆ ಕಂದಾಯ ಇಲಾಖೆ ದಾಖಲಾತಿಗಳಿಗೆ ಸಹಿ ಹಾಕಿಕೊಡದೆ ಕಿರುಕುಳ ನೀಡುತ್ತಿದ್ದರು. ಹಲವು ಬಾರಿ ಈ ಬಗ್ಗೆ ಕೇಳಿಕೊಂಡರು ಸ್ಪಂದಿಸದೆ ಇದ್ದಾಗ, ಮೊನ್ನೆ ಈ ಬಗೆ ಮತ್ತೊಮ್ಮೆ ಮನೆಯ ಬಳಿಗೆ ತಾಯಿ ಮಗ ತೆರಳಿ ಕೇಳಿಕೊಂಡಾಗಲೂ ಕೂಡ ಸ್ಪಂದಿಸದ ಇದ್ದಾಗ, ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ ಎಂದು ಈ ವಿಚಾರ ಬಲ್ಲವರು ಹಲವರು ಹೇಳಿಕೊಂಡಿದ್ದಾರೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…