ರೈತನಿಗೆ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಮೋಸ: ಎಟಿಎಂ ಕಾರ್ಡ್ ಬದಲಿಸಿ ದೋಖಾ: ರೈತನ ಎಟಿಎಂ ಕಾರ್ಡ್ ಬಳಸಿ ಚಿನ್ನ ಖರೀದಿ ಮಾಡಿದ್ದ ಭೂಪ

ಕೆಲವರಿಗೆ ಇನ್ನೂ ಎಟಿಎಂಗಳಲ್ಲಿ ಎಟಿಎಂ ಬಳಸಿ ಹಣ ಡ್ರಾ ಮಾಡಲು ಬರುವುದಿಲ್ಲ. ಎಟಿಎಂನಲ್ಲಿ ಹಣ ಪಡೆಯಲು ಬೇರೊಬ್ಬರ ಸಹಾಯ ಪಡೆಯಲು ಹೋದಾಗ ದೊಡ್ಡ‌ ದೋಖಾ ನಡೆದು ಹೋಗಿರುತ್ತದೆ.

ಎಟಿಎಂನಲ್ಲಿ ಹಣ‌ ಪಡೆಯಲು ಬಾರದೇ ಪರದಾಡುವವರನ್ನ ಟಾರ್ಗೆಟ್ ಮಾಡಿಕೊಂಡು ಎಟಿಎಂ ಕಾರ್ಡಗಳನ್ನೇ ಬದಲಿಸಿ ಸಾವಿರಾರು ರೂಪಾಯಿ ಹಣ ಎಗರಿಸುಲು ಖದೀಮರು ಕಾದುಕುಳಿತಿರುತ್ತಾರೆ.

ಇಂತಹದ್ದೇ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಖದೀಮರ ಮಾಯಾಜಾಲಕ್ಕೆ ಸಿಲುಕಿ ಎಟಿಎಂ ಜೊತೆಗೆ ಹಣ ಕಳೆದುಕೊಂಡಿದ್ದಾನೆ.

ಎಟಿಎಂ ಬಳಿ ಹಣ ಡ್ರಾ ಮಾಡಲು ಬಾರದವರು ಯಾರಾದರು ಬರುತ್ತಾರ ಅಂತ ಖದೀಮನೊಬ್ಬ ನೋಡುತ್ತಾ ಕಾದು ಕುಳಿತಿದ್ದ. ಇದೇ ವೇಳೆ ರಾಜಣ್ಣ ಅನ್ನೂ ರೇಷ್ಮೆ ಬೆಳೆಯುವ ಈ ರೈತ ಗೂಡು ಮಾರಿದ ಹಣ ಡ್ರಾ ಮಾಡೋಕ್ಕೆ ಅಂತ ಎಟಿಎಂಗೆ ಬಂದು ಹಣ ಡ್ರಾ ಮಾಡಲಾಗದೆ ಪರದಾಡಿದ್ದಾನೆ. ಹೀಗಾಗಿ ರಾಜಣ್ಣನ ಸಹಾಯಕ್ಕೆ ಬರುವಂತೆ ಬಂದ ಭೂಪ ಮೊದಲಿಗೆ ರೈತನಿಗೆ ಹಣ ಡ್ರಾ ಮಾಡಿಕೊಟ್ಟಿದ್ದು ನಂತರ ರೈತನ ಕಾರ್ಡ್ ಪಡೆದು ಬೇರೋಂದು ಕಾರ್ಡ್ ನೀಡಿ ಎಸ್ಕೇಪ್ ಆಗಿದ್ದಾನೆ. ಜೊತೆಗೆ ವಿಜಯಪುರ ಪಟ್ಟಣದ ಚಿನ್ನದಂಗಡಿ ಒಂದಕ್ಕೆ ಹೋಗಿದ್ದ ಭೂಪ ಅಲ್ಲಿ ಇದೇ ರೈತನ ಕಾರ್ಡ್ ಬಳಸಿ ಚಿನ್ನದ ಉಂಗುರ ಖರೀದಿಸಿ ಎಸ್ಕೇಪ್ ಆಗಿದ್ದಾನೆ.

ಚಿನ್ನದಂಗಡಿಯಲ್ಲಿ ಉಂಗುರ ಖರೀದಿಸಿದ್ದಕ್ಕೆ ಹಣ ಪಾವತಿ ಮಾಡಿದ ಸಂದೇಶ ರೈತನ ಮೊಬೈಲ್ ಗೆ ಬಂದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ರೈತ ರಾಜಣ್ಣ ದೂರು ನೀಡಿದ್ದ. ಹೀಗಾಗಿ ದೂರು ಪಡೆದು ತನಿಖೆ ನಡೆಸಿದ ಪೊಲೀಸರು ಚಿಂತಾಮಣಿ ಮೂಲದ ಗುರುಮೂರ್ತಿ ಅನ್ನೋ ಈ ವಂಚಕನನ್ನ ಪತ್ತೆ ಮಾಡಿ ಬಂಧಿಸಿದ್ದಾರೆ.

ಜೊತೆಗೆ ಅರೊಪಿ ಗುರುಮೂರ್ತಿ ಇದೇ ರೀತಿ ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಕಾರ್ಡ್ ಬದಲಿಸಿ ಕೆಲವರಿಗೆ ವಂಚನೆ ಮಾಡಿ ಜೈಲುವಾಸ ಸಹ ಅನುಭವಿಸಿದ್ದಾನೆ. ಕಳೆದ ಜನವರಿಯಲ್ಲಿ ಜೈಲಿಂದ ಬಿಡುಗಡೆಯಾಗಿ ಈಚೆ ಬಂದಿದ್ದಾನೆ. ಆದರೆ ಜೈಲಿಂದ ಬಂದರೂ ಬುದ್ದಿ ಕಲಿಯದ ಭೂಪ ಮತ್ತದೆ ಕೆಲಸ ಮಾಡಲು ಹೋಗಿ ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾ‌ನೆ.

ಇನ್ನು, ಪೊಲೀಸರು ಆರೋಪಿಯಿಂದ ಎರಡು ಚಿನ್ನದ ಉಂಗುರ ಎಟಿಎಂ ಕಾರ್ಡ್ಗಳನ್ನ ವಶಕ್ಕೆ ಪಡೆದು ಬಡ ರೈತನಿಗೆ ವಾಪಸ್ ನೀಡಿದ್ದಾರೆ.

ಒಟ್ಟಾರೆ ಮೋಸ ಹೋಗುವವರು ಎಲ್ಲಿವರೆಗೂ ಇರ್ತಾರೋ ಅಲ್ಲಿ ವರೆಗೂ ವಂಚಕರು‌ ಇದ್ದೇ ಇರ್ತಾರೆ ಅನ್ನುವ ಹಾಗೆ ಬಡ ರೈತರನ್ನೆ ಟಾರ್ಗೆಟ್ ಮಾಡಿ ಮಜಾ ಮಾಡ್ತಿದ್ದ ಭೂಪ ಮತ್ತೆ ಮುದ್ದೆ ಮುರಿಯಲು ಜೈಲು ಸೇರಿದ್ದಾನೆ.

ಇನ್ನಾದರು ಎಟಿಎಂ ಬಳಿ ಹಣ ಡ್ರಾ ಮಾಡಲು ಹೋಗುವ ರೈತರು ಸ್ವಲ್ಪ ಎಚ್ಚರದಿಂದ ಇದ್ದರೆ ಒಳ್ಳೆಯದು. ಒಂದು ವೇಳೆ ಎಟಿಎಂನಲ್ಲಿ ಪಡೆಯಲು ಪರಿಚಯಸ್ಥರು, ನಂಬಿಕಸ್ಥರ ಸಹಾಯ ಪಡೆದುಕೊಂಡರೆ ಒಳ್ಳೆಯದು.

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

7 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

12 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

1 hour ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

7 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

7 hours ago