ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ನೈಜೀರಿಯಾದ ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್ಡಮ್ ಎಂದು ಗುರುತಿಸಲಾಗಿದೆ.
ಬಂಧಿತರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಬಂದಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದು ನೆಲೆಸಿದ್ದರು. ಬೇರೆಯವರ ಹೆಸರಲ್ಲಿ ಮನೆ ಬಾಡಿಗೆ ಪಡೆದು ಏರ್ಪೋರ್ಟ್ ಬಳಿ ಸೆಕ್ಯೂರಿಟಿಗಳು ಹಾಕುವಂತೆ ಮನೆ ಬಳಿ ಬಟ್ಟೆ ಹಾಕಿಕೊಂಡು ತಿರುಗಾಡುತಿದ್ದರು. ಅಲ್ಲದೆ, ಡ್ರಗ್ ಪೆಡ್ಲಿಂಗ್ ಮಾಡಬೇಕು ಎಂದು ಬಂದಿದ್ದ ಐನಾತಿಗಳು ನಂತರ ತಮ್ಮ ಅಸಲಿ ವರಸೆ ಶುರುವಿಟ್ಟುಕೊಂಡಿದ್ದರು. ಮನೆಯಲ್ಲಿಯೇ ಡ್ರಗ್ಸ್ ಶೇಖರಿಸಿಕೊಟ್ಟುಕೊಂಡು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು.
ಡ್ರಗ್ ಮಾರಾಟ ಮಾಡಲು ಹಾಗೂ ಶೇಖರಿಸಿಡಲು ಆರೋಪಿಗಳು ಸಖತ್ ಪ್ಲಾನ್ ಮಾಡಿಕೊಂಡಿದ್ದರು. ರೆಡಿಮೇಡ್ ಬಟ್ಟೆಗಳು, ಅದರಲ್ಲೂ ಮಹಿಳೆಯರ ಚೂಡಿದಾರದಂತಹ ಬಟ್ಟೆಗಳಲ್ಲಿ, ಹೊಸ ಶರ್ಟ್, ಪ್ಯಾಂಟ್ಗಳ ಪ್ಯಾಕ್ ಮಾಡುವಾಗ ನಡುವೆ ಬಳಸುವ ಕಾರ್ಡ್ ಬೋರ್ಡ್ ಮಧ್ಯೆ ಮಾದಕ ವಸ್ತು ತುಂಬಿ ಇಟ್ಟು ಮಾರಾಟ ಮಾಡುತ್ತಿದ್ದರು.
ಪೊಲೀಸರಿಗೆ ಈ ಆರೋಪಿಗಳ ಕಳ್ಳಾಟದ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಅದರಂತೆ, ಒಬ್ಬರು ಪೊಲೀಸ್ ಸಿಬ್ಬಂದಿ ಆರೋಪಿಗಳ ಬೆನ್ನು ಹತ್ತಿದ್ದರು. ಇದೇ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸುವ ಸಾದ್ಯತೆ ಕಂಡುಬಂದಿದ್ದು, ತಕ್ಷಣವೇ 112 ಗೆ ಕರೆ ಮಾಡಿ ಇಆರ್ಸ್ಎಸ್ ವಾಹನವನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ಎಎಸ್ಐ ತಮ್ಮ ಬಳಿ ಇದ್ದ ಸರ್ವಿಸ್ ಪಿಸ್ತೂಲ್ ತೋರಿಸಿ ಬೆದರಿಸಿ ಆರೋಪಿಗಳು ತಪ್ಪಿಸಿಕೊಳ್ಳದಂತೆ ಲಾಕ್ ಮಾಡಿದ್ದಾರೆ. ಬಳಿಕ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು ನೈಜೀರಿಯಾದವರ ತಂಡದ ಸಹಿತ ಇತರ ಡ್ರಗ್ ಪೆಡ್ಲರ್ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.
ದಾಳಿ ವೇಳೆ 4.50 ಕೋಟಿರೂಪಾಯಿಗೂ ಅಧಿಕ ಮೌಲ್ಯದ 2.8 ಕೆಜಿ ಎಂಡಿಎಂ ಎ ಕ್ರಿಸ್ಟಲ್, 200 ಗ್ರಾಂ ಹೈಡ್ರೋ ಗಾಂಜಾ, ಎರಡು ಲಕ್ಷ ರೂ. ನಗದು, ಏಳು ಮೊಬೈಲ್ಗಳು, ವೇಯಿಂಗ್ ಮಷೀನ್ ಮತ್ತು ಮಹಿಳೆಯರ ಕೆಲ ಹೊಸ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ನೆಲೆಸಿರುವುದು ತನಿಖೆ ವೇಳೆ ಗೊತ್ತಾಗಿದೆ.
ಈ ಗ್ಯಾಂಗ್ನಲ್ಲಿ ಇದ್ದ ಒರ್ವ ವಿದೇಶಿ ಪ್ರಜೆ ತಪ್ಪಿಸಿಕೊಂಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಈ ಜಾಲಕ್ಕೆ ಹೊರ ರಾಜ್ಯದಿಂದ ಡ್ರಗ್ಸ್ ಪೂರೈಕೆ ಆಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಆ ಕುರಿತು ಪೊಲೀಸರು ತನಿಖೆ ನಡೆಸುತಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…