ರೈತನಿಗೆ ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಮೋಸ: ಎಟಿಎಂ ಕಾರ್ಡ್ ಬದಲಿಸಿ ದೋಖಾ: ರೈತನ ಎಟಿಎಂ ಕಾರ್ಡ್ ಬಳಸಿ ಚಿನ್ನ ಖರೀದಿ ಮಾಡಿದ್ದ ಭೂಪ

ಕೆಲವರಿಗೆ ಇನ್ನೂ ಎಟಿಎಂಗಳಲ್ಲಿ ಎಟಿಎಂ ಬಳಸಿ ಹಣ ಡ್ರಾ ಮಾಡಲು ಬರುವುದಿಲ್ಲ. ಎಟಿಎಂನಲ್ಲಿ ಹಣ ಪಡೆಯಲು ಬೇರೊಬ್ಬರ ಸಹಾಯ ಪಡೆಯಲು ಹೋದಾಗ ದೊಡ್ಡ‌ ದೋಖಾ ನಡೆದು ಹೋಗಿರುತ್ತದೆ.

ಎಟಿಎಂನಲ್ಲಿ ಹಣ‌ ಪಡೆಯಲು ಬಾರದೇ ಪರದಾಡುವವರನ್ನ ಟಾರ್ಗೆಟ್ ಮಾಡಿಕೊಂಡು ಎಟಿಎಂ ಕಾರ್ಡಗಳನ್ನೇ ಬದಲಿಸಿ ಸಾವಿರಾರು ರೂಪಾಯಿ ಹಣ ಎಗರಿಸುಲು ಖದೀಮರು ಕಾದುಕುಳಿತಿರುತ್ತಾರೆ.

ಇಂತಹದ್ದೇ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ನಡೆದಿದೆ. ಖದೀಮರ ಮಾಯಾಜಾಲಕ್ಕೆ ಸಿಲುಕಿ ಎಟಿಎಂ ಜೊತೆಗೆ ಹಣ ಕಳೆದುಕೊಂಡಿದ್ದಾನೆ.

ಎಟಿಎಂ ಬಳಿ ಹಣ ಡ್ರಾ ಮಾಡಲು ಬಾರದವರು ಯಾರಾದರು ಬರುತ್ತಾರ ಅಂತ ಖದೀಮನೊಬ್ಬ ನೋಡುತ್ತಾ ಕಾದು ಕುಳಿತಿದ್ದ. ಇದೇ ವೇಳೆ ರಾಜಣ್ಣ ಅನ್ನೂ ರೇಷ್ಮೆ ಬೆಳೆಯುವ ಈ ರೈತ ಗೂಡು ಮಾರಿದ ಹಣ ಡ್ರಾ ಮಾಡೋಕ್ಕೆ ಅಂತ ಎಟಿಎಂಗೆ ಬಂದು ಹಣ ಡ್ರಾ ಮಾಡಲಾಗದೆ ಪರದಾಡಿದ್ದಾನೆ. ಹೀಗಾಗಿ ರಾಜಣ್ಣನ ಸಹಾಯಕ್ಕೆ ಬರುವಂತೆ ಬಂದ ಭೂಪ ಮೊದಲಿಗೆ ರೈತನಿಗೆ ಹಣ ಡ್ರಾ ಮಾಡಿಕೊಟ್ಟಿದ್ದು ನಂತರ ರೈತನ ಕಾರ್ಡ್ ಪಡೆದು ಬೇರೋಂದು ಕಾರ್ಡ್ ನೀಡಿ ಎಸ್ಕೇಪ್ ಆಗಿದ್ದಾನೆ. ಜೊತೆಗೆ ವಿಜಯಪುರ ಪಟ್ಟಣದ ಚಿನ್ನದಂಗಡಿ ಒಂದಕ್ಕೆ ಹೋಗಿದ್ದ ಭೂಪ ಅಲ್ಲಿ ಇದೇ ರೈತನ ಕಾರ್ಡ್ ಬಳಸಿ ಚಿನ್ನದ ಉಂಗುರ ಖರೀದಿಸಿ ಎಸ್ಕೇಪ್ ಆಗಿದ್ದಾನೆ.

ಚಿನ್ನದಂಗಡಿಯಲ್ಲಿ ಉಂಗುರ ಖರೀದಿಸಿದ್ದಕ್ಕೆ ಹಣ ಪಾವತಿ ಮಾಡಿದ ಸಂದೇಶ ರೈತನ ಮೊಬೈಲ್ ಗೆ ಬಂದ ಹಿನ್ನೆಲೆಯಲ್ಲಿ ವಿಜಯಪುರ ಪೊಲೀಸ್ ಠಾಣೆಯಲ್ಲಿ ರೈತ ರಾಜಣ್ಣ ದೂರು ನೀಡಿದ್ದ. ಹೀಗಾಗಿ ದೂರು ಪಡೆದು ತನಿಖೆ ನಡೆಸಿದ ಪೊಲೀಸರು ಚಿಂತಾಮಣಿ ಮೂಲದ ಗುರುಮೂರ್ತಿ ಅನ್ನೋ ಈ ವಂಚಕನನ್ನ ಪತ್ತೆ ಮಾಡಿ ಬಂಧಿಸಿದ್ದಾರೆ.

ಜೊತೆಗೆ ಅರೊಪಿ ಗುರುಮೂರ್ತಿ ಇದೇ ರೀತಿ ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲೂ ಕಾರ್ಡ್ ಬದಲಿಸಿ ಕೆಲವರಿಗೆ ವಂಚನೆ ಮಾಡಿ ಜೈಲುವಾಸ ಸಹ ಅನುಭವಿಸಿದ್ದಾನೆ. ಕಳೆದ ಜನವರಿಯಲ್ಲಿ ಜೈಲಿಂದ ಬಿಡುಗಡೆಯಾಗಿ ಈಚೆ ಬಂದಿದ್ದಾನೆ. ಆದರೆ ಜೈಲಿಂದ ಬಂದರೂ ಬುದ್ದಿ ಕಲಿಯದ ಭೂಪ ಮತ್ತದೆ ಕೆಲಸ ಮಾಡಲು ಹೋಗಿ ಇದೀಗ ಪೊಲೀಸರ ಕೈಗೆ ಲಾಕ್ ಆಗಿದ್ದಾ‌ನೆ.

ಇನ್ನು, ಪೊಲೀಸರು ಆರೋಪಿಯಿಂದ ಎರಡು ಚಿನ್ನದ ಉಂಗುರ ಎಟಿಎಂ ಕಾರ್ಡ್ಗಳನ್ನ ವಶಕ್ಕೆ ಪಡೆದು ಬಡ ರೈತನಿಗೆ ವಾಪಸ್ ನೀಡಿದ್ದಾರೆ.

ಒಟ್ಟಾರೆ ಮೋಸ ಹೋಗುವವರು ಎಲ್ಲಿವರೆಗೂ ಇರ್ತಾರೋ ಅಲ್ಲಿ ವರೆಗೂ ವಂಚಕರು‌ ಇದ್ದೇ ಇರ್ತಾರೆ ಅನ್ನುವ ಹಾಗೆ ಬಡ ರೈತರನ್ನೆ ಟಾರ್ಗೆಟ್ ಮಾಡಿ ಮಜಾ ಮಾಡ್ತಿದ್ದ ಭೂಪ ಮತ್ತೆ ಮುದ್ದೆ ಮುರಿಯಲು ಜೈಲು ಸೇರಿದ್ದಾನೆ.

ಇನ್ನಾದರು ಎಟಿಎಂ ಬಳಿ ಹಣ ಡ್ರಾ ಮಾಡಲು ಹೋಗುವ ರೈತರು ಸ್ವಲ್ಪ ಎಚ್ಚರದಿಂದ ಇದ್ದರೆ ಒಳ್ಳೆಯದು. ಒಂದು ವೇಳೆ ಎಟಿಎಂನಲ್ಲಿ ಪಡೆಯಲು ಪರಿಚಯಸ್ಥರು, ನಂಬಿಕಸ್ಥರ ಸಹಾಯ ಪಡೆದುಕೊಂಡರೆ ಒಳ್ಳೆಯದು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

3 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

4 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

4 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

8 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

10 hours ago