ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್ ಮಾಡಿದ ತಪ್ಪಿಗೆ ಪೊಲೀಸರಿಗೆ ಫೈನ್ ಕಟ್ಟಿದ್ದಾನೆ.

ದೊಡ್ಡಬಳ್ಳಾಪುರದ ಈ ಮಂಜುನಾಥ್ ರೀಲ್ಸ್ ಮಾಡುತ್ತಾ… ಸಾಮಾಜಿಕ ಜಾಲತಾಣಗಳಲ್ಲಿ ಪರಿಚಿತರಾಗಿದ್ದಾನೆ, ರೀಲ್ಸ್ ಗಳಲ್ಲಿ “ಬನ್ರೋ” ಎನ್ನುವ ಮೂಲಕ ಪ್ರಸಿದ್ಧಿಯಾಗಿದ್ದಾನೆ. ಇದೀಗ ಇದೇ ರೀಲ್ಸ್ ಮಂಜಣ್ಣ ರೀಲ್ಸ್ ಮಾಡುವ ಇಬ್ಬರು ಮಹಿಳೆಯರ ಜೊತೆಯಲ್ಲಿ ಹೆಲ್ಮೆಟ್ ಇಲ್ಲದೇ ತ್ರಿಬಲ್ ರೈಡಿಂಗ್ ಮಾಡಿದ್ದ ರೀಲ್ಸ್ ನ್ನು ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಇದನ್ನು ಗಮನಿಸಿದ‌ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು… ಕೂಡಲೇ ಠಾಣೆಗೆ ಕರೆಸಿ ರೀಲ್ಸ್ ಮಂಜಣ್ಣನಿಗೆ ಫೈನ್ ಹಾಕಿದ್ದಾರೆ….ಇನ್ನು ಮುಂದೆ ಸಂಚಾರಿ ನಿಯಮಗಳನ್ನು ಪಾಲಿಸದಿದ್ದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ… ಇದರ ಜೊತೆಗೆ ರೀಲ್ಸ್ ಮಂಜಣ್ಣನು ಸಹ ತಾನು ಮಾಡಿರುವ ತಪ್ಪಿನ ಅರಿವಾಗಿ ಕ್ಷಮೆ ಕೇಳಿದ್ದಾನೆ…

ಫೈನ್ ಕಟ್ಟಿದ ನಂತರ, ಹೆಲ್ಮೆಟ್ ಹಾಕದೆ ತ್ರಿಬಲ್ ರೈಡಿಂಗ್ ಮಾಡಿದ್ದು ನನ್ನ ತಪ್ಪು, ಮನೆಯಲ್ಲಿ ನಮ್ಮನ್ನೇ ನಂಬಿರುವ ಜನರಿದ್ದಾರೆ, ಸುರಕ್ಷಿತ ಚಾಲನೆಗೆ ಹೆಲ್ಮೆಟ್ ಧರಿಸಿ ಎಂದು ಜನರಿಗೆ ರೀಲ್ಸ್ ಮಂಜಣ್ಣ ಮನವಿ ಮಾಡಿದ್ದಾನೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

8 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

14 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

20 hours ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

21 hours ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago