ರೀಲ್ಸ್ ಹುಚ್ಚಾಟಕ್ಕೆ ಈಗಾಗಲೇ ರಾಜ್ಯದಲ್ಲಿ ಹಲವರು ಜೀವ ಕಳೆದುಕೊಂಡಿದ್ದಾರೆ. ಆದರೂ ಸಹ ಯುವಕರು ರೀಲ್ಸ್ ಹುಚ್ಚಾಟದಿಂದ ಮಾತ್ರ ದೂರ ಉಳಿಯುತ್ತಿಲ್ಲ.
ಇದೀಗ ತೊಗರಿ ನಾಡು ಕಲಬುರಗಿ ಜಿಲ್ಲೆಯಲ್ಲಿ ಟ್ರಾಕ್ಟರ್ ಚಾಲಕನೋರ್ವ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.
ಲೋಕೇಶ್ ತಂದೆ ಕಲ್ಲಪ್ಪ ಪೂಜಾರಿ (22) ಮೃತ ಟ್ರಾಕ್ಟರ್ ಚಾಲಕ.
ಕಲಬುರಗಿ ಜಿಲ್ಲೆಯಲ್ಲಿ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಗ್ರಾಮದ ನಿವಾಸಿಯಾದ ಲೋಕೇಶ್ ಆಗಾಗ ಟ್ರಾಕ್ಟರ್ ಚಲಾಯಿಸುವಾಗ ರೀಲ್ಸ್ ಮಾಡ್ತಿದ್ದ.
ಅದೇ ರೀತಿ ಮಹಾಗಾಂವ್ ಗ್ರಾಮದ ವಿಜಯಕುಮಾರ್ ಎನ್ನುವವರ ಕಬ್ಬಿನ ಗದ್ದೆಯಲ್ಲಿ ಟ್ರಾಕ್ಟರ್ ನಿಂದ ಉಳುಮೆ ಮಾಡುವಾಗ ಟ್ರಾಕ್ಟರ್ ಚಲಾಯಿಸುತ್ತಲೇ ನಿಂತುಕೊಂಡು ಮೊಬೈಲ್ ನಲ್ಲಿ ವಿಡಿಯೋ ಶೂಟ್ ಮಾಡುತ್ತ ರೀಲ್ಸ್ ಮಾಡ್ತಿದ್ದಾಗ ಚಾಲಕ ಲೋಕೇಶ್ ಕಾಲು ಜಾರಿ ಬಿದ್ದು ಟ್ರಾಕ್ಟರ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದೇನೆ ಇದ್ರು ಸಹ ರೀಲ್ಸ್ ಹುಚ್ಚಟಕ್ಕೆ ಬಿದ್ದು ಲೋಕೇಶ್ ಪೂಜಾರಿ ಪ್ರಾಣ ಕಳೆದುಕೊಂಡಿದ್ದಾನೆ.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…