ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಇಂದು ವಜಾ ಮಾಡಿದೆ.
ಪ್ರಸ್ತುತ ನಟ ದರ್ಶನ್ ಅವರಿಗೆ ಜೈಲು ಊಟವೇ ತಿನ್ನಬೇಕಾಗಿದೆ.
ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.
ಜೈಲೂಟದಿಂದ ದರ್ಶನ್ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.
ದರ್ಶನ್ ಮನೆಯ ಊಟಕ್ಕೆ ಕೋರ್ಟ್ ನಿರಾಕರಣೆಗೆ ಪ್ರಮುಖ ಕಾರಣಗಳು ಏನು ಗೊತ್ತಾ…?
ಕರ್ನಾಟಕ ಪ್ರಿಜನ್ಸ್ ಕರೆಕ್ಷನ್ ಮ್ಯಾನುಯೆಲ್ -2021 ರ 728 ಪ್ರಕಾರ ಕೊಲೆ ಆರೋಪಿಗೆ ಮನೆ ಊಟ ಕೊಡೋ ಅವಕಾಶ ಇಲ್ಲ..
ಅಲ್ಲದೆ ಜೈಲು ನೀಡಿದ ವರದಿಯಲ್ಲಿ ಮನೆ ಊಟ ಅವಶ್ಯಕತೆ ಕಾಣುತ್ತಿಲ್ಲ ಅಂತ ವರದಿ..
ಮನೆ ಊಟ ಬೇಕು ಅನ್ನೋ ಹಾಗೆ ಯಾವುದೇ ವೈದ್ಯಕೀಯ ರಿಪೋರ್ಟ್ ಇಲ್ಲ…
ಹೀಗಾಗಿ ಕೋರ್ಟ್ ಅರ್ಜಿ ವಜಾ ಮಾಡಿದೆ.
ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…
ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…
ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…