ಅರಳುಮಲ್ಲಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೆಸ್ಟೋರೆಂಟ್ ಜನರಲ್ ಲೈಸನ್ಸ್ ಹೊಂದಿರುವ ನರಸಿಂಹಮೂರ್ತಿ ಎಂಬುವವರು ಪರವಾನಗಿ ನವೀಕರಣಕ್ಕೆ ಪಿಡಿಒ ಬಳಿ ಹೋಗಿದ್ದರು.
ಪರವಾನಗಿ ನವೀಕರಿಸಿಕೊಡಲು 5 ಲಕ್ಷ ಲಂಚದ ಹಣಕ್ಕೆ ಪಿಡಿಒ ಬೇಡಿಕೆ ಇಟ್ಟಿದ್ದರು. ಕೊನೆಗೂ 3.5ಲಕ್ಷಕ್ಕೆ ಮಾತುಕತೆಯಾಗಿತ್ತು. ಈ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದ ನರಸಿಂಹಮೂರ್ತಿ. ಅವರು ನೀಡಿದ ದೂರಿನ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಂಗಳವಾರ ಪಿಡಿಒ ನಿರಂಜನ್ ಅವರು ದೊಡ್ಡಬಳ್ಳಾಪುರ ತಾಲೂಕು ಪಂಚಾಯ್ತಿ ಆವರಣದಲ್ಲಿರುವ ಉದ್ಯೋಗ ಖಾತ್ರಿ ಯೋಜನೆ ಸಹಾಯಕ ನಿರ್ದೇಶಕರ ಕೊಠಡಿಯಲ್ಲಿ 3.5ಲಕ್ಷ ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಧಿಕಾರಿಯನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ಪಿ ಪವನ್ ನೆಜ್ಜೂರು, ಡಿಎಸ್ಪಿಗಳಾದ ಟಿ.ಸಿ. ವೆಂಕಟೇಶ್, ಗಿರೀಶ್ ರೋಡಕರ್, ಚಂದ್ರಕಾಂತ್, ವೆಂಕಟೇಶ್, ನಂದಕುಮಾರ್, ರಮೇಶ್ ಭಾಗವಹಿಸಿದ್ದರು.
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…
ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್ಆರ್ಟಿಸಿ ಬಸ್ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…