ರೈತನ ಬಾಳೆ ತೋಟ ಮಾರಣಹೋಮ: ಕಿಡಿಗೇಡಿಗಳ ಕಿಡಿಗೇಡಿತನಕ್ಕೆ ಬೆಳೆದು ನಿಂತಿದ್ದ ಬಾಳೆ ಗಿಡಗಳು ನಾಶ: ಸಂಕಷ್ಟದಲ್ಲಿ ರೈತ

ಹೆಂಡತಿಯ ಒಡವೆಯನ್ನು ಅಡವಿಟ್ಟು, ಹಗಲು ರಾತ್ರಿ ಕಷ್ಟಪಟ್ಟು ಬಾಳೆ ತೋಟ ಬೆಳೆಸಿದ್ದ ರೈತನಿಗೆ ಅದೇ ಜೀವನಕ್ಕೆ ಆಸರೆಯಾಗಿತ್ತು. ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ತೋಟದಲ್ಲಿದ್ದವು, ಅದು ಯಾರ ಕೆಟ್ಟ ಕಣ್ಣುಗಳಿಗೆ ಬಿತ್ತೊ ಗೊತ್ತಿಲ್ಲ. ರಾತ್ರೋರಾತ್ರಿ ಬಾಳೆ ಗಿಡಗಳನ್ನು ಕಡಿದು ಹಾಕಿ ವಿಕೃತಿ ಮೆರೆದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಬಳಗೆರೆ ಗ್ರಾಮದ ಮಂಜುನಾಥ್ ಹಾಗೂ ನಂದಿನಿ ದಂಪತಿಗೆ ಸೇರಿದ ತೋಟದಲ್ಲಿ ಈ ಘಟನೆ ನಡೆದಿದೆ.

ಮೂರು ಎಕರೆ ಜಮೀನಿನಲ್ಲಿ ಲಕ್ಷಾಂತರ ರೂಪಾಯಿ ಬಂಡವಾಳ ಹಾಕಿ ಬಾಳೆ ಗಿಡ ಹಾಕಿದ್ದರು. ಇನ್ನೇನು ಎರಡು ತಿಂಗಳು ಆಗಿದ್ದರೆ, ಬಾಳೆ ಗೊನೆ ಬಿಟ್ಟು ಫಸಲು ಕೈಗೆ ಬರಬೇಕಿತ್ತು. ಅಷ್ಟರಲ್ಲೆ ದುಷ್ಕರ್ಮಿಗಳು ರಾತ್ರೋರಾತ್ರಿ ಎಲ್ಲವನ್ನು ನಾಶ ಮಾಡಿದ್ದಾರೆ.

ಸೋಮವಾರ ಕುಟುಂಬಸ್ಥರು ನಂಜನಗೂಡು ದೇವಸ್ಥಾನಕ್ಕೆ ಹೋಗಿದ್ದೆವು. ಮೂರು ಎಕರೆ ಪ್ರದೇಶದಲ್ಲಿ ಮೂರುಸಾವಿರ ಗಿಡಗಳನ್ನು ನಾಟಿ ಮಾಡಲಾಗಿತ್ತು. ಅದರಲ್ಲಿ 1000ಕ್ಕೂ ಹೆಚ್ಚು ಬಾಳೆ ಗಿಡಗಳನ್ನು ಕತ್ತರಿಸಿ ಹಾಕಿದ್ದಾರೆ. ಇದರಿಂದ ₹5ಲಕ್ಷ ನಷ್ಟವಾಗಿದೆ. ಈ ಬಗ್ಗೆ ಗ್ರಾಮಾಂತರ ಠಾಣೆಗೆ ದೂರು ನೀಡಲಾಗಿದೆ’ ಎಂದು ರೈತ ಮಂಜುನಾಥ್ ತಿಳಿಸಿದ್ದಾರೆ.

ನಂದಿನಿ ಮಾತನಾಡಿ, ನಮ್ಮ ಹಸು ಬೇರೆಯವರ ಹೊಲದಲ್ಲಿ ಮೇಯಲು ಹೋಗಿತ್ತು. ಆಗ ಕೆಲವರು ನಮ್ಮ ಮೇಲೆ ಗಲಾಟೆ ಮಾಡಿದ್ದರು. ನಾವು ಊರಲ್ಲಿ ಇಲ್ಲದ ಸಮಯ ನೋಡಿಕೊಂಡು ಬಾಳೆಗಿಡಗಳನ್ನು ಅವರೇ ನಾಶ ಮಾಡಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆ ನೀಡಿ ನಮಗೆ ಸಂಬಂಧಪಟ್ಟ ಇಲಾಖೆಯಿಂದ ಪರಿಹಾರ ಒದಗಿಸಬೇಕು’ ಎಂದು ಅಳಲು ತೋಡಿಕೊಂಡರು.

ಇನ್ನು ಈ ಕೃತ್ಯವನ್ನು ಹಳೆಯ ದ್ವೇಷಕ್ಕೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ. ಈ ಬಗ್ಗೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

7 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

9 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago