ಕೆಲವರಿಗೆ ಇನ್ನೂ ಎಟಿಎಂಗಳಲ್ಲಿ ಎಟಿಎಂ ಬಳಸಿ ಹಣ ಡ್ರಾ ಮಾಡಲು ಬರುವುದಿಲ್ಲ. ಎಟಿಎಂನಲ್ಲಿ ಹಣ ಪಡೆಯಲು ಬೇರೊಬ್ಬರ ಸಹಾಯ ಪಡೆಯಲು ಹೋದಾಗ ದೊಡ್ಡ ದೋಖಾ ನಡೆದು ಹೋಗಿರುತ್ತದೆ.
ಎಟಿಎಂನಲ್ಲಿ ಹಣ ಪಡೆಯಲು ಬಾರದೇ ಪರದಾಡುವವರನ್ನ ಟಾರ್ಗೆಟ್ ಮಾಡಿಕೊಂಡು ಎಟಿಎಂ ಕಾರ್ಡಗಳನ್ನೇ ಬದಲಿಸಿ ಸಾವಿರಾರು ರೂಪಾಯಿ ಹಣ ಎಗರಿಸುಲು ಖದೀಮರು ಕಾದುಕುಳಿತಿರುತ್ತಾರೆ.
ಇಂತಹದ್ದೇ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಖದೀಮರ ಮಾಯಾಜಾಲಕ್ಕೆ ಸಿಲುಕಿ ಎಟಿಎಂ ಜೊತೆಗೆ ಹಣ ಕಳೆದುಕೊಂಡಿದ್ದಾನೆ.
ಎಟಿಎಂ ಬಳಿ ಹಣ ಡ್ರಾ ಮಾಡಲು ಬಾರದವರು ಯಾರಾದರು ಬರುತ್ತಾರ ಅಂತ ಖದೀಮನೊಬ್ಬ ನೋಡುತ್ತಾ ಕಾದು ಕುಳಿತಿದ್ದ. ಇದೇ ವೇಳೆ ರಾಜಣ್ಣ ಅನ್ನೂ ರೇಷ್ಮೆ ಬೆಳೆಯುವ ಈ ರೈತ ಗೂಡು ಮಾರಿದ ಹಣ ಡ್ರಾ ಮಾಡೋಕ್ಕೆ ಅಂತ ಎಟಿಎಂಗೆ ಬಂದು ಹಣ ಡ್ರಾ ಮಾಡಲಾಗದೆ ಪರದಾಡಿದ್ದಾನೆ. ಹೀಗಾಗಿ ರಾಜಣ್ಣನ ಸಹಾಯಕ್ಕೆ ಬರುವಂತೆ ಬಂದ ಭೂಪ ಮೊದಲಿಗೆ ರೈತನಿಗೆ ಹಣ ಡ್ರಾ ಮಾಡಿಕೊಟ್ಟಿದ್ದು ನಂತರ ರೈತನ ಕಾರ್ಡ್ ಪಡೆದು ಬೇರೋಂದು ಕಾರ್ಡ್ ನೀಡಿ ಎಸ್ಕೇಪ್ ಆಗಿದ್ದಾನೆ. ಜೊತೆಗೆ ವಿಜಯಪುರ ಪಟ್ಟಣದ ಚಿನ್ನದಂಗಡಿ ಒಂದಕ್ಕೆ ಹೋಗಿದ್ದ ಭೂಪ ಅಲ್ಲಿ ಇದೇ ರೈತನ ಕಾರ್ಡ್ ಬಳಸಿ ಚಿನ್ನದ ಉಂಗುರ ಖರೀದಿಸಿ ಎಸ್ಕೇಪ್ ಆಗಿದ್ದಾನೆ.
ಚಿನ್ನದಂಗಡಿಯಲ್ಲಿ ಉಂಗುರ ಖರೀದಿಸಿದ್ದಕ್ಕೆ ಹಣ ಪಾವತಿ ಮಾಡಿದ ಸಂದೇಶ ರೈತನ ಮೊಬೈಲ್ ಗೆ ಬಂದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ರೈತ ರಾಜಣ್ಣ ದೂರು ನೀಡಿದ್ದ. ಹೀಗಾಗಿ ದೂರು ಪಡೆದು ತನಿಖೆ ನಡೆಸಿದ ಪೊಲೀಸರು ಚಿಂತಾಮಣಿ ಮೂಲದ ಗುರುಮೂರ್ತಿ ಅನ್ನೋ ಈ ವಂಚಕನನ್ನ ಪತ್ತೆ ಮಾಡಿ ಬಂಧಿಸಿದ್ದಾರೆ.
ಜೊತೆಗೆ ಅರೊಪಿ ಗುರುಮೂರ್ತಿ ಇದೇ ರೀತಿ ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಕಾರ್ಡ್ ಬದಲಿಸಿ ಕೆಲವರಿಗೆ ವಂಚನೆ ಮಾಡಿ ಜೈಲುವಾಸ ಸಹ ಅನುಭವಿಸಿದ್ದಾನೆ. ಕಳೆದ ಜನವರಿಯಲ್ಲಿ ಜೈಲಿಂದ ಬಿಡುಗಡೆಯಾಗಿ ಈಚೆ ಬಂದಿದ್ದಾನೆ. ಆದರೆ ಜೈಲಿಂದ ಬಂದರೂ ಬುದ್ದಿ ಕಲಿಯದ ಭೂಪ ಮತ್ತದೆ ಕೆಲಸ ಮಾಡಲು ಹೋಗಿ ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾನೆ.
ಇನ್ನು, ಪೊಲೀಸರು ಆರೋಪಿಯಿಂದ ಎರಡು ಚಿನ್ನದ ಉಂಗುರ ಎಟಿಎಂ ಕಾರ್ಡ್ಗಳನ್ನ ವಶಕ್ಕೆ ಪಡೆದು ಬಡ ರೈತನಿಗೆ ವಾಪಸ್ ನೀಡಿದ್ದಾರೆ.
ಒಟ್ಟಾರೆ ಮೋಸ ಹೋಗುವವರು ಎಲ್ಲಿವರೆಗೂ ಇರ್ತಾರೋ ಅಲ್ಲಿ ವರೆಗೂ ವಂಚಕರು ಇದ್ದೇ ಇರ್ತಾರೆ ಅನ್ನುವ ಹಾಗೆ ಬಡ ರೈತರನ್ನೆ ಟಾರ್ಗೆಟ್ ಮಾಡಿ ಮಜಾ ಮಾಡ್ತಿದ್ದ ಭೂಪ ಮತ್ತೆ ಮುದ್ದೆ ಮುರಿಯಲು ಜೈಲು ಸೇರಿದ್ದಾನೆ.
ಇನ್ನಾದರು ಎಟಿಎಂ ಬಳಿ ಹಣ ಡ್ರಾ ಮಾಡಲು ಹೋಗುವ ರೈತರು ಸ್ವಲ್ಪ ಎಚ್ಚರದಿಂದ ಇದ್ದರೆ ಒಳ್ಳೆಯದು. ಒಂದು ವೇಳೆ ಎಟಿಎಂನಲ್ಲಿ ಪಡೆಯಲು ಪರಿಚಯಸ್ಥರು, ನಂಬಿಕಸ್ಥರ ಸಹಾಯ ಪಡೆದುಕೊಂಡರೆ ಒಳ್ಳೆಯದು.
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…