ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.
ಕುಂದಲಗುರ್ಕಿ ಗ್ರಾಮದ 37 ವರ್ಷದ ರೇಖಾ ಮೃತ ಮಹಿಳೆ.
ಅಂದಹಾಗೆ ಮೃತ ಮಹಿಳೆ ಎಫ್ ಇ ಎಸ್ ಎಂಬ ಎನ್ ಜಿ ಒ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದು, ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ನೇಚರ್ ರೆಸಾರ್ಟ್ ಕಂ ಹೋಟೆಲ್ ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದ್ರೆ ದುರದೃಷ್ಟವಶಾತ್ ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ.
ಕೆಲಕಾಲ ನೀರಿನಲ್ಲಿ ಧುಮುಕಿರುವ ಮಹಿಳೆ ರೇಖಾ ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ..ಆದ್ರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತುಕೊಂಡು ಬಂದಿದ್ದಾರೆ.
ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಈ ಸಂಬಂಧ ಮುಂಜಾಗ್ರತಾ ರಕ್ಷಣಾ ಕವಚಗಳನ್ನ ನೀಡದೆ ನಿರ್ಲಕ್ಷ್ಯದಡಿ ರೆಸಾರ್ಟ್ ಮಾಲೀಕರು, ಹಾಗೂ ರೇಖಾರನ್ನ ಕೆರೆದುಕೊಂಡು ಹೋಗಿದ್ದ ಸಂಸ್ಥೆಯ ವಿರುದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ..ಇನ್ನೂ ಈ ಘಟನೆ ರೆಸಾರ್ಟ್ ನ ಸಿ ಸಿ ಟಿವಿಯಲ್ಲಿ ಸಹ ದಾಖಲಾಗಿದೆ.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…