ರೇಣುಕಾ ಸ್ವಾಮಿ ಕೊಲೆ ಪ್ರಕರಣ: ದರ್ಶನ್, ಪವಿತ್ರಾ ಗೌಡ ಹಾಗೂ ಇತರರು 64ನೇ ಸೆಷನ್ಸ್ ಕೋರ್ಟ್​ ಗೆ ಹಾಜರ್: ಸೆ.9 ಕ್ಕೆ ವಿಚಾರಣೆ ಮುಂದೂಡಿಕೆ

ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಇಂದು ದರ್ಶನ್, ಪವಿತ್ರಾ ಗೌಡ ಹಾಗೂ ಇತರರು ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್​ ಗೆ ಹಾಜರಾಗಿದ್ದರು.

ಆದರೆ ಕೇಸಿನಲ್ಲಿ ಎ10 ವಿನಯ್ , ಎ15 ,ಕಾರ್ತಿಕ್ ಹಾಗೂ ಎ 16 ಕೇಶವಮೂರ್ತಿ ಮತ್ತು ಎ17 ನಿಖಿಲ್ ಕೋರ್ಟ್​​ಗೆ ಹಾಜಾರಾಗಿಲ್ಲ ಹೀಗಾಗಿ, ಸೆಪ್ಟೆಂಬರ್9 ಕ್ಕೆ ಮುಂದಿನ ದಿನಾಂಕ ವಿಚಾರಣೆಯನ್ನು ನಿಗದಿಪಡಿಸಲಾಯಿತು.

ಆ ದಿನ ಪ್ರಕರಣದ ಎಲ್ಲಾ ಆರೋಪಿಗಳು ಕಡ್ಡಾಯವಾಗಿ ಹಾಜರು ಇರಬೇಕು ಎಂದು ಕೋರ್ಟ್ ನಿರ್ದೇಶಿಸಿದೆ.

ಹೈಕೋರ್ಟ್ ಜಾಮೀನು ಆದೇಶ ರೀತಿಯ ಬಗ್ಗೆ ಆಕ್ಷೇಪಿಸಿದ್ದ ನ್ಯಾಯಪೀಠ ಲಿಖಿತ ವಾದಮಂಡನೆಗಳನ್ನು ಸಲ್ಲಿಸುವಂತೆ ಎರಡೂ ಕಡೆ ವಕೀಲರಿಗೆ ಸೂಚಿಸಿತ್ತು. ದರ್ಶನ್ ವಿರುದ್ಧದ ಹಳೆಯ ಕೇಸ್ ಗಳ ಬಗ್ಗೆಯೂ ದಾಖಲೆ ಸಲ್ಲಿಕೆ ಮಾಡುವಂತೆ ಕೇಳಿತ್ತು. ಪ್ರಾಸಿಕ್ಯೂಷನ್ ಪರ ವಕೀಲರಿಂದ ಸುಪ್ರೀಂಕೋರ್ಟ್ ಗೆ ಸಲ್ಲಿಕೆಯಾಗಿದೆ.

ಚಾರ್ಜ್ ಪ್ರೇಮ್ ಸಲುವಾಗಿ ಕೋರ್ಟ್ ಎರಡು ಕಡೆಯ ವಾದ ಆಲಿಸಲಿದೆ. ಚಾರ್ಜ್ ಪ್ರೇಮ್ ಎಂದರೆ ದೋಷಾರೋಪ ಹೊರಿಸುವುದು‌. ಯಾವ ಯಾವ ಸೆಕ್ಷನ್​ಗಳಡಿ ಆರೋಪ ಇದೆ ಎಂದು ಕೋರ್ಟ್​ನಲ್ಲಿ ಜಡ್ಜ್ ಆರೋಪ ಹೊರಿಸುತ್ತಾರೆ. ಆ ಸೆಕ್ಷನ್​​ಗಳ ಬಗ್ಗೆ ಕೋರ್ಟ್​ನಲ್ಲಿ ಇನ್ನೂ ಮುಂದೆ ವಾದ ನಡೆಯುತ್ತೆ. ಹೀಗಾಗಿ ಆರೋಪಿಗಳಿಗೆ ಟೆನ್ಷನ್ ಶುರುವಾಗಿದೆ.

ಈಗಾಗಲೇ ಸುಪ್ರೀಂ ಕೋರ್ಟ್ ಜಾಮೀನು ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಕಾಯ್ದಿರಿಸಿದೆ. ಮೇಲ್ಮನವಿ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಟ್ರಯಲ್ ಬಗ್ಗೆ ಪ್ರಶ್ನಿಸಿತ್ತು. ವಿಚಾರಣೆ ವೇಳೆ ಎಷ್ಟು ದಿನದಲ್ಲಿ ಟ್ರಯಲ್ ಆರಂಭ ಮಾಡ್ತೀರಾ ಎಂದು ಪ್ರಶ್ನೆ ಮಾಡಿತ್ತು. ಆಗ ಸರ್ಕಾರದ ಪರ ವಕೀಲರು ಆರು ತಿಂಗಳಲ್ಲಿ ವಿಚಾರಣೆ ಮುಗಿಸುತ್ತೇವೆ ಎಂದು ಉತ್ತರಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಟ್ರಯಲ್ ದಿನಾಂಕ ನಿಗದಿ ಆಗುವ ಸಾಧ್ಯತೆ ಇತ್ತು. 64ನೇ ಸೆಷನ್ಸ್ ಕೋರ್ಟ್​ನಲ್ಲಿ ನ್ಯಾಯಾಧೀಶರಾದ ಐ.ಪಿ.ನಾಯ್ಕ್ ಅವರು ವಿಚಾರಣೆಯನ್ನು ಸೆಪ್ಟೆಂಬರ್‌ 9ಕ್ಕೆ ಮುಂದೂಡಿದ್ದಾರೆ. ಒಂದು ಕಡೆ ಸೆಷನ್ಸ್ ಕೋರ್ಟ್​ನಲ್ಲಿ ಟ್ರಯಲ್ ಆರಂಭ ಚಿಂತೆಯಾದ್ರೆ, ಮತ್ತೊಂದು ಕಡೆ ಸುಪ್ರೀಂ ಕೋರ್ಟ್​ನಲ್ಲಿ ಬೇಲ್ ಭವಿಷ್ಯದ ಆತಂಕ ಶುರುವಾಗಿದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

5 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago