ರೈತನಿಗೆ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಮೋಸ: ಎಟಿಎಂ ಕಾರ್ಡ್ ಬದಲಿಸಿ ದೋಖಾ: ರೈತನ ಎಟಿಎಂ ಕಾರ್ಡ್ ಬಳಸಿ ಚಿನ್ನ ಖರೀದಿ ಮಾಡಿದ್ದ ಭೂಪ

ಕೆಲವರಿಗೆ ಇನ್ನೂ ಎಟಿಎಂಗಳಲ್ಲಿ ಎಟಿಎಂ ಬಳಸಿ ಹಣ ಡ್ರಾ ಮಾಡಲು ಬರುವುದಿಲ್ಲ. ಎಟಿಎಂನಲ್ಲಿ ಹಣ ಪಡೆಯಲು ಬೇರೊಬ್ಬರ ಸಹಾಯ ಪಡೆಯಲು ಹೋದಾಗ ದೊಡ್ಡ‌ ದೋಖಾ ನಡೆದು ಹೋಗಿರುತ್ತದೆ.

ಎಟಿಎಂನಲ್ಲಿ ಹಣ‌ ಪಡೆಯಲು ಬಾರದೇ ಪರದಾಡುವವರನ್ನ ಟಾರ್ಗೆಟ್ ಮಾಡಿಕೊಂಡು ಎಟಿಎಂ ಕಾರ್ಡಗಳನ್ನೇ ಬದಲಿಸಿ ಸಾವಿರಾರು ರೂಪಾಯಿ ಹಣ ಎಗರಿಸುಲು ಖದೀಮರು ಕಾದುಕುಳಿತಿರುತ್ತಾರೆ.

ಇಂತಹದ್ದೇ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಖದೀಮರ ಮಾಯಾಜಾಲಕ್ಕೆ ಸಿಲುಕಿ ಎಟಿಎಂ ಜೊತೆಗೆ ಹಣ ಕಳೆದುಕೊಂಡಿದ್ದಾನೆ.

ಎಟಿಎಂ ಬಳಿ ಹಣ ಡ್ರಾ ಮಾಡಲು ಬಾರದವರು ಯಾರಾದರು ಬರುತ್ತಾರ ಅಂತ ಖದೀಮನೊಬ್ಬ ನೋಡುತ್ತಾ ಕಾದು ಕುಳಿತಿದ್ದ. ಇದೇ ವೇಳೆ ರಾಜಣ್ಣ ಅನ್ನೂ ರೇಷ್ಮೆ ಬೆಳೆಯುವ ಈ ರೈತ ಗೂಡು ಮಾರಿದ ಹಣ ಡ್ರಾ ಮಾಡೋಕ್ಕೆ ಅಂತ ಎಟಿಎಂಗೆ ಬಂದು ಹಣ ಡ್ರಾ ಮಾಡಲಾಗದೆ ಪರದಾಡಿದ್ದಾನೆ. ಹೀಗಾಗಿ ರಾಜಣ್ಣನ ಸಹಾಯಕ್ಕೆ ಬರುವಂತೆ ಬಂದ ಭೂಪ ಮೊದಲಿಗೆ ರೈತನಿಗೆ ಹಣ ಡ್ರಾ ಮಾಡಿಕೊಟ್ಟಿದ್ದು ನಂತರ ರೈತನ ಕಾರ್ಡ್ ಪಡೆದು ಬೇರೋಂದು ಕಾರ್ಡ್ ನೀಡಿ ಎಸ್ಕೇಪ್ ಆಗಿದ್ದಾನೆ. ಜೊತೆಗೆ ವಿಜಯಪುರ ಪಟ್ಟಣದ ಚಿನ್ನದಂಗಡಿ ಒಂದಕ್ಕೆ ಹೋಗಿದ್ದ ಭೂಪ ಅಲ್ಲಿ ಇದೇ ರೈತನ ಕಾರ್ಡ್ ಬಳಸಿ ಚಿನ್ನದ ಉಂಗುರ ಖರೀದಿಸಿ ಎಸ್ಕೇಪ್ ಆಗಿದ್ದಾನೆ.

ಚಿನ್ನದಂಗಡಿಯಲ್ಲಿ ಉಂಗುರ ಖರೀದಿಸಿದ್ದಕ್ಕೆ ಹಣ ಪಾವತಿ ಮಾಡಿದ ಸಂದೇಶ ರೈತನ ಮೊಬೈಲ್ ಗೆ ಬಂದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ರೈತ ರಾಜಣ್ಣ ದೂರು ನೀಡಿದ್ದ. ಹೀಗಾಗಿ ದೂರು ಪಡೆದು ತನಿಖೆ ನಡೆಸಿದ ಪೊಲೀಸರು ಚಿಂತಾಮಣಿ ಮೂಲದ ಗುರುಮೂರ್ತಿ ಅನ್ನೋ ಈ ವಂಚಕನನ್ನ ಪತ್ತೆ ಮಾಡಿ ಬಂಧಿಸಿದ್ದಾರೆ.

ಜೊತೆಗೆ ಅರೊಪಿ ಗುರುಮೂರ್ತಿ ಇದೇ ರೀತಿ ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಕಾರ್ಡ್ ಬದಲಿಸಿ ಕೆಲವರಿಗೆ ವಂಚನೆ ಮಾಡಿ ಜೈಲುವಾಸ ಸಹ ಅನುಭವಿಸಿದ್ದಾನೆ. ಕಳೆದ ಜನವರಿಯಲ್ಲಿ ಜೈಲಿಂದ ಬಿಡುಗಡೆಯಾಗಿ ಈಚೆ ಬಂದಿದ್ದಾನೆ. ಆದರೆ ಜೈಲಿಂದ ಬಂದರೂ ಬುದ್ದಿ ಕಲಿಯದ ಭೂಪ ಮತ್ತದೆ ಕೆಲಸ ಮಾಡಲು ಹೋಗಿ ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾ‌ನೆ.

ಇನ್ನು, ಪೊಲೀಸರು ಆರೋಪಿಯಿಂದ ಎರಡು ಚಿನ್ನದ ಉಂಗುರ ಎಟಿಎಂ ಕಾರ್ಡ್ಗಳನ್ನ ವಶಕ್ಕೆ ಪಡೆದು ಬಡ ರೈತನಿಗೆ ವಾಪಸ್ ನೀಡಿದ್ದಾರೆ.

ಒಟ್ಟಾರೆ ಮೋಸ ಹೋಗುವವರು ಎಲ್ಲಿವರೆಗೂ ಇರ್ತಾರೋ ಅಲ್ಲಿ ವರೆಗೂ ವಂಚಕರು‌ ಇದ್ದೇ ಇರ್ತಾರೆ ಅನ್ನುವ ಹಾಗೆ ಬಡ ರೈತರನ್ನೆ ಟಾರ್ಗೆಟ್ ಮಾಡಿ ಮಜಾ ಮಾಡ್ತಿದ್ದ ಭೂಪ ಮತ್ತೆ ಮುದ್ದೆ ಮುರಿಯಲು ಜೈಲು ಸೇರಿದ್ದಾನೆ.

ಇನ್ನಾದರು ಎಟಿಎಂ ಬಳಿ ಹಣ ಡ್ರಾ ಮಾಡಲು ಹೋಗುವ ರೈತರು ಸ್ವಲ್ಪ ಎಚ್ಚರದಿಂದ ಇದ್ದರೆ ಒಳ್ಳೆಯದು. ಒಂದು ವೇಳೆ ಎಟಿಎಂನಲ್ಲಿ ಪಡೆಯಲು ಪರಿಚಯಸ್ಥರು, ನಂಬಿಕಸ್ಥರ ಸಹಾಯ ಪಡೆದುಕೊಂಡರೆ ಒಳ್ಳೆಯದು.

Ramesh Babu

Journalist

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

7 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

9 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

10 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

21 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

22 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

22 hours ago