ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್ ಗೆ ಹಾಜರಾಗಿದ್ದರು.
ಆದರೆ ಕೇಸಿನಲ್ಲಿ ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು ನಿಗದಿಪಡಿಸಲಾಯಿತು.
ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಹಾಜರು ಇರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.
ಹೈಕೋರ್ಟ್ ಜಾಮೀನು ಆದೇಶ ರೀತಿಯ ಬಗ್ಗೆ ಆಕ್ಷೇಪಿಸಿದ್ದ ನ್ಯಾಯಪೀಠ ಲಿಖಿತ ವಾದಮಂಡನೆಗಳನ್ನು ಸಲ್ಲಿಸುವಂತೆ ಎರಡೂ ಕಡೆ ವಕೀಲರಿಗೆ ಸೂಚಿಸಿತ್ತು. ದರ್ಶನ್ ವಿರುದ್ಧದ ಹಳೆಯ ಕೇಸ್ ಗಳ ಬಗ್ಗೆಯೂ ದಾಖಲೆ ಸಲ್ಲಿಕೆ ಮಾಡುವಂತೆ ಕೇಳಿತ್ತು. ಪ್ರಾಸಿಕ್ಯೂಷನ್ ಪರ ವಕೀಲರಿಂದ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದೆ.
ಚಾರ್ಜ್ ಪ್ರೇಮ್ ಸಲುವಾಗಿ ಕೋರ್ಟ್ ಎರಡು ಕಡೆಯ ವಾದ ಆಲಿಸಲಿದೆ. ಚಾರ್ಜ್ ಪ್ರೇಮ್ ಎಂದರೆ ದೋಷಾರೋಪ ಹೊರಿಸುವುದು. ಯಾವ ಯಾವ ಸೆಕ್ಷನ್ಗಳಡಿ ಆರೋಪ ಇದೆ ಎಂದು ಕೋರ್ಟ್ನಲ್ಲಿ ಜಡ್ಜ್ ಆರೋಪ ಹೊರಿಸುತ್ತಾರೆ. ಆ ಸೆಕ್ಷನ್ಗಳ ಬಗ್ಗೆ ಕೋರ್ಟ್ನಲ್ಲಿ ಇನ್ನೂ ಮುಂದೆ ವಾದ ನಡೆಯುತ್ತೆ. ಹೀಗಾಗಿ ಆರೋಪಿಗಳಿಗೆ ಟೆನ್ಷನ್ ಶುರುವಾಗಿದೆ.
ಈಗಾಗಲೇ ಸುಪ್ರೀಂ ಕೋರ್ಟ್ ಜಾಮೀನು ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಟ್ರಯಲ್ ಬಗ್ಗೆ ಪ್ರಶ್ನಿಸಿತ್ತು. ವಿಚಾರಣೆ ವೇಳೆ ಎಷ್ಟು ದಿನದಲ್ಲಿ ಟ್ರಯಲ್ ಆರಂಭ ಮಾಡ್ತೀರಾ ಎಂದು ಪ್ರಶ್ನೆ ಮಾಡಿತ್ತು. ಆಗ ಸರ್ಕಾರದ ಪರ ವಕೀಲರು ಆರು ತಿಂಗಳಲ್ಲಿ ವಿಚಾರಣೆ ಮುಗಿಸುತ್ತೇವೆ ಎಂದು ಉತ್ತರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಟ್ರಯಲ್ ದಿನಾಂಕ ನಿಗದಿ ಆಗುವ ಸಾಧ್ಯತೆ ಇತ್ತು. 64ನೇ ಸೆಷನ್ಸ್ ಕೋರ್ಟ್ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿದ್ದಾರೆ. ಒಂದು ಕಡೆ ಸೆಷನ್ಸ್ ಕೋರ್ಟ್ನಲ್ಲಿ ಟ್ರಯಲ್ ಆರಂಭ ಚಿಂತೆಯಾದ್ರೆ, ಮತ್ತೊಂದು ಕಡೆ ಸುಪ್ರೀಂ ಕೋರ್ಟ್ನಲ್ಲಿ ಬೇಲ್ ಭವಿಷ್ಯದ ಆತಂಕ ಶುರುವಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…
ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…