ದೊಡ್ಡಬಳ್ಳಾಪುರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಇಂದು ಅಂದಾಜು ರೂ. 7 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ಮುನಿರಾಜ್ ಗುದ್ದಲಿ ಪೂಜೆ ನೆರವೇರಿಸಿದರು.
ಗುಂಡಮಗೆರೆ ಗ್ರಾಮದಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಆರೂಡಿ ಆಸ್ಪತ್ರೆಯಲ್ಲಿ ಹೊಸ ಮೀಟಿಂಗ್ ಹಾಲ್ ನಿರ್ಮಾಣ, ಅಂಬೆಡ್ಕರ್ ಭವನ ನಿರ್ಮಾಣ ಭಕ್ತರಹಳ್ಳಿ, ಕಾಮನ ಅಗ್ರಹಾರ ಮೂಲಕವಾಗಿ ಚಿಕ್ಕಮಂಕನಾಳಕ್ಕೆ ತಲುಪುವ NH 207 | ವರೆಗೆ ರಸ್ತೆ ಅಭಿವೃದ್ಧಿ, ಅಕ್ಕತಮ್ಮನಹಳ್ಳಿಯಿಂದ ಲಿಂಗಾಪುರ ರಸ್ತೆ ನಿರ್ವಹಣೆ, ಕೋಡಿಗೆಹಳ್ಳಿಯಿಂದ ಕನಕೇನಹಳ್ಳಿವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಬೈರಸಂದ್ರಪಾಳ್ಯ ಸಿ.ಸಿ ರಸ್ತೆ ಅಭಿವೃದ್ಧಿ, ದೊಡ್ಡತುಮಕೂರು ಸಿ.ಸಿ ರಸ್ತೆ ಅಭಿವೃದ್ಧಿ, ಕರೀಂಸೊನಹಳ್ಳಿ ಕಾಲೋನಿಯ ಸಿ.ಸಿ ರಸ್ತೆ ಅಭಿವೃದ್ಧಿ, ಅಂಜನ್ ಮೂರ್ತಿ ನಗರ ಕಾಲೋನಿಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ, ಕನಸವಾಡಿ ಗ್ರಾಮ ಪಂಚಾಯಿತಿಯ, ಮಾರಸಂದ್ರ ಕಾಲೋನಿ ಪರಿಮಿತಿಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಧೀರಜ್ ಮುನಿರಾಜ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಕಾಮಗಾರಿಗಳು ಮುಂದಿನ ದಿನಗಳಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮೂಲಸೌಕರ್ಯಕ್ಕೆ ಮೆರುಗು ನೀಡಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ಈ ಸಂದರ್ಭದಲ್ಲಿ ಟಿವಿ ಲಕ್ಷ್ಮೀನಾರಾಯಣ್, ತಾಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ಅಶ್ವಥ್ ನಾರಾಯಣಸ್ವಾಮಿ, ಕಾಂತರಾಜು, ಗ್ರಾಮ್ ಪಂಚಾಯತಿ ಅಧ್ಯಕ್ಷರು ಸದಸ್ಯರು ಮುಖಂಡರು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…
ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…
ಸಣ್ಣಪುಟ್ಟ ಜಗಳಗಳಿಂದ ಕೋರ್ಟಿನ ಮೆಟ್ಟಿಲೇರಿ ದೂರಾವಾಗಲು ನಿರ್ಧರಿಸಿದ್ದ ನಾಲ್ವರು ದಂಪತಿಗಳನ್ನು ಶನಿವಾರ ನಡೆದ ಲೋಕಾಅದಾಲತ್ ನಲ್ಲಿ ನ್ಯಾಯಾಧೀಶರುಗಳು ಹೇಳಿದ ಬುದ್ಧಿಮಾತಿನಿಂದ…
ಕೊಲ್ಲಿ ದೇಶಗಳಲ್ಲಿ ಯುದ್ಧದ ಪರಿಸ್ಥಿತಿ ಹಿನ್ನೆಲೆಯಲ್ಲಿ ಉಂಟಾದ ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆ ಗ್ಯಾಸ್ ಸಿಲಿಂಡರ್ ಗಳ ಪೂರೈಕೆ…
ಗೃಹಬಳಕೆ ಸಿಲಿಂಡರ್ ಅನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಸಿದ್ದಲ್ಲಿ ಸೂಕ್ತ ಕಾನೂನುಕ್ರಮ ಕೈಗೊಳ್ಳಲು ಆಹಾರ ಸಚಿವರು ಸೂಚಿಸಿದ್ದು, ಅದರಂತೆ ಗೃಹ ಬಳಕೆ…
ವಾಣಿಜ್ಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಹಿನ್ನೆಲೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಪ್ರತಿಕ್ರಿಯೆ. ಈ ಸಮಸ್ಯೆ ಇನ್ನು ಒಂದು ವಾರಗಳ ಕಾಲ…