ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದರು.
ಆದರೆ ಕೇಸಿನಲ್ಲಿ ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು ನಿಗದಿಪಡಿಸಲಾಯಿತು.
ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಹಾಜರು ಇರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.
ಹೈಕೋರ್ಟ್ ಜಾಮೀನು ಆದೇಶ ರೀತಿಯ ಬಗ್ಗೆ ಆಕ್ಷೇಪಿಸಿದ್ದ ನ್ಯಾಯಪೀಠ ಲಿಖಿತ ವಾದಮಂಡನೆಗಳನ್ನು ಸಲ್ಲಿಸುವಂತೆ ಎರಡೂ ಕಡೆ ವಕೀಲರಿಗೆ ಸೂಚಿಸಿತ್ತು. ದರ್ಶನ್ ವಿರುದ್ಧದ ಹಳೆಯ ಕೇಸ್ ಗಳ ಬಗ್ಗೆಯೂ ದಾಖಲೆ ಸಲ್ಲಿಕೆ ಮಾಡುವಂತೆ ಕೇಳಿತ್ತು. ಪ್ರಾಸಿಕ್ಯೂಷನ್ ಪರ ವಕೀಲರಿಂದ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದೆ.
ಚಾರ್ಜ್ ಪ್ರೇಮ್ ಸಲುವಾಗಿ ಕೋರ್ಟ್ ಎರಡು ಕಡೆಯ ವಾದ ಆಲಿಸಲಿದೆ. ಚಾರ್ಜ್ ಪ್ರೇಮ್ ಎಂದರೆ ದೋಷಾರೋಪ ಹೊರಿಸುವುದು. ಯಾವ ಯಾವ ಸೆಕ್ಷನ್ಗಳಡಿ ಆರೋಪ ಇದೆ ಎಂದು ಕೋರ್ಟ್ನಲ್ಲಿ ಜಡ್ಜ್ ಆರೋಪ ಹೊರಿಸುತ್ತಾರೆ. ಆ ಸೆಕ್ಷನ್ಗಳ ಬಗ್ಗೆ ಕೋರ್ಟ್ನಲ್ಲಿ ಇನ್ನೂ ಮುಂದೆ ವಾದ ನಡೆಯುತ್ತೆ. ಹೀಗಾಗಿ ಆರೋಪಿಗಳಿಗೆ ಟೆನ್ಷನ್ ಶುರುವಾಗಿದೆ.
ಈಗಾಗಲೇ ಸುಪ್ರೀಂ ಕೋರ್ಟ್ ಜಾಮೀನು ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಟ್ರಯಲ್ ಬಗ್ಗೆ ಪ್ರಶ್ನಿಸಿತ್ತು. ವಿಚಾರಣೆ ವೇಳೆ ಎಷ್ಟು ದಿನದಲ್ಲಿ ಟ್ರಯಲ್ ಆರಂಭ ಮಾಡ್ತೀರಾ ಎಂದು ಪ್ರಶ್ನೆ ಮಾಡಿತ್ತು. ಆಗ ಸರ್ಕಾರದ ಪರ ವಕೀಲರು ಆರು ತಿಂಗಳಲ್ಲಿ ವಿಚಾರಣೆ ಮುಗಿಸುತ್ತೇವೆ ಎಂದು ಉತ್ತರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಟ್ರಯಲ್ ದಿನಾಂಕ ನಿಗದಿ ಆಗುವ ಸಾಧ್ಯತೆ ಇತ್ತು. 64ನೇ ಸೆಷನ್ಸ್ ಕೋರ್ಟ್ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದ್ದಾರೆ. ಒಂದು ಕಡೆ ಸೆಷನ್ಸ್ ಕೋರ್ಟ್ನಲ್ಲಿ ಟ್ರಯಲ್ ಆರಂಭ ಚಿಂತೆಯಾದ್ರೆ, ಮತ್ತೊಂದು ಕಡೆ ಸುಪ್ರೀಂ ಕೋರ್ಟ್ನಲ್ಲಿ ಬೇಲ್ ಭವಿಷ್ಯದ ಆತಂಕ ಶುರುವಾಗಿದೆ.
ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…
ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…