ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ

ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ತೋಟದಲ್ಲಿದ್ದವು, ಅದು ಯಾರ ಕೆಟ್ಟ ಕಣ್ಣುಗಳಿಗೆ ಬಿತ್ತೊ ಗೊತ್ತಿಲ್ಲ. ರಾತ್ರೋರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿ ವಿಕೃತಿ ಮೆರೆದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ.

ಮೂರು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ ಹಾಕಿದ್ದರು. ಇನ್ನೇನು ಎರಡು ತಿಂಗಳು ಆಗಿದ್ದರೆ, ಬಾಳೆ ಗೊನೆ ಬಿಟ್ಟು ಫಸಲು ಕೈಗೆ ಬರಬೇಕಿತ್ತು. ಅಷ್ಟರಲ್ಲೆ ದುಷ್ಕರ್ಮಿಗಳು ರಾತ್ರೋರಾತ್ರಿ ಎಲ್ಲವನ್ನು ನಾಶ ಮಾಡಿದ್ದಾರೆ.

ಸೋಮವಾರ ಕುಟುಂಬಸ್ಥರು ನಂಜನಗೂಡು ದೇವಸ್ಥಾನಕ್ಕೆ ಹೋಗಿದ್ದೆವು. ಮೂರು ಎಕರೆ ಪ್ರದೇಶದಲ್ಲಿ ಮೂರುಸಾವಿರ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರಲ್ಲಿ 1000ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಇದರಿಂದ ₹5ಲಕ್ಷ ನಷ್ಟವಾಗಿದೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ’ ಎಂದು ರೈತ ಮಂಜುನಾಥ್ ತಿಳಿಸಿದ್ದಾರೆ.

ನಂದಿನಿ ಮಾತನಾಡಿ, ನಮ್ಮ ಹಸು ಬೇರೆಯವರ ಹೊಲದಲ್ಲಿ ಮೇಯಲು ಹೋಗಿತ್ತು. ಆಗ ಕೆಲವರು ನಮ್ಮ ಮೇಲೆ ಗಲಾಟೆ ಮಾಡಿದ್ದರು. ನಾವು ಊರಲ್ಲಿ ಇಲ್ಲದ ಸಮಯ ನೋಡಿಕೊಂಡು ಬಾಳೆಗಿಡಗಳನ್ನು ಅವರೇ ನಾಶ ಮಾಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನಮಗೆ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಬೇಕು’ ಎಂದು ಅಳಲು ತೋಡಿಕೊಂಡರು.

ಇನ್ನು ಈ ಕೃತ್ಯವನ್ನು ಹಳೆಯ ದ್ವೇಷಕ್ಕೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago