ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಹಾಗೂ ಇತರರು 64ನೇ ಸೆಷನ್ಸ್ ಕೋರ್ಟ್​ ಗೆ ಹಾಜರ್: ಸೆ.9 ಕ್ಕೆ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್​ ಗೆ ಹಾಜರಾಗಿದ್ದರು.

ಆದರೆ ಕೇಸಿನಲ್ಲಿ ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್​​ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು ನಿಗದಿಪಡಿಸಲಾಯಿತು.

ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಹಾಜರು ಇರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಹೈಕೋರ್ಟ್ ಜಾಮೀನು ಆದೇಶ ರೀತಿಯ ಬಗ್ಗೆ ಆಕ್ಷೇಪಿಸಿದ್ದ ನ್ಯಾಯಪೀಠ ಲಿಖಿತ ವಾದಮಂಡನೆಗಳನ್ನು ಸಲ್ಲಿಸುವಂತೆ ಎರಡೂ ಕಡೆ ವಕೀಲರಿಗೆ ಸೂಚಿಸಿತ್ತು. ದರ್ಶನ್ ವಿರುದ್ಧದ ಹಳೆಯ ಕೇಸ್ ಗಳ ಬಗ್ಗೆಯೂ ದಾಖಲೆ ಸಲ್ಲಿಕೆ ಮಾಡುವಂತೆ ಕೇಳಿತ್ತು. ಪ್ರಾಸಿಕ್ಯೂಷನ್ ಪರ ವಕೀಲರಿಂದ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದೆ.

ಚಾರ್ಜ್ ಪ್ರೇಮ್ ಸಲುವಾಗಿ ಕೋರ್ಟ್ ಎರಡು ಕಡೆಯ ವಾದ ಆಲಿಸಲಿದೆ. ಚಾರ್ಜ್ ಪ್ರೇಮ್ ಎಂದರೆ ದೋಷಾರೋಪ ಹೊರಿಸುವುದು‌. ಯಾವ ಯಾವ ಸೆಕ್ಷನ್​ಗಳಡಿ ಆರೋಪ ಇದೆ ಎಂದು ಕೋರ್ಟ್​ನಲ್ಲಿ ಜಡ್ಜ್ ಆರೋಪ ಹೊರಿಸುತ್ತಾರೆ. ಆ ಸೆಕ್ಷನ್​​ಗಳ ಬಗ್ಗೆ ಕೋರ್ಟ್​ನಲ್ಲಿ ಇನ್ನೂ ಮುಂದೆ ವಾದ ನಡೆಯುತ್ತೆ. ಹೀಗಾಗಿ ಆರೋಪಿಗಳಿಗೆ ಟೆನ್ಷನ್ ಶುರುವಾಗಿದೆ.

ಈಗಾಗಲೇ ಸುಪ್ರೀಂ ಕೋರ್ಟ್ ಜಾಮೀನು ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಟ್ರಯಲ್ ಬಗ್ಗೆ ಪ್ರಶ್ನಿಸಿತ್ತು. ವಿಚಾರಣೆ ವೇಳೆ ಎಷ್ಟು ದಿನದಲ್ಲಿ ಟ್ರಯಲ್ ಆರಂಭ ಮಾಡ್ತೀರಾ ಎಂದು ಪ್ರಶ್ನೆ ಮಾಡಿತ್ತು. ಆಗ ಸರ್ಕಾರದ ಪರ ವಕೀಲರು ಆರು ತಿಂಗಳಲ್ಲಿ ವಿಚಾರಣೆ ಮುಗಿಸುತ್ತೇವೆ ಎಂದು ಉತ್ತರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಟ್ರಯಲ್ ದಿನಾಂಕ ನಿಗದಿ ಆಗುವ ಸಾಧ್ಯತೆ ಇತ್ತು. 64ನೇ ಸೆಷನ್ಸ್ ಕೋರ್ಟ್​ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಿದ್ದಾರೆ. ಒಂದು ಕಡೆ ಸೆಷನ್ಸ್ ಕೋರ್ಟ್​ನಲ್ಲಿ ಟ್ರಯಲ್ ಆರಂಭ ಚಿಂತೆಯಾದ್ರೆ, ಮತ್ತೊಂದು ಕಡೆ ಸುಪ್ರೀಂ ಕೋರ್ಟ್​ನಲ್ಲಿ ಬೇಲ್ ಭವಿಷ್ಯದ ಆತಂಕ ಶುರುವಾಗಿದೆ.

Ramesh Babu

Journalist

Recent Posts

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 hour ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

2 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

4 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

7 hours ago

ಖಾತೆ ಹಂಚಿಕೆ ಕುರಿತು ಸಚಿವ ಕೆ.ಎಚ್. ಮುನಿಯಪ್ಪ ಅಸಮಾಧಾನ: “ಸಿನಿಯಾರಿಟಿಗೆ ಗೌರವ ಸಿಕ್ಕಿಲ್ಲ”- ಕೆ.ಎಚ್ ಮುನಿಯಪ್ಪ

ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…

9 hours ago

ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…

12 hours ago