ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ತೋಟದಲ್ಲಿದ್ದವು, ಅದು ಯಾರ ಕೆಟ್ಟ ಕಣ್ಣುಗಳಿಗೆ ಬಿತ್ತೊ ಗೊತ್ತಿಲ್ಲ. ರಾತ್ರೋರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿ ವಿಕೃತಿ ಮೆರೆದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ.
ಮೂರು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ ಹಾಕಿದ್ದರು. ಇನ್ನೇನು ಎರಡು ತಿಂಗಳು ಆಗಿದ್ದರೆ, ಬಾಳೆ ಗೊನೆ ಬಿಟ್ಟು ಫಸಲು ಕೈಗೆ ಬರಬೇಕಿತ್ತು. ಅಷ್ಟರಲ್ಲೆ ದುಷ್ಕರ್ಮಿಗಳು ರಾತ್ರೋರಾತ್ರಿ ಎಲ್ಲವನ್ನು ನಾಶ ಮಾಡಿದ್ದಾರೆ.
ಸೋಮವಾರ ಕುಟುಂಬಸ್ಥರು ನಂಜನಗೂಡು ದೇವಸ್ಥಾನಕ್ಕೆ ಹೋಗಿದ್ದೆವು. ಮೂರು ಎಕರೆ ಪ್ರದೇಶದಲ್ಲಿ ಮೂರುಸಾವಿರ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರಲ್ಲಿ 1000ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಇದರಿಂದ ₹5ಲಕ್ಷ ನಷ್ಟವಾಗಿದೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ’ ಎಂದು ರೈತ ಮಂಜುನಾಥ್ ತಿಳಿಸಿದ್ದಾರೆ.
ನಂದಿನಿ ಮಾತನಾಡಿ, ನಮ್ಮ ಹಸು ಬೇರೆಯವರ ಹೊಲದಲ್ಲಿ ಮೇಯಲು ಹೋಗಿತ್ತು. ಆಗ ಕೆಲವರು ನಮ್ಮ ಮೇಲೆ ಗಲಾಟೆ ಮಾಡಿದ್ದರು. ನಾವು ಊರಲ್ಲಿ ಇಲ್ಲದ ಸಮಯ ನೋಡಿಕೊಂಡು ಬಾಳೆಗಿಡಗಳನ್ನು ಅವರೇ ನಾಶ ಮಾಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನಮಗೆ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಬೇಕು’ ಎಂದು ಅಳಲು ತೋಡಿಕೊಂಡರು.
ಇನ್ನು ಈ ಕೃತ್ಯವನ್ನು ಹಳೆಯ ದ್ವೇಷಕ್ಕೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…