ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ: ನೈಜೀರಿಯಾ ಪ್ರಜೆಗಳಿಬ್ಬರ ಬಂಧನ: ಬಂಧಿತರಿಂದ 4.50 ಕೋಟಿ ರೂ.ಮೌಲ್ಯದ ಮಾದಕವಸ್ತು ವಶ

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ನೈಜೀರಿಯಾದ ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್​​ಡಮ್​ ಎಂದು ಗುರುತಿಸಲಾಗಿದೆ.

ಬಂಧಿತರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಬಂದಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದು ನೆಲೆಸಿದ್ದರು. ಬೇರೆಯವರ ಹೆಸರಲ್ಲಿ ಮನೆ ಬಾಡಿಗೆ ಪಡೆದು ಏರ್ಪೋರ್ಟ್ ಬಳಿ ಸೆಕ್ಯೂರಿಟಿಗಳು ಹಾಕುವಂತೆ ಮನೆ ಬಳಿ ಬಟ್ಟೆ ಹಾಕಿಕೊಂಡು ತಿರುಗಾಡುತಿದ್ದರು. ಅಲ್ಲದೆ, ಡ್ರಗ್ ಪೆಡ್ಲಿಂಗ್ ಮಾಡಬೇಕು ಎಂದು ಬಂದಿದ್ದ ಐನಾತಿಗಳು ನಂತರ ತಮ್ಮ ಅಸಲಿ ವರಸೆ ಶುರುವಿಟ್ಟುಕೊಂಡಿದ್ದರು. ಮನೆಯಲ್ಲಿಯೇ ಡ್ರಗ್ಸ್ ಶೇಖರಿಸಿಕೊಟ್ಟುಕೊಂಡು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು.

ಡ್ರಗ್ ಮಾರಾಟ ಮಾಡಲು ಹಾಗೂ ಶೇಖರಿಸಿಡಲು ಆರೋಪಿಗಳು ಸಖತ್ ಪ್ಲಾನ್ ಮಾಡಿಕೊಂಡಿದ್ದರು. ರೆಡಿಮೇಡ್ ಬಟ್ಟೆಗಳು, ಅದರಲ್ಲೂ ಮಹಿಳೆಯರ ಚೂಡಿದಾರದಂತಹ ಬಟ್ಟೆಗಳಲ್ಲಿ, ಹೊಸ ಶರ್ಟ್, ಪ್ಯಾಂಟ್​ಗಳ ಪ್ಯಾಕ್ ಮಾಡುವಾಗ ನಡುವೆ ಬಳಸುವ ಕಾರ್ಡ್ ಬೋರ್ಡ್ ಮಧ್ಯೆ ಮಾದಕ ವಸ್ತು ತುಂಬಿ ಇಟ್ಟು ಮಾರಾಟ ಮಾಡುತ್ತಿದ್ದರು.

ಪೊಲೀಸರಿಗೆ ಈ ಆರೋಪಿಗಳ ಕಳ್ಳಾಟದ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಅದರಂತೆ, ಒಬ್ಬರು ಪೊಲೀಸ್ ಸಿಬ್ಬಂದಿ ಆರೋಪಿಗಳ ಬೆನ್ನು ಹತ್ತಿದ್ದರು. ಇದೇ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸುವ ಸಾದ್ಯತೆ ಕಂಡುಬಂದಿದ್ದು, ತಕ್ಷಣವೇ 112 ಗೆ ಕರೆ ಮಾಡಿ ಇಆರ್​​ಸ್​​​ಎಸ್ ವಾಹನವನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ಎಎಸ್​ಐ ತಮ್ಮ ಬಳಿ ಇದ್ದ ಸರ್ವಿಸ್ ಪಿಸ್ತೂಲ್ ತೋರಿಸಿ ಬೆದರಿಸಿ ಆರೋಪಿಗಳು ತಪ್ಪಿಸಿಕೊಳ್ಳದಂತೆ ಲಾಕ್ ಮಾಡಿದ್ದಾರೆ. ಬಳಿಕ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು ನೈಜೀರಿಯಾದವರ ತಂಡದ ಸಹಿತ ಇತರ ಡ್ರಗ್ ಪೆಡ್ಲರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ 4.50 ಕೋಟಿರೂಪಾಯಿಗೂ ಅಧಿಕ ಮೌಲ್ಯದ 2.8 ಕೆಜಿ ಎಂಡಿಎಂ ಎ ಕ್ರಿಸ್ಟಲ್, 200 ಗ್ರಾಂ ಹೈಡ್ರೋ ಗಾಂಜಾ, ಎರಡು ಲಕ್ಷ ರೂ. ನಗದು, ಏಳು ಮೊಬೈಲ್​ಗಳು, ವೇಯಿಂಗ್ ಮಷೀನ್ ಮತ್ತು ಮಹಿಳೆಯರ ಕೆಲ ಹೊಸ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ನೆಲೆಸಿರುವುದು ತನಿಖೆ ವೇಳೆ ಗೊತ್ತಾಗಿದೆ‌.

ಈ ಗ್ಯಾಂಗ್​​ನಲ್ಲಿ ಇದ್ದ ಒರ್ವ ವಿದೇಶಿ ಪ್ರಜೆ ತಪ್ಪಿಸಿಕೊಂಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಈ ಜಾಲಕ್ಕೆ ಹೊರ ರಾಜ್ಯದಿಂದ ಡ್ರಗ್ಸ್ ಪೂರೈಕೆ ಆಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಆ ಕುರಿತು ಪೊಲೀಸರು ತನಿಖೆ ನಡೆಸುತಿದ್ದಾರೆ.

Ramesh Babu

Journalist

Recent Posts

ಅಂತರ್ಜಲ ಪ್ರಮಾಣ ವರ್ಷದಿಂದ ವರ್ಷಕ್ಕೆ ಕುಸಿತ: ಒಂದು ತಿಂಗಳಲ್ಲಿ 1.15 ಮೀ. ನೀರಿನ ಮಟ್ಟ ಕುಸಿತ: ಬೋರ್‌ವೆಲ್‌ಗಳು ಬರಿದಾದ ನೀರು: ರೈತ ಕಂಗಾಲು

ದೊಡ್ಡಬಳ್ಳಾಪುರದಲ್ಲಿ ಬೇಸಿಗೆಯ ತಾಪಮಾನ ದಿನೇ ದಿನೆ ಹೆಚ್ಚುತ್ತಿದೆ‌. ಈ ಹಿನ್ನೆಲೆ ತೀವ್ರ ಜಲಕ್ಷಾಮದ ಕಾರ್ಮೋಡ ಆವರಿಸಿದಂತಿದೆ‌. ವರ್ಷದಿಂದ ವರ್ಷಕ್ಕೆ ಏರುತ್ತಿರುವ…

20 minutes ago

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

7 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

8 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

9 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

19 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

19 hours ago