ರೈತನಿಗೆ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಮೋಸ: ಎಟಿಎಂ ಕಾರ್ಡ್ ಬದಲಿಸಿ ದೋಖಾ: ರೈತನ ಎಟಿಎಂ ಕಾರ್ಡ್ ಬಳಸಿ ಚಿನ್ನ ಖರೀದಿ ಮಾಡಿದ್ದ ಭೂಪ

ಕೆಲವರಿಗೆ ಇನ್ನೂ ಎಟಿಎಂಗಳಲ್ಲಿ ಎಟಿಎಂ ಬಳಸಿ ಹಣ ಡ್ರಾ ಮಾಡಲು ಬರುವುದಿಲ್ಲ. ಎಟಿಎಂನಲ್ಲಿ ಹಣ ಪಡೆಯಲು ಬೇರೊಬ್ಬರ ಸಹಾಯ ಪಡೆಯಲು ಹೋದಾಗ ದೊಡ್ಡ‌ ದೋಖಾ ನಡೆದು ಹೋಗಿರುತ್ತದೆ.

ಎಟಿಎಂನಲ್ಲಿ ಹಣ‌ ಪಡೆಯಲು ಬಾರದೇ ಪರದಾಡುವವರನ್ನ ಟಾರ್ಗೆಟ್ ಮಾಡಿಕೊಂಡು ಎಟಿಎಂ ಕಾರ್ಡಗಳನ್ನೇ ಬದಲಿಸಿ ಸಾವಿರಾರು ರೂಪಾಯಿ ಹಣ ಎಗರಿಸುಲು ಖದೀಮರು ಕಾದುಕುಳಿತಿರುತ್ತಾರೆ.

ಇಂತಹದ್ದೇ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಖದೀಮರ ಮಾಯಾಜಾಲಕ್ಕೆ ಸಿಲುಕಿ ಎಟಿಎಂ ಜೊತೆಗೆ ಹಣ ಕಳೆದುಕೊಂಡಿದ್ದಾನೆ.

ಎಟಿಎಂ ಬಳಿ ಹಣ ಡ್ರಾ ಮಾಡಲು ಬಾರದವರು ಯಾರಾದರು ಬರುತ್ತಾರ ಅಂತ ಖದೀಮನೊಬ್ಬ ನೋಡುತ್ತಾ ಕಾದು ಕುಳಿತಿದ್ದ. ಇದೇ ವೇಳೆ ರಾಜಣ್ಣ ಅನ್ನೂ ರೇಷ್ಮೆ ಬೆಳೆಯುವ ಈ ರೈತ ಗೂಡು ಮಾರಿದ ಹಣ ಡ್ರಾ ಮಾಡೋಕ್ಕೆ ಅಂತ ಎಟಿಎಂಗೆ ಬಂದು ಹಣ ಡ್ರಾ ಮಾಡಲಾಗದೆ ಪರದಾಡಿದ್ದಾನೆ. ಹೀಗಾಗಿ ರಾಜಣ್ಣನ ಸಹಾಯಕ್ಕೆ ಬರುವಂತೆ ಬಂದ ಭೂಪ ಮೊದಲಿಗೆ ರೈತನಿಗೆ ಹಣ ಡ್ರಾ ಮಾಡಿಕೊಟ್ಟಿದ್ದು ನಂತರ ರೈತನ ಕಾರ್ಡ್ ಪಡೆದು ಬೇರೋಂದು ಕಾರ್ಡ್ ನೀಡಿ ಎಸ್ಕೇಪ್ ಆಗಿದ್ದಾನೆ. ಜೊತೆಗೆ ವಿಜಯಪುರ ಪಟ್ಟಣದ ಚಿನ್ನದಂಗಡಿ ಒಂದಕ್ಕೆ ಹೋಗಿದ್ದ ಭೂಪ ಅಲ್ಲಿ ಇದೇ ರೈತನ ಕಾರ್ಡ್ ಬಳಸಿ ಚಿನ್ನದ ಉಂಗುರ ಖರೀದಿಸಿ ಎಸ್ಕೇಪ್ ಆಗಿದ್ದಾನೆ.

ಚಿನ್ನದಂಗಡಿಯಲ್ಲಿ ಉಂಗುರ ಖರೀದಿಸಿದ್ದಕ್ಕೆ ಹಣ ಪಾವತಿ ಮಾಡಿದ ಸಂದೇಶ ರೈತನ ಮೊಬೈಲ್ ಗೆ ಬಂದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ರೈತ ರಾಜಣ್ಣ ದೂರು ನೀಡಿದ್ದ. ಹೀಗಾಗಿ ದೂರು ಪಡೆದು ತನಿಖೆ ನಡೆಸಿದ ಪೊಲೀಸರು ಚಿಂತಾಮಣಿ ಮೂಲದ ಗುರುಮೂರ್ತಿ ಅನ್ನೋ ಈ ವಂಚಕನನ್ನ ಪತ್ತೆ ಮಾಡಿ ಬಂಧಿಸಿದ್ದಾರೆ.

ಜೊತೆಗೆ ಅರೊಪಿ ಗುರುಮೂರ್ತಿ ಇದೇ ರೀತಿ ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಕಾರ್ಡ್ ಬದಲಿಸಿ ಕೆಲವರಿಗೆ ವಂಚನೆ ಮಾಡಿ ಜೈಲುವಾಸ ಸಹ ಅನುಭವಿಸಿದ್ದಾನೆ. ಕಳೆದ ಜನವರಿಯಲ್ಲಿ ಜೈಲಿಂದ ಬಿಡುಗಡೆಯಾಗಿ ಈಚೆ ಬಂದಿದ್ದಾನೆ. ಆದರೆ ಜೈಲಿಂದ ಬಂದರೂ ಬುದ್ದಿ ಕಲಿಯದ ಭೂಪ ಮತ್ತದೆ ಕೆಲಸ ಮಾಡಲು ಹೋಗಿ ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾ‌ನೆ.

ಇನ್ನು, ಪೊಲೀಸರು ಆರೋಪಿಯಿಂದ ಎರಡು ಚಿನ್ನದ ಉಂಗುರ ಎಟಿಎಂ ಕಾರ್ಡ್ಗಳನ್ನ ವಶಕ್ಕೆ ಪಡೆದು ಬಡ ರೈತನಿಗೆ ವಾಪಸ್ ನೀಡಿದ್ದಾರೆ.

ಒಟ್ಟಾರೆ ಮೋಸ ಹೋಗುವವರು ಎಲ್ಲಿವರೆಗೂ ಇರ್ತಾರೋ ಅಲ್ಲಿ ವರೆಗೂ ವಂಚಕರು‌ ಇದ್ದೇ ಇರ್ತಾರೆ ಅನ್ನುವ ಹಾಗೆ ಬಡ ರೈತರನ್ನೆ ಟಾರ್ಗೆಟ್ ಮಾಡಿ ಮಜಾ ಮಾಡ್ತಿದ್ದ ಭೂಪ ಮತ್ತೆ ಮುದ್ದೆ ಮುರಿಯಲು ಜೈಲು ಸೇರಿದ್ದಾನೆ.

ಇನ್ನಾದರು ಎಟಿಎಂ ಬಳಿ ಹಣ ಡ್ರಾ ಮಾಡಲು ಹೋಗುವ ರೈತರು ಸ್ವಲ್ಪ ಎಚ್ಚರದಿಂದ ಇದ್ದರೆ ಒಳ್ಳೆಯದು. ಒಂದು ವೇಳೆ ಎಟಿಎಂನಲ್ಲಿ ಪಡೆಯಲು ಪರಿಚಯಸ್ಥರು, ನಂಬಿಕಸ್ಥರ ಸಹಾಯ ಪಡೆದುಕೊಂಡರೆ ಒಳ್ಳೆಯದು.

Ramesh Babu

Journalist

Recent Posts

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

11 minutes ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

6 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

17 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

18 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

18 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

19 hours ago