ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.
ಕುಂದಲಗುರ್ಕಿ ಗ್ರಾಮದ 37 ವರ್ಷದ ರೇಖಾ ಮೃತ ಮಹಿಳೆ.
ಅಂದಹಾಗೆ ಮೃತ ಮಹಿಳೆ ಎಫ್ ಇ ಎಸ್ ಎಂಬ ಎನ್ ಜಿ ಒ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದು, ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ನೇಚರ್ ರೆಸಾರ್ಟ್ ಕಂ ಹೋಟೆಲ್ ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದ್ರೆ ದುರದೃಷ್ಟವಶಾತ್ ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ.
ಕೆಲಕಾಲ ನೀರಿನಲ್ಲಿ ಧುಮುಕಿರುವ ಮಹಿಳೆ ರೇಖಾ ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ..ಆದ್ರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತುಕೊಂಡು ಬಂದಿದ್ದಾರೆ.
ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಈ ಸಂಬಂಧ ಮುಂಜಾಗ್ರತಾ ರಕ್ಷಣಾ ಕವಚಗಳನ್ನ ನೀಡದೆ ನಿರ್ಲಕ್ಷ್ಯದಡಿ ರೆಸಾರ್ಟ್ ಮಾಲೀಕರು, ಹಾಗೂ ರೇಖಾರನ್ನ ಕೆರೆದುಕೊಂಡು ಹೋಗಿದ್ದ ಸಂಸ್ಥೆಯ ವಿರುದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ..ಇನ್ನೂ ಈ ಘಟನೆ ರೆಸಾರ್ಟ್ ನ ಸಿ ಸಿ ಟಿವಿಯಲ್ಲಿ ಸಹ ದಾಖಲಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…