ರೀಲ್ಸ್ ಹುಚ್ಚಾಟಕ್ಕೆ ಈಗಾಗಲೇ ರಾಜ್ಯದಲ್ಲಿ ಹಲವರು ಜೀವ ಕಳೆದುಕೊಂಡಿದ್ದಾರೆ. ಆದರೂ ಸಹ ಯುವಕರು ರೀಲ್ಸ್ ಹುಚ್ಚಾಟದಿಂದ ಮಾತ್ರ ದೂರ ಉಳಿಯುತ್ತಿಲ್ಲ.
ಇದೀಗ ತೊಗರಿ ನಾಡು ಕಲಬುರಗಿ ಜಿಲ್ಲೆಯಲ್ಲಿ ಟ್ರಾಕ್ಟರ್ ಚಾಲಕನೋರ್ವ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.
ಲೋಕೇಶ್ ತಂದೆ ಕಲ್ಲಪ್ಪ ಪೂಜಾರಿ (22) ಮೃತ ಟ್ರಾಕ್ಟರ್ ಚಾಲಕ.
ಕಲಬುರಗಿ ಜಿಲ್ಲೆಯಲ್ಲಿ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಗ್ರಾಮದ ನಿವಾಸಿಯಾದ ಲೋಕೇಶ್ ಆಗಾಗ ಟ್ರಾಕ್ಟರ್ ಚಲಾಯಿಸುವಾಗ ರೀಲ್ಸ್ ಮಾಡ್ತಿದ್ದ.
ಅದೇ ರೀತಿ ಮಹಾಗಾಂವ್ ಗ್ರಾಮದ ವಿಜಯಕುಮಾರ್ ಎನ್ನುವವರ ಕಬ್ಬಿನ ಗದ್ದೆಯಲ್ಲಿ ಟ್ರಾಕ್ಟರ್ ನಿಂದ ಉಳುಮೆ ಮಾಡುವಾಗ ಟ್ರಾಕ್ಟರ್ ಚಲಾಯಿಸುತ್ತಲೇ ನಿಂತುಕೊಂಡು ಮೊಬೈಲ್ ನಲ್ಲಿ ವಿಡಿಯೋ ಶೂಟ್ ಮಾಡುತ್ತ ರೀಲ್ಸ್ ಮಾಡ್ತಿದ್ದಾಗ ಚಾಲಕ ಲೋಕೇಶ್ ಕಾಲು ಜಾರಿ ಬಿದ್ದು ಟ್ರಾಕ್ಟರ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದೇನೆ ಇದ್ರು ಸಹ ರೀಲ್ಸ್ ಹುಚ್ಚಟಕ್ಕೆ ಬಿದ್ದು ಲೋಕೇಶ್ ಪೂಜಾರಿ ಪ್ರಾಣ ಕಳೆದುಕೊಂಡಿದ್ದಾನೆ.
Ставки на спорт UA: советы и стратегии для успеха Ставки на спорт в Украине: основы…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿಯಾಗಿದ್ದ ಎನ್ ದುರ್ಗಶ್ರೀ ಅವರನ್ನು ಇಂದು ವರ್ಗಾವಣೆ ಮಾಡಲಾಗಿತ್ತು. ಇವರ ಜಾಗಕ್ಕೆ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಿ…
ನಾಳೆ (ಏ.23) ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು…
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ…
ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಎನ್ ದುರ್ಗಶ್ರೀ ಅವರನ್ನು ವರ್ಗಾವಣೆ ಮಾಡಲಾಗಿದೆ. ನೂತನ ಎಸಿಯಾಗಿ ಮಂಜುನಾಥ್ ಟಿ.ಆರ್ ಅವರನ್ನು ನೇಮಕ ಮಾಡಲಾಗಿದೆ...
ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಗೇಟ್ ಮುಂಭಾಗ ಸರಣಿ ಅಪಘಾತ ನಡೆದಿದೆ. ಘಟನೆಯಲ್ಲಿ ಬಸ್, ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಅಡ್ಡಬಂದ…