ರೀಲ್ಸ್ ಹುಚ್ಚಾಟಕ್ಕೆ ಈಗಾಗಲೇ ರಾಜ್ಯದಲ್ಲಿ ಹಲವರು ಜೀವ ಕಳೆದುಕೊಂಡಿದ್ದಾರೆ. ಆದರೂ ಸಹ ಯುವಕರು ರೀಲ್ಸ್ ಹುಚ್ಚಾಟದಿಂದ ಮಾತ್ರ ದೂರ ಉಳಿಯುತ್ತಿಲ್ಲ.
ಇದೀಗ ತೊಗರಿ ನಾಡು ಕಲಬುರಗಿ ಜಿಲ್ಲೆಯಲ್ಲಿ ಟ್ರಾಕ್ಟರ್ ಚಾಲಕನೋರ್ವ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.
ಲೋಕೇಶ್ ತಂದೆ ಕಲ್ಲಪ್ಪ ಪೂಜಾರಿ (22) ಮೃತ ಟ್ರಾಕ್ಟರ್ ಚಾಲಕ.
ಕಲಬುರಗಿ ಜಿಲ್ಲೆಯಲ್ಲಿ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಗ್ರಾಮದ ನಿವಾಸಿಯಾದ ಲೋಕೇಶ್ ಆಗಾಗ ಟ್ರಾಕ್ಟರ್ ಚಲಾಯಿಸುವಾಗ ರೀಲ್ಸ್ ಮಾಡ್ತಿದ್ದ.
ಅದೇ ರೀತಿ ಮಹಾಗಾಂವ್ ಗ್ರಾಮದ ವಿಜಯಕುಮಾರ್ ಎನ್ನುವವರ ಕಬ್ಬಿನ ಗದ್ದೆಯಲ್ಲಿ ಟ್ರಾಕ್ಟರ್ ನಿಂದ ಉಳುಮೆ ಮಾಡುವಾಗ ಟ್ರಾಕ್ಟರ್ ಚಲಾಯಿಸುತ್ತಲೇ ನಿಂತುಕೊಂಡು ಮೊಬೈಲ್ ನಲ್ಲಿ ವಿಡಿಯೋ ಶೂಟ್ ಮಾಡುತ್ತ ರೀಲ್ಸ್ ಮಾಡ್ತಿದ್ದಾಗ ಚಾಲಕ ಲೋಕೇಶ್ ಕಾಲು ಜಾರಿ ಬಿದ್ದು ಟ್ರಾಕ್ಟರ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದೇನೆ ಇದ್ರು ಸಹ ರೀಲ್ಸ್ ಹುಚ್ಚಟಕ್ಕೆ ಬಿದ್ದು ಲೋಕೇಶ್ ಪೂಜಾರಿ ಪ್ರಾಣ ಕಳೆದುಕೊಂಡಿದ್ದಾನೆ.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…