ರೀಲ್ಸ್ ಹುಚ್ಚಾಟಕ್ಕೆ ಈಗಾಗಲೇ ರಾಜ್ಯದಲ್ಲಿ ಹಲವರು ಜೀವ ಕಳೆದುಕೊಂಡಿದ್ದಾರೆ. ಆದರೂ ಸಹ ಯುವಕರು ರೀಲ್ಸ್ ಹುಚ್ಚಾಟದಿಂದ ಮಾತ್ರ ದೂರ ಉಳಿಯುತ್ತಿಲ್ಲ.
ಇದೀಗ ತೊಗರಿ ನಾಡು ಕಲಬುರಗಿ ಜಿಲ್ಲೆಯಲ್ಲಿ ಟ್ರಾಕ್ಟರ್ ಚಾಲಕನೋರ್ವ ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ.
ಲೋಕೇಶ್ ತಂದೆ ಕಲ್ಲಪ್ಪ ಪೂಜಾರಿ (22) ಮೃತ ಟ್ರಾಕ್ಟರ್ ಚಾಲಕ.
ಕಲಬುರಗಿ ಜಿಲ್ಲೆಯಲ್ಲಿ ಕಮಲಾಪುರ ತಾಲ್ಲೂಕಿನ ಮಹಾಗಾಂವ್ ಗ್ರಾಮದ ನಿವಾಸಿಯಾದ ಲೋಕೇಶ್ ಆಗಾಗ ಟ್ರಾಕ್ಟರ್ ಚಲಾಯಿಸುವಾಗ ರೀಲ್ಸ್ ಮಾಡ್ತಿದ್ದ.
ಅದೇ ರೀತಿ ಮಹಾಗಾಂವ್ ಗ್ರಾಮದ ವಿಜಯಕುಮಾರ್ ಎನ್ನುವವರ ಕಬ್ಬಿನ ಗದ್ದೆಯಲ್ಲಿ ಟ್ರಾಕ್ಟರ್ ನಿಂದ ಉಳುಮೆ ಮಾಡುವಾಗ ಟ್ರಾಕ್ಟರ್ ಚಲಾಯಿಸುತ್ತಲೇ ನಿಂತುಕೊಂಡು ಮೊಬೈಲ್ ನಲ್ಲಿ ವಿಡಿಯೋ ಶೂಟ್ ಮಾಡುತ್ತ ರೀಲ್ಸ್ ಮಾಡ್ತಿದ್ದಾಗ ಚಾಲಕ ಲೋಕೇಶ್ ಕಾಲು ಜಾರಿ ಬಿದ್ದು ಟ್ರಾಕ್ಟರ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಮಹಾಗಾಂವ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅದೇನೆ ಇದ್ರು ಸಹ ರೀಲ್ಸ್ ಹುಚ್ಚಟಕ್ಕೆ ಬಿದ್ದು ಲೋಕೇಶ್ ಪೂಜಾರಿ ಪ್ರಾಣ ಕಳೆದುಕೊಂಡಿದ್ದಾನೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…