ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್: ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಇಂದು ವಜಾ ಮಾಡಿದೆ.

ಪ್ರಸ್ತುತ ನಟ ದರ್ಶನ್​ ಅವರಿಗೆ ಜೈಲು ಊಟವೇ ತಿನ್ನಬೇಕಾಗಿದೆ.

ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.

ಜೈಲೂಟದಿಂದ ದರ್ಶನ್​ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.

ದರ್ಶನ್ ಮನೆಯ ಊಟಕ್ಕೆ ಕೋರ್ಟ್ ನಿರಾಕರಣೆಗೆ ಪ್ರಮುಖ ಕಾರಣಗಳು ಏನು ಗೊತ್ತಾ…?

ಕರ್ನಾಟಕ ಪ್ರಿಜನ್ಸ್ ಕರೆಕ್ಷನ್ ಮ್ಯಾನುಯೆಲ್ -2021 ರ 728 ಪ್ರಕಾರ ಕೊಲೆ ಆರೋಪಿಗೆ ಮನೆ ಊಟ ಕೊಡೋ ಅವಕಾಶ ಇಲ್ಲ..

ಅಲ್ಲದೆ ಜೈಲು ನೀಡಿದ ವರದಿಯಲ್ಲಿ ಮನೆ ಊಟ ಅವಶ್ಯಕತೆ ಕಾಣುತ್ತಿಲ್ಲ ಅಂತ ವರದಿ..

ಮನೆ ಊಟ ಬೇಕು ಅನ್ನೋ ಹಾಗೆ ಯಾವುದೇ ವೈದ್ಯಕೀಯ ರಿಪೋರ್ಟ್ ಇಲ್ಲ…

ಹೀಗಾಗಿ ಕೋರ್ಟ್ ಅರ್ಜಿ ವಜಾ‌ ಮಾಡಿದೆ.

Ramesh Babu

Journalist

Recent Posts

ಭೂ ಮಾಪನ ಕಾರ್ಯ ಸ್ಥಗಿತ, ರೈತರ ಆಕ್ರೋಶ: ಪರ್ಯಾಯ ವ್ಯವಸ್ಥೆ ಮಾಡುವಂತೆ ಒತ್ತಾಯ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…

19 minutes ago

ಮಹಿಳೆಯರ ಸಬಲೀಕರಣಕ್ಕೆ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆ ಜಾರಿ- ಬಿಜೆಪಿ ರಾಜ್ಯ ವಕ್ತಾರರಾದ ಅಶ್ವಿನಿ ಶಂಕರ್

ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…

1 hour ago

ಆಶಾ ಭೋಸ್ಲೆ…..ಸುಮಾರು 12000ಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿಯಾಗಿದ್ದವರು- ಅವರಿಗೆ ‌ಭಾವಪೂರ್ಣ ಶ್ರದ್ಧಾಂಜಲಿ……

ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…

11 hours ago

Документ_9

Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…

15 hours ago

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

23 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

1 day ago