ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಜೈಲಿನಲ್ಲಿರುವ ನಟ ದರ್ಶನ್ ಮನೆ ಊಟ, ಹಾಸಿಗೆ, ಬಟ್ಟೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು 24ನೇ ಎಸಿಎಂಎಂ ಕೋರ್ಟ್ ಇಂದು ವಜಾ ಮಾಡಿದೆ.
ಪ್ರಸ್ತುತ ನಟ ದರ್ಶನ್ ಅವರಿಗೆ ಜೈಲು ಊಟವೇ ತಿನ್ನಬೇಕಾಗಿದೆ.
ಜೈಲೂಟದಿಂದ ಅಜೀರ್ಣ, ಅತಿಸಾರ ಆಗಿದೆ. ಇದರಿಂದ ದೇಹದ ತೂಕ ಕಡಿಮೆಯಾಗುತ್ತಿದೆ ಎಂಬ ಕಾರಣ ನೀಡಿ ಮನೆಯ ಊಟ ತರಿಸಲು ಅನುಮತಿ ಕೋರಿ ದರ್ಶನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ವಿಶ್ವನಾಥ್ ಸಿ ಗೌಡರ್ ಅವರು, ಕೊಲೆ ಆರೋಪಿಗಳಿಗೆ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ. ಜೈಲು ನಿಯಮಾವಳಿ 728ರಲ್ಲಿ ಮನೆಯ ಊಟ, ಬಟ್ಟೆ, ಹಾಸಿಗೆ ಪಡೆಯಲು ಅವಕಾಶವಿಲ್ಲ ಎಂದು ಹೇಳಿ ಅರ್ಜಿ ವಜಾಗೊಳಿಸಿದ್ದಾರೆ.
ಜೈಲೂಟದಿಂದ ದರ್ಶನ್ಗೆ ಯಾವುದೇ ಸಮಸ್ಯೆ ಆಗಿಲ್ಲ. ಶೂಟಿಂಗ್ ವೇಳೆ ಆದ ಗಾಯದ ನೋವಿನ ಬಗ್ಗೆ ಮಾತ್ರ ವೈದ್ಯರು ಸಲಹೆ ನೀಡಿದ್ದಾರೆ. ಜೈಲಿನ ನಿಯಮಾವಳಿಯಲ್ಲಿ ಮನೆಯೂಟಕ್ಕೆ ಅವಕಾಶವಿಲ್ಲ ಎಂದು ಪೊಲೀಸರ ಪರ ವಿಶೇಷ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಿದ್ದರು.
ದರ್ಶನ್ ಮನೆಯ ಊಟಕ್ಕೆ ಕೋರ್ಟ್ ನಿರಾಕರಣೆಗೆ ಪ್ರಮುಖ ಕಾರಣಗಳು ಏನು ಗೊತ್ತಾ…?
ಕರ್ನಾಟಕ ಪ್ರಿಜನ್ಸ್ ಕರೆಕ್ಷನ್ ಮ್ಯಾನುಯೆಲ್ -2021 ರ 728 ಪ್ರಕಾರ ಕೊಲೆ ಆರೋಪಿಗೆ ಮನೆ ಊಟ ಕೊಡೋ ಅವಕಾಶ ಇಲ್ಲ..
ಅಲ್ಲದೆ ಜೈಲು ನೀಡಿದ ವರದಿಯಲ್ಲಿ ಮನೆ ಊಟ ಅವಶ್ಯಕತೆ ಕಾಣುತ್ತಿಲ್ಲ ಅಂತ ವರದಿ..
ಮನೆ ಊಟ ಬೇಕು ಅನ್ನೋ ಹಾಗೆ ಯಾವುದೇ ವೈದ್ಯಕೀಯ ರಿಪೋರ್ಟ್ ಇಲ್ಲ…
ಹೀಗಾಗಿ ಕೋರ್ಟ್ ಅರ್ಜಿ ವಜಾ ಮಾಡಿದೆ.
ಬೆಂಗಳೂರು ಗ್ರಾಮಾಂತರ: ಸಾರ್ವಜನಿಕ ಸ್ಥಳಗಳಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ ಹಾಗೂ ಬಿಲ್ಬೋರ್ಡ್ಗಳನ್ನು ಅಳವಡಿಸದಂತೆ ರಾಜ್ಯ ಸರ್ಕಾರ ಮತ್ತು ನ್ಯಾಯಾಲಯಗಳು…
ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್ಗಳು ಹಾಗೂ ಇತರೆ…
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…