ಕೊಡಗಿನ ಶ್ರೀಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳೂರು ಗ್ರಾಮದ ರೋಷನ್ ಕುಮಾರ್ ಎಂಬಿಬ್ಬರು ಸಹೋದರರ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪಿಗಳಾದ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಅವರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿ.ಪಿ. ಸಚಿನ್ ಕುಮಾರ್ ರವರು ದಿನಾಂಕ 13-05-2025 ರಂದು ಮಧ್ಯಾಹ್ನ 4.30 ಗಂಟೆಗೆ ಮನೆಯಲ್ಲಿದ್ದಾಗ ಬಾಳೇರ ಟಿಮ್ಸನ್ ಮತ್ತು ಈತನ ತಾಯಿ ಬಾಳೇರ ಜ್ಯೋತಿ ಕಾರಿನಲ್ಲಿ ಬಂದಿದ್ದಾರೆ. ನಿನ್ನೊಂದಿಗೆ ಮಾತನಾಡಬೇಕು ಎಂದು ಸಚಿನ್ ಕುಮಾರ್ ರವರನ್ನು ಕರೆದಿದ್ದಾರೆ. ಮನೆಯಿಂದ ಹೊರಗೆ ಬಂದ ಸಚಿನ್ ಕುಮಾರ್ ಜೊತೆ ಟಿಮ್ಸ್ ಜಗಳ ನಿರತನಾಗಿದ್ದಾನೆ. ಜೋರಾದ ಬೊಬ್ಬೆ ಶಬ್ದವನ್ನು ಕೇಳಿ ಸಚಿನ್ ಕುಮಾರ್ ರವರ ಚಿಕ್ಕಪ್ಪನ ಮಗನಾದ ರೋಷನ್ ಕುಮಾರ್ ಸ್ಥಳಕ್ಕೆ ಬಂದಿದ್ದಾರೆ. ಅವರಿಗೆ ಟಿಮ್ಸ ನಿಂದಿಸಿ ತಲೆಗೆ ಹೊಡೆದಿದ್ದು, ಆತನ ತಾಯಿ ಜ್ಯೋತಿ ಸಚಿನ್ ಕುಮಾರ್ ರವರ ಎಡ ಬೆನ್ನಿಗೆ ಕಚ್ಚಿದ್ದಾರೆ. ನಂತರ ಟಿಮ್ಸ ಕಾರಿನಲ್ಲಿದ್ದ ರಿವಾಲ್ವಾರ್ ತಂದು ಏಕಾಏಕಿ ಸಚಿನ್ ಕುಮಾರ್ ರವರ ಬಲಗಾಲಿಗೆ ಮತ್ತು ರೋಷನ್ ಕುಮಾರ್ ರವರ ಎಡ ಕುತ್ತಿಗೆ ಭಾಗಕ್ಕೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಇವರಿಬ್ಬರ ವಿರುದ್ಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ವಿರಾಜಪೇಟೆ ಉಪವಿಭಾಗದ ಡಿಎಸ್ಪಿ ಮಹೇಶ್ ಕುಮಾರ್, ಕುಟ್ಟ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಸ್. ಶಿವರುದ್ರ, ಶ್ರೀಮಂಗಲ ಸಬ್ ಇನ್ಸ್ ಪೆಕ್ಟರ್ ರವೀಂದ್ರ, ಅಪರಾಧ ಪತ್ತೆ ಸಿಬ್ಬಂದಿಗಳು ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಳ್ಳಲಾಗಿ ದಿನಾಂಕ 14-05-2025ರಂದು ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಆರೋಪಿಗಳಾದ ಟಿಮ್ಸ ಮತ್ತು ಜ್ಯೋತಿ ಆಸ್ತಿ ವಿಚಾರವಾಗಿ ಜಗಳವಾಡಿ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
*ಘಟನೆಗೆ ಕಾರಣ*
ಕಳೆದ ಹಲವಾರು ವರ್ಷಗಳಿಂದ ಆಸ್ತಿ ಸಂಬಂಧವಾಗಿ ಎರಡು ಕಡೆ ವಾದ ವಿವಾದಗಳು ಏರ್ಪಟ್ಟು, ಗಾಯಾಳುಗಳ ತಂದೆಯವರಾದ ಪೂವಪ್ಪನವರು , ಟಿಮ್ಸ್ ಅವರಿಗೆ ಕಂದಾಯ ಇಲಾಖೆ ದಾಖಲಾತಿಗಳಿಗೆ ಸಹಿ ಹಾಕಿಕೊಡದೆ ಕಿರುಕುಳ ನೀಡುತ್ತಿದ್ದರು. ಹಲವು ಬಾರಿ ಈ ಬಗ್ಗೆ ಕೇಳಿಕೊಂಡರು ಸ್ಪಂದಿಸದೆ ಇದ್ದಾಗ, ಮೊನ್ನೆ ಈ ಬಗೆ ಮತ್ತೊಮ್ಮೆ ಮನೆಯ ಬಳಿಗೆ ತಾಯಿ ಮಗ ತೆರಳಿ ಕೇಳಿಕೊಂಡಾಗಲೂ ಕೂಡ ಸ್ಪಂದಿಸದ ಇದ್ದಾಗ, ಮಾತಿಗೆ ಮಾತು ಬೆಳೆದು ಈ ಘಟನೆ ನಡೆದಿದೆ ಎಂದು ಈ ವಿಚಾರ ಬಲ್ಲವರು ಹಲವರು ಹೇಳಿಕೊಂಡಿದ್ದಾರೆ.
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…