ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ: ರಕ್ತದ ಮಾದರಿಗಳ ಫಲಿತಾಂಶ ಪಾಸಿಟಿವ್

ಇತ್ತೀಚೆಗೆ ಬೆಂಗಳೂರು ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದವರ ರಕ್ತದ ಮಾದರಿಗಳ ಫಲಿತಾಂಶ ಹೊರಬಿದ್ದಿದೆ.

ತೆಲುಗು ನಟಿ ಹೇಮಾ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ವ್ಯಕ್ತಿಯೊಬ್ಬರ ಹುಟ್ಟುಹಬ್ಬದ ಪಾರ್ಟಿ ನೆಪದಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಇದರಲ್ಲಿ ಒಟ್ಟು 103 ಮಂದಿ ಪಾಲ್ಗೊಂಡಿದ್ದರು. ಭಾಗವಹಿಸಿದವರಲ್ಲಿ 73 ಪುರುಷರು ಮತ್ತು 30 ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆ ಮೇ 19 ರಂದು ಬೆಳ್ಳಂಬೆಳಗ್ಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ದಾಳಿ ನಡೆಸಿದ ಪೊಲೀಸರು 1.5 ಕೋಟಿ ಮೌಲ್ಯದ MDMA (Ecstacy) ಮಾತ್ರೆಗಳು, ಹೈಡ್ರೋ ಗಾಂಜಾ, ಕೊಕೇನ್, ಹೈ ಎಂಡ್ ಕಾರುಗಳು, DJ ಉಪಕರಣಗಳು, ಧ್ವನಿ ಮತ್ತು ಬೆಳಕು ಉಪಕರಣಗಳು ಸೇರಿದಂತೆ 1.5 ಕೋಟಿ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದರು.

ಪಾರ್ಟಿಯಲ್ಲಿ ಭಾಗವಹಿಸಿದವರ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು, ಇದರಲ್ಲಿ 59 ಪುರುಷರು ಮತ್ತು 27 ಮಹಿಳೆಯರು ಮಾದಕ ದ್ರವ್ಯ ಸೇವನೆ ಕುರಿತಾದಂತಹ ಪರೀಕ್ಷಾ ಫಲಿತಾಂಶ ಪಾಸಿಟಿವ್ ಬಂದಿದೆ ಪೊಲೀಸರು ತಿಳಿಸಿದ್ದಾರೆ. ಪಾಸಿಟಿವ್ ಬಂದಿರುವವರಿಗೆ ಕೇಂದ್ರ ಅಪರಾಧ ವಿಭಾಗವು ನೋಟಿಸ್ ಜಾರಿಯಾಗಲಿದೆ.

ಆದರೆ, ನಾನು ಪಾರ್ಟಿಯಲ್ಲಿರಲಿಲ್ಲ, ಹೈದರಾಬಾದ್ ನ ಫಾರ್ಮ್ ಹೌಸ್ ನಲ್ಲಿದ್ದೇನೆ ಎಂದು ಮೊದಲೊಂದು ವಿಡಿಯೊ ಮಾಡಿ ನಂತರ ನಿನ್ನೆ ಮನೆಯಲ್ಲಿ ಅಡುಗೆ ಮಾಡುತ್ತಿರುವ ವಿಡಿಯೊವನ್ನು ನಟಿ ಹೇಮಾ ಹರಿಬಿಟ್ಟಿದ್ದರು. ಆದರೆ ಅದು ಸುಳ್ಳು, ಅವರು ಜಿ ಆರ್ ಫಾರಂ ಹೌಸ್ ನಲ್ಲಿಯೇ ಇದ್ದಾರೆ ಎಂದು ಇಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸುದ್ದಿಗೋಷ್ಠಿ ನಡೆಸಿ ರೇವ್ ಪಾರ್ಟಿ ಮೇಲೆ ನಡೆದ ಸಿಸಿಬಿ ಪೊಲೀಸರ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ನಟಿ ಹೇಮಾ, ಜಿಆರ್ ಫಾರಂ ಹೌಸ್ ನಲ್ಲಿ ಇದ್ದಿದ್ದು ನಿಜ ಎಂದಿದ್ದಾರೆ. ಪಾರ್ಟಿಗೆ ಬಂದಿದ್ದ ಎಲ್ಲರ ರಕ್ತ ಪರೀಕ್ಷೆ ಮಾಡಿ ಹೊರಕಳಿಸಿದಾಗ ಹೇಗೋ ಕಣ್ತಪ್ಪಿಸಿ ಹೋಗಿ ಹೇಮಾ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

6 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

7 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

8 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

18 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

18 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

21 hours ago