ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಇಂದು ವಜಾ ಮಾಡಿದೆ.
ಪ್ರಸ್ತುತ ನಟ ದರ್ಶನ್ ಅವರಿಗೆ ಜೈಲು ಊಟವೇ ತಿನ್ನಬೇಕಾಗಿದೆ.
ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.
ಜೈಲೂಟದಿಂದ ದರ್ಶನ್ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.
ದರ್ಶನ್ ಮನೆಯ ಊಟಕ್ಕೆ ಕೋರ್ಟ್ ನಿರಾಕರಣೆಗೆ ಪ್ರಮುಖ ಕಾರಣಗಳು ಏನು ಗೊತ್ತಾ…?
ಕರ್ನಾಟಕ ಪ್ರಿಜನ್ಸ್ ಕರೆಕ್ಷನ್ ಮ್ಯಾನುಯೆಲ್ -2021 ರ 728 ಪ್ರಕಾರ ಕೊಲೆ ಆರೋಪಿಗೆ ಮನೆ ಊಟ ಕೊಡೋ ಅವಕಾಶ ಇಲ್ಲ..
ಅಲ್ಲದೆ ಜೈಲು ನೀಡಿದ ವರದಿಯಲ್ಲಿ ಮನೆ ಊಟ ಅವಶ್ಯಕತೆ ಕಾಣುತ್ತಿಲ್ಲ ಅಂತ ವರದಿ..
ಮನೆ ಊಟ ಬೇಕು ಅನ್ನೋ ಹಾಗೆ ಯಾವುದೇ ವೈದ್ಯಕೀಯ ರಿಪೋರ್ಟ್ ಇಲ್ಲ…
ಹೀಗಾಗಿ ಕೋರ್ಟ್ ಅರ್ಜಿ ವಜಾ ಮಾಡಿದೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…
ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…
ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…
ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…