ದೊಡ್ಡಬಳ್ಳಾಪುರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಇಂದು ಅಂದಾಜು ರೂ. 7 ಕೋಟಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಧೀರಜ್ಮುನಿರಾಜ್ ಗುದ್ದಲಿ ಪೂಜೆ ನೆರವೇರಿಸಿದರು.
ಗುಂಡಮಗೆರೆ ಗ್ರಾಮದಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿ, ಪ್ರಾಥಮಿಕ ಆರೋಗ್ಯ ಕೇಂದ್ರ ಆರೂಡಿ ಆಸ್ಪತ್ರೆಯಲ್ಲಿ ಹೊಸ ಮೀಟಿಂಗ್ ಹಾಲ್ ನಿರ್ಮಾಣ, ಅಂಬೆಡ್ಕರ್ ಭವನ ನಿರ್ಮಾಣ ಭಕ್ತರಹಳ್ಳಿ, ಕಾಮನ ಅಗ್ರಹಾರ ಮೂಲಕವಾಗಿ ಚಿಕ್ಕಮಂಕನಾಳಕ್ಕೆ ತಲುಪುವ NH 207 | ವರೆಗೆ ರಸ್ತೆ ಅಭಿವೃದ್ಧಿ, ಅಕ್ಕತಮ್ಮನಹಳ್ಳಿಯಿಂದ ಲಿಂಗಾಪುರ ರಸ್ತೆ ನಿರ್ವಹಣೆ, ಕೋಡಿಗೆಹಳ್ಳಿಯಿಂದ ಕನಕೇನಹಳ್ಳಿವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ, ಬೈರಸಂದ್ರಪಾಳ್ಯ ಸಿ.ಸಿ ರಸ್ತೆ ಅಭಿವೃದ್ಧಿ, ದೊಡ್ಡತುಮಕೂರು ಸಿ.ಸಿ ರಸ್ತೆ ಅಭಿವೃದ್ಧಿ, ಕರೀಂಸೊನಹಳ್ಳಿ ಕಾಲೋನಿಯ ಸಿ.ಸಿ ರಸ್ತೆ ಅಭಿವೃದ್ಧಿ, ಅಂಜನ್ ಮೂರ್ತಿ ನಗರ ಕಾಲೋನಿಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ, ಕನಸವಾಡಿ ಗ್ರಾಮ ಪಂಚಾಯಿತಿಯ, ಮಾರಸಂದ್ರ ಕಾಲೋನಿ ಪರಿಮಿತಿಯಲ್ಲಿ ಸಿ.ಸಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಧೀರಜ್ ಮುನಿರಾಜ್ ಗುದ್ದಲಿ ಪೂಜೆ ನೆರವೇರಿಸಿದರು.
ಈ ಕಾಮಗಾರಿಗಳು ಮುಂದಿನ ದಿನಗಳಲ್ಲಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮೂಲಸೌಕರ್ಯಕ್ಕೆ ಮೆರುಗು ನೀಡಲಿದೆ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ಈ ಸಂದರ್ಭದಲ್ಲಿ ಟಿವಿ ಲಕ್ಷ್ಮೀನಾರಾಯಣ್, ತಾಲೂಕು ಬಿಜೆಪಿ ಅಧ್ಯಕ್ಷರಾದ ನಾಗೇಶ್, ಅಶ್ವಥ್ ನಾರಾಯಣಸ್ವಾಮಿ, ಕಾಂತರಾಜು, ಗ್ರಾಮ್ ಪಂಚಾಯತಿ ಅಧ್ಯಕ್ಷರು ಸದಸ್ಯರು ಮುಖಂಡರು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…