ರೆಸಾರ್ಟ್ ಸ್ವಿಮ್ಮಿಂಗ್ ಪೂಲ್ ಗೆ ಧುಮುಕಿದ ಮಹಿಳೆಯೊಬ್ಬರು ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.
ಕುಂದಲಗುರ್ಕಿ ಗ್ರಾಮದ 37 ವರ್ಷದ ರೇಖಾ ಮೃತ ಮಹಿಳೆ.
ಅಂದಹಾಗೆ ಮೃತ ಮಹಿಳೆ ಎಫ್ ಇ ಎಸ್ ಎಂಬ ಎನ್ ಜಿ ಒ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದು, ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ನೇಚರ್ ರೆಸಾರ್ಟ್ ಕಂ ಹೋಟೆಲ್ ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು, ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಆದ್ರೆ ದುರದೃಷ್ಟವಶಾತ್ ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ.
ಕೆಲಕಾಲ ನೀರಿನಲ್ಲಿ ಧುಮುಕಿರುವ ಮಹಿಳೆ ರೇಖಾ ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ..ಆದ್ರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತುಕೊಂಡು ಬಂದಿದ್ದಾರೆ.
ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಈ ಸಂಬಂಧ ಮುಂಜಾಗ್ರತಾ ರಕ್ಷಣಾ ಕವಚಗಳನ್ನ ನೀಡದೆ ನಿರ್ಲಕ್ಷ್ಯದಡಿ ರೆಸಾರ್ಟ್ ಮಾಲೀಕರು, ಹಾಗೂ ರೇಖಾರನ್ನ ಕೆರೆದುಕೊಂಡು ಹೋಗಿದ್ದ ಸಂಸ್ಥೆಯ ವಿರುದ್ದ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ..ಇನ್ನೂ ಈ ಘಟನೆ ರೆಸಾರ್ಟ್ ನ ಸಿ ಸಿ ಟಿವಿಯಲ್ಲಿ ಸಹ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…