ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಸೇರಿದಂತೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಿ ರೈತರಿಗೆ ಸಮಸ್ಯೆ ಆಗದಂತೆ ಕ್ರಮ ವಹಿಸಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ನ್ಯಾಯಾಲಯ ಸಭಾಂಗಣದಲ್ಲಿ ಇಂದು ನಡೆದ ರೈತರಿಗೆ ಉತ್ತಮ ಗುಣಮಟ್ಟದ ಕೃಷಿ ಪರಿಕರಗಳನ್ನು ಒದಗಿಸಲು ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ರೈತರು ಕೃಷಿ ಚಟುವಟಿಕೆಗಳನ್ನು ಆರಂಭಿಸಿದ್ದಾರೆ. ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರಗಳು ಸಮರ್ಪಕವಾಗಿ ಲಭ್ಯವಾಗುವಂತೆ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಮಾರಾಟ ಮಳಿಗೆಗಳಲ್ಲಿ ಶೇಖರಿಸಿಡಬೇಕು. ಕೃಷಿ ಪರಿಕರಗಳನ್ನು ಮಾರಾಟ ಮಾಡುವ ಅಂಗಡಿಗಳು ಕಡ್ಡಾಯವಾಗಿ ಪರಿಕರಗಳ ಬೆಲೆ ವಿವರಗಳನ್ನು ಅಂಗಡಿ ಮುಂದೆ ಪ್ರದರ್ಶಿಸಿರಬೇಕು. ರೈತರು ಖರೀದಿಸಲು ಬಂದಾಗ ವಿಳಂಬ ಮಾಡದೆ ನಿಗದಿತ ಸಮಯದಲ್ಲಿ ಅವಶ್ಯಕತೆ ಇರುವ ಕೃಷಿ ಪರಿಕರಗಳನ್ನು ಒದಗಿಸಬೇಕು ಎಂದರು.
ಕಳಪೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳನ್ನು ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅನಧಿಕೃತವಾಗಿ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.
2024-25 ನೇ ಸಾಲಿಗೆ 69,559 ಹೆಕ್ಟೇರ್ ಮುಂಗಾರು ಬಿತ್ತನೆ ಗುರಿ ಹೊಂದಲಾಗಿದ್ದು, 1,42,292 ಮೆಟ್ರಿಕ್ ಟನ್ ಮುಂಗಾರು ಉತ್ಪಾದನೆ ಗುರಿ ಹೊಂದಲಾಗಿದೆ. ಪ್ರಸಕ್ತ ವರ್ಷದಲ್ಲಿ 3,837 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದ್ದು ಇಲ್ಲಿಯವರೆಗೆ 737.6 ಕ್ವಿಂಟಾಲ್ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ಮುಂಗಾರು ಹಂಗಾಮಿನಲ್ಲಿ 31,842 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆ ಇದ್ದು ಜುಲೈ ಅಂತ್ಯಕ್ಕೆ 10,353 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. 2023-24 ನೇ ಸಾಲಿನಲ್ಲಿ ರಸಗೊಬ್ಬರ ಮತ್ತು ಕೀಟನಾಶಕಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 8 ಅನಧಿಕೃತ ಮಳಿಗೆಗಳ ಮೇಲೆ ದಾಳಿ ನಡೆಸಿ ಮಳಿಗೆಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ ಅವರು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಂಗಪ್ಪ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಲಲಿತ ರೆಡ್ಡಿ, ಉಪನಿರ್ದೇಶಕಿ ಗಾಯಿತ್ರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಹೇಮಾವತಿ ಜೆ, ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ತಯಾರಿಕ ಕಂಪನಿಗಳ ಮುಖ್ಯಸ್ಥರು, ಇತರೆ ಸಿಬ್ಬಂದಿ ಉಪಸ್ಥಿತರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…