ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ: ರಕ್ತದ ಮಾದರಿಗಳ ಫಲಿತಾಂಶ ಪಾಸಿಟಿವ್

ಇತ್ತೀಚೆಗೆ ಬೆಂಗಳೂರು ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದವರ ರಕ್ತದ ಮಾದರಿಗಳ ಫಲಿತಾಂಶ ಹೊರಬಿದ್ದಿದೆ.

ತೆಲುಗು ನಟಿ ಹೇಮಾ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ವ್ಯಕ್ತಿಯೊಬ್ಬರ ಹುಟ್ಟುಹಬ್ಬದ ಪಾರ್ಟಿ ನೆಪದಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಇದರಲ್ಲಿ ಒಟ್ಟು 103 ಮಂದಿ ಪಾಲ್ಗೊಂಡಿದ್ದರು. ಭಾಗವಹಿಸಿದವರಲ್ಲಿ 73 ಪುರುಷರು ಮತ್ತು 30 ಮಹಿಳೆಯರು ಸೇರಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆ ಮೇ 19 ರಂದು ಬೆಳ್ಳಂಬೆಳಗ್ಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ದಾಳಿ ನಡೆಸಿದ ಪೊಲೀಸರು 1.5 ಕೋಟಿ ಮೌಲ್ಯದ MDMA (Ecstacy) ಮಾತ್ರೆಗಳು, ಹೈಡ್ರೋ ಗಾಂಜಾ, ಕೊಕೇನ್, ಹೈ ಎಂಡ್ ಕಾರುಗಳು, DJ ಉಪಕರಣಗಳು, ಧ್ವನಿ ಮತ್ತು ಬೆಳಕು ಉಪಕರಣಗಳು ಸೇರಿದಂತೆ 1.5 ಕೋಟಿ ರೂ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದರು.

ಪಾರ್ಟಿಯಲ್ಲಿ ಭಾಗವಹಿಸಿದವರ ರಕ್ತದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು, ಇದರಲ್ಲಿ 59 ಪುರುಷರು ಮತ್ತು 27 ಮಹಿಳೆಯರು ಮಾದಕ ದ್ರವ್ಯ ಸೇವನೆ ಕುರಿತಾದಂತಹ ಪರೀಕ್ಷಾ ಫಲಿತಾಂಶ ಪಾಸಿಟಿವ್ ಬಂದಿದೆ ಪೊಲೀಸರು ತಿಳಿಸಿದ್ದಾರೆ. ಪಾಸಿಟಿವ್ ಬಂದಿರುವವರಿಗೆ ಕೇಂದ್ರ ಅಪರಾಧ ವಿಭಾಗವು ನೋಟಿಸ್ ಜಾರಿಯಾಗಲಿದೆ.

ಆದರೆ, ನಾನು ಪಾರ್ಟಿಯಲ್ಲಿರಲಿಲ್ಲ, ಹೈದರಾಬಾದ್ ನ ಫಾರ್ಮ್ ಹೌಸ್ ನಲ್ಲಿದ್ದೇನೆ ಎಂದು ಮೊದಲೊಂದು ವಿಡಿಯೊ ಮಾಡಿ ನಂತರ ನಿನ್ನೆ ಮನೆಯಲ್ಲಿ ಅಡುಗೆ ಮಾಡುತ್ತಿರುವ ವಿಡಿಯೊವನ್ನು ನಟಿ ಹೇಮಾ ಹರಿಬಿಟ್ಟಿದ್ದರು. ಆದರೆ ಅದು ಸುಳ್ಳು, ಅವರು ಜಿ ಆರ್ ಫಾರಂ ಹೌಸ್ ನಲ್ಲಿಯೇ ಇದ್ದಾರೆ ಎಂದು ಇಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸುದ್ದಿಗೋಷ್ಠಿ ನಡೆಸಿ ರೇವ್ ಪಾರ್ಟಿ ಮೇಲೆ ನಡೆದ ಸಿಸಿಬಿ ಪೊಲೀಸರ ದಾಳಿಯ ಬಗ್ಗೆ ಮಾಹಿತಿ ನೀಡಿದ್ದಾರೆ.

ನಟಿ ಹೇಮಾ, ಜಿಆರ್ ಫಾರಂ ಹೌಸ್ ನಲ್ಲಿ ಇದ್ದಿದ್ದು ನಿಜ ಎಂದಿದ್ದಾರೆ. ಪಾರ್ಟಿಗೆ ಬಂದಿದ್ದ ಎಲ್ಲರ ರಕ್ತ ಪರೀಕ್ಷೆ ಮಾಡಿ ಹೊರಕಳಿಸಿದಾಗ ಹೇಗೋ ಕಣ್ತಪ್ಪಿಸಿ ಹೋಗಿ ಹೇಮಾ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

6 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

9 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

21 hours ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

22 hours ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

24 hours ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago