ರೆಡಿಮೇಡ್ ಬಟ್ಟೆಗಳ ಪ್ಯಾಕ್ಗಳಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆಗಳಿಬ್ಬರನ್ನು ರಾಜಾನುಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 4.50 ಕೋಟಿ ರೂ. ಮೌಲ್ಯದ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ನೈಜೀರಿಯಾದ ಲಾಸೊನ್ಯೆ ಪೀಟರ್ ಒಬಿಯೋಮಾ ಹಾಗೂ ಸಂಡೇ ವಿನ್ಡಮ್ ಎಂದು ಗುರುತಿಸಲಾಗಿದೆ.
ಬಂಧಿತರು ಮೆಡಿಕಲ್ ವಿಸಾದಲ್ಲಿ ದೆಹಲಿಗೆ ಬಂದಿದ್ದರು. ದೆಹಲಿಯಿಂದ ಬೆಂಗಳೂರಿನ ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂದು ನೆಲೆಸಿದ್ದರು. ಬೇರೆಯವರ ಹೆಸರಲ್ಲಿ ಮನೆ ಬಾಡಿಗೆ ಪಡೆದು ಏರ್ಪೋರ್ಟ್ ಬಳಿ ಸೆಕ್ಯೂರಿಟಿಗಳು ಹಾಕುವಂತೆ ಮನೆ ಬಳಿ ಬಟ್ಟೆ ಹಾಕಿಕೊಂಡು ತಿರುಗಾಡುತಿದ್ದರು. ಅಲ್ಲದೆ, ಡ್ರಗ್ ಪೆಡ್ಲಿಂಗ್ ಮಾಡಬೇಕು ಎಂದು ಬಂದಿದ್ದ ಐನಾತಿಗಳು ನಂತರ ತಮ್ಮ ಅಸಲಿ ವರಸೆ ಶುರುವಿಟ್ಟುಕೊಂಡಿದ್ದರು. ಮನೆಯಲ್ಲಿಯೇ ಡ್ರಗ್ಸ್ ಶೇಖರಿಸಿಕೊಟ್ಟುಕೊಂಡು ಅದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು.
ಡ್ರಗ್ ಮಾರಾಟ ಮಾಡಲು ಹಾಗೂ ಶೇಖರಿಸಿಡಲು ಆರೋಪಿಗಳು ಸಖತ್ ಪ್ಲಾನ್ ಮಾಡಿಕೊಂಡಿದ್ದರು. ರೆಡಿಮೇಡ್ ಬಟ್ಟೆಗಳು, ಅದರಲ್ಲೂ ಮಹಿಳೆಯರ ಚೂಡಿದಾರದಂತಹ ಬಟ್ಟೆಗಳಲ್ಲಿ, ಹೊಸ ಶರ್ಟ್, ಪ್ಯಾಂಟ್ಗಳ ಪ್ಯಾಕ್ ಮಾಡುವಾಗ ನಡುವೆ ಬಳಸುವ ಕಾರ್ಡ್ ಬೋರ್ಡ್ ಮಧ್ಯೆ ಮಾದಕ ವಸ್ತು ತುಂಬಿ ಇಟ್ಟು ಮಾರಾಟ ಮಾಡುತ್ತಿದ್ದರು.
ಪೊಲೀಸರಿಗೆ ಈ ಆರೋಪಿಗಳ ಕಳ್ಳಾಟದ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಅದರಂತೆ, ಒಬ್ಬರು ಪೊಲೀಸ್ ಸಿಬ್ಬಂದಿ ಆರೋಪಿಗಳ ಬೆನ್ನು ಹತ್ತಿದ್ದರು. ಇದೇ ವೇಳೆ ಆರೋಪಿಗಳು ಪರಾರಿಯಾಗಲು ಯತ್ನಿಸುವ ಸಾದ್ಯತೆ ಕಂಡುಬಂದಿದ್ದು, ತಕ್ಷಣವೇ 112 ಗೆ ಕರೆ ಮಾಡಿ ಇಆರ್ಸ್ಎಸ್ ವಾಹನವನ್ನು ಕರೆಸಿಕೊಂಡಿದ್ದಾರೆ. ಈ ವೇಳೆ ಎಎಸ್ಐ ತಮ್ಮ ಬಳಿ ಇದ್ದ ಸರ್ವಿಸ್ ಪಿಸ್ತೂಲ್ ತೋರಿಸಿ ಬೆದರಿಸಿ ಆರೋಪಿಗಳು ತಪ್ಪಿಸಿಕೊಳ್ಳದಂತೆ ಲಾಕ್ ಮಾಡಿದ್ದಾರೆ. ಬಳಿಕ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು ನೈಜೀರಿಯಾದವರ ತಂಡದ ಸಹಿತ ಇತರ ಡ್ರಗ್ ಪೆಡ್ಲರ್ಗಳ ಮನೆ ಮೇಲೆ ದಾಳಿ ಮಾಡಿದ್ದಾರೆ.
ದಾಳಿ ವೇಳೆ 4.50 ಕೋಟಿರೂಪಾಯಿಗೂ ಅಧಿಕ ಮೌಲ್ಯದ 2.8 ಕೆಜಿ ಎಂಡಿಎಂ ಎ ಕ್ರಿಸ್ಟಲ್, 200 ಗ್ರಾಂ ಹೈಡ್ರೋ ಗಾಂಜಾ, ಎರಡು ಲಕ್ಷ ರೂ. ನಗದು, ಏಳು ಮೊಬೈಲ್ಗಳು, ವೇಯಿಂಗ್ ಮಷೀನ್ ಮತ್ತು ಮಹಿಳೆಯರ ಕೆಲ ಹೊಸ ಬಟ್ಟೆಗಳನ್ನು ಜಪ್ತಿ ಮಾಡಲಾಗಿದೆ. ಆರೋಪಿಗಳು ವಿಸಾ ಅವಧಿ ಮುಗಿದಿದ್ದರೂ ಭಾರತದಲ್ಲಿ ನೆಲೆಸಿರುವುದು ತನಿಖೆ ವೇಳೆ ಗೊತ್ತಾಗಿದೆ.
ಈ ಗ್ಯಾಂಗ್ನಲ್ಲಿ ಇದ್ದ ಒರ್ವ ವಿದೇಶಿ ಪ್ರಜೆ ತಪ್ಪಿಸಿಕೊಂಡಿರುವುದು ತನಿಖೆ ವೇಳೆ ತಿಳಿದುಬಂದಿದೆ. ಈ ಜಾಲಕ್ಕೆ ಹೊರ ರಾಜ್ಯದಿಂದ ಡ್ರಗ್ಸ್ ಪೂರೈಕೆ ಆಗುತ್ತಿರುವ ಬಗ್ಗೆ ಮಾಹಿತಿ ಇದ್ದು, ಆ ಕುರಿತು ಪೊಲೀಸರು ತನಿಖೆ ನಡೆಸುತಿದ್ದಾರೆ.
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…