ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ: ನೈಜೀರಿಯಾ ಪ್ರಜೆಗಳಿಬ್ಬರ ಬಂಧನ: ಬಂಧಿತರಿಂದ 4.50 ಕೋಟಿ ರೂ.ಮೌಲ್ಯದ ಮಾದಕವಸ್ತು ವಶ

ರೆಡಿಮೇಡ್ ಬಟ್ಟೆಗಳ ಪ್ಯಾಕ್​ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ನೈಜೀರಿಯಾದ ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್​​ಡಮ್​ ಎಂದು ಗುರುತಿಸಲಾಗಿದೆ.

ಬಂಧಿತರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಬಂದಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದು ನೆಲೆಸಿದ್ದರು. ಬೇರೆಯವರ ಹೆಸರಲ್ಲಿ ಮನೆ ಬಾಡಿಗೆ ಪಡೆದು ಏರ್ಪೋರ್ಟ್ ಬಳಿ ಸೆಕ್ಯೂರಿಟಿಗಳು ಹಾಕುವಂತೆ ಮನೆ ಬಳಿ ಬಟ್ಟೆ ಹಾಕಿಕೊಂಡು ತಿರುಗಾಡುತಿದ್ದರು. ಅಲ್ಲದೆ, ಡ್ರಗ್ ಪೆಡ್ಲಿಂಗ್ ಮಾಡಬೇಕು ಎಂದು ಬಂದಿದ್ದ ಐನಾತಿಗಳು ನಂತರ ತಮ್ಮ ಅಸಲಿ ವರಸೆ ಶುರುವಿಟ್ಟುಕೊಂಡಿದ್ದರು. ಮನೆಯಲ್ಲಿಯೇ ಡ್ರಗ್ಸ್ ಶೇಖರಿಸಿಕೊಟ್ಟುಕೊಂಡು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು.

ಡ್ರಗ್ ಮಾರಾಟ ಮಾಡಲು ಹಾಗೂ ಶೇಖರಿಸಿಡಲು ಆರೋಪಿಗಳು ಸಖತ್ ಪ್ಲಾನ್ ಮಾಡಿಕೊಂಡಿದ್ದರು. ರೆಡಿಮೇಡ್ ಬಟ್ಟೆಗಳು, ಅದರಲ್ಲೂ ಮಹಿಳೆಯರ ಚೂಡಿದಾರದಂತಹ ಬಟ್ಟೆಗಳಲ್ಲಿ, ಹೊಸ ಶರ್ಟ್, ಪ್ಯಾಂಟ್​ಗಳ ಪ್ಯಾಕ್ ಮಾಡುವಾಗ ನಡುವೆ ಬಳಸುವ ಕಾರ್ಡ್ ಬೋರ್ಡ್ ಮಧ್ಯೆ ಮಾದಕ ವಸ್ತು ತುಂಬಿ ಇಟ್ಟು ಮಾರಾಟ ಮಾಡುತ್ತಿದ್ದರು.

ಪೊಲೀಸರಿಗೆ ಈ ಆರೋಪಿಗಳ ಕಳ್ಳಾಟದ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಅದರಂತೆ, ಒಬ್ಬರು ಪೊಲೀಸ್ ಸಿಬ್ಬಂದಿ ಆರೋಪಿಗಳ ಬೆನ್ನು ಹತ್ತಿದ್ದರು. ಇದೇ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸುವ ಸಾದ್ಯತೆ ಕಂಡುಬಂದಿದ್ದು, ತಕ್ಷಣವೇ 112 ಗೆ ಕರೆ ಮಾಡಿ ಇಆರ್​​ಸ್​​​ಎಸ್ ವಾಹನವನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ಎಎಸ್​ಐ ತಮ್ಮ ಬಳಿ ಇದ್ದ ಸರ್ವಿಸ್ ಪಿಸ್ತೂಲ್ ತೋರಿಸಿ ಬೆದರಿಸಿ ಆರೋಪಿಗಳು ತಪ್ಪಿಸಿಕೊಳ್ಳದಂತೆ ಲಾಕ್ ಮಾಡಿದ್ದಾರೆ. ಬಳಿಕ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು ನೈಜೀರಿಯಾದವರ ತಂಡದ ಸಹಿತ ಇತರ ಡ್ರಗ್ ಪೆಡ್ಲರ್​​ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.

ದಾಳಿ ವೇಳೆ 4.50 ಕೋಟಿರೂಪಾಯಿಗೂ ಅಧಿಕ ಮೌಲ್ಯದ 2.8 ಕೆಜಿ ಎಂಡಿಎಂ ಎ ಕ್ರಿಸ್ಟಲ್, 200 ಗ್ರಾಂ ಹೈಡ್ರೋ ಗಾಂಜಾ, ಎರಡು ಲಕ್ಷ ರೂ. ನಗದು, ಏಳು ಮೊಬೈಲ್​ಗಳು, ವೇಯಿಂಗ್ ಮಷೀನ್ ಮತ್ತು ಮಹಿಳೆಯರ ಕೆಲ ಹೊಸ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ನೆಲೆಸಿರುವುದು ತನಿಖೆ ವೇಳೆ ಗೊತ್ತಾಗಿದೆ‌.

ಈ ಗ್ಯಾಂಗ್​​ನಲ್ಲಿ ಇದ್ದ ಒರ್ವ ವಿದೇಶಿ ಪ್ರಜೆ ತಪ್ಪಿಸಿಕೊಂಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಈ ಜಾಲಕ್ಕೆ ಹೊರ ರಾಜ್ಯದಿಂದ ಡ್ರಗ್ಸ್ ಪೂರೈಕೆ ಆಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಆ ಕುರಿತು ಪೊಲೀಸರು ತನಿಖೆ ನಡೆಸುತಿದ್ದಾರೆ.

Ramesh Babu

Journalist

Recent Posts

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

27 minutes ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

5 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

9 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

10 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

11 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

21 hours ago