ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.
ಕುಂದಲಗುರ್ಕಿ ಗ್ರಾಮದ 37 ವರ್ಷದ ರೇಖಾ ಮೃತ ಮಹಿಳೆ.
ಅಂದಹಾಗೆ ಮೃತ ಮಹಿಳೆ ಎಫ್ ಇ ಎಸ್ ಎಂಬ ಎನ್ ಜಿ ಒ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದು, ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ನೇಚರ್ ರೆಸಾರ್ಟ್ ಕಂ ಹೋಟೆಲ್ ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದ್ರೆ ದುರದೃಷ್ಟವಶಾತ್ ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ.
ಕೆಲಕಾಲ ನೀರಿನಲ್ಲಿ ಧುಮುಕಿರುವ ಮಹಿಳೆ ರೇಖಾ ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ..ಆದ್ರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತುಕೊಂಡು ಬಂದಿದ್ದಾರೆ.
ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಈ ಸಂಬಂಧ ಮುಂಜಾಗ್ರತಾ ರಕ್ಷಣಾ ಕವಚಗಳನ್ನ ನೀಡದೆ ನಿರ್ಲಕ್ಷ್ಯದಡಿ ರೆಸಾರ್ಟ್ ಮಾಲೀಕರು, ಹಾಗೂ ರೇಖಾರನ್ನ ಕೆರೆದುಕೊಂಡು ಹೋಗಿದ್ದ ಸಂಸ್ಥೆಯ ವಿರುದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ..ಇನ್ನೂ ಈ ಘಟನೆ ರೆಸಾರ್ಟ್ ನ ಸಿ ಸಿ ಟಿವಿಯಲ್ಲಿ ಸಹ ದಾಖಲಾಗಿದೆ.
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…