ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಬೇಕು- ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ….? ಇಲ್ಲಿದೆ ಮಾಹಿತಿ‌ ಓದಿ

ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೆಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ, ಎಣ್ಣೆಕಾಳು ಅಭಿಯಾನ ಯೋಜನೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಬೆಳೆ ವಿಮೆಗೆ ನೋಂದಾಯಿಸಲು ಪ್ರೇರೇಪಿಸಿ ಎಂದರು.

*ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ*

ರಾಗಿ (ಮಳೆಯಾಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.
ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.
ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.
ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.
ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.
ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.
ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.
ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.

ರೈತರಿಗೆ ಕೃಷಿ ಕಾರ್ಯಾಗಾರವನ್ನು ಆಯೋಜನೆ ಮಾಡಿ, ರೋಗ ಬಾಧೆಯಿಂದ ಬೆಳೆಯ ರಕ್ಷಣೆ, ಗೊಬ್ಬರ ಪೂರೈಕೆ, ಇಳುವರಿ ಹೆಚ್ಚಿಸುವ ಬೆಳೆಗಳ ಕುರಿತು ಜಾಗೃತಿ ಮೂಡಿಸಿ. ಸಿರಿಧಾನ್ಯ, ಎಣ್ಣೆ ಕಾಳುಗಳ ಬೆಳೆಗೆ ಹೆಚ್ಚಿನ ಪ್ರೊತ್ಸಾಹ ಕಲ್ಪಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

*ಬೆಳೆ ಸಮೀಕ್ಷೆ ನಿಖರವಾಗಿ ಆಗಬೇಕು*

ಜಿಲ್ಲೆಯಲ್ಲಿ ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಳ್ಳುತ್ತಿದ್ದು ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕಿದೆ. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು. ಮೊಬೈಲ್ ಅಪ್ಲಿಕೇಶನ್ ನಲ್ಲಿ ಸಮೀಕ್ಷೆ ನಡೆಸಿ ನಿಖರ ಅಂಕಿ ಅಂಕಿಅಂಶಗಳ ಕ್ರೂಡಿಕರಣ ಮಾಡಿ. ಬೆಳೆ ಸಮೀಕ್ಷೆಯಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಿಖರವಾಗಿ ಇರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

Ramesh Babu

Journalist

Recent Posts

ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ನಟ ಪ್ರಥಮ್ ವ್ಯಂಗ್ಯ ಆರೋಪ: ದಲಿತ ಸಂಘಟನೆ ಆಕ್ರೋಶ: ಠಾಣೆ ಮುಂದೆ ಪ್ರಥಮ್ ಗೆ ಮಸಿ ಬಳಿಯುವ ಯತ್ನ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ವಿಚಾರವಾಗಿ ವ್ಯಂಗ್ಯವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪ್ರಥಮ್ ಗೆ ಅಂಬೇಡ್ಕರ್ ಸೇನೆ ಹೋರಾಟಗಾರರು ದೊಡ್ಡಬಳ್ಳಾಪುರ…

5 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಸ್ಥಳ ಮಹಜರಿನಲ್ಲಿ ಘಟನೆ ಬಗ್ಗೆ ಪೊಲೀಸರಿಗೆ ಇಂಚಿಂಚು ಮಾಹಿತಿ ನೀಡಿದ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಸಮೀಪವಿರುವ ರೇಣುಕಾ ಯಲ್ಲಮ್ಮ ದೇವಾಲಯದ…

9 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಟ ಪ್ರಥಮ್

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ನಟ ಪ್ರಥಮ್…

10 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ ಜಾಮೀನು ಮಂಜೂರು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ, ದೊಡ್ಡಬಳ್ಳಾಪುರ ಪ್ರಧಾನ ಸಿವಿಲ್ ನ್ಯಾಯಾಲಯದ ವತಿಯಿಂದ ಯಶಸ್ವಿನಿ, ಬೇಕರಿ ರಘುಗೆ ಷರತ್ತುಬದ್ಧ…

11 hours ago

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣ: ಆರೋಪಿಗಳಾದ ಯಶಸ್ವಿನಿ, ಬೇಕರಿ ರಘು ದೊಡ್ಡಬಳ್ಳಾಪುರ ಕೋರ್ಟ್ ಗೆ ಶರಣು

ನಟ ಪ್ರಥಮ್ ಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಇಂದು…

15 hours ago

ನಮ್ಮ ನಿಷ್ಠೆ ಪ್ರಕೃತಿಯೆಡೆಗೆ ಇರಲಿ……..

ನಮ್ಮ ನಿಷ್ಠೆ ಪ್ರಕೃತಿಗೆ....... ಹರಕೆ ಮತ್ತು ಶಾಪ, ಜೊತೆಗೆ ನಿನ್ನೆಯ ನಾಗರ ಪಂಚಮಿ...... ಎರಡೂ ನಮ್ಮ ನಡುವಿನ ಪ್ರಬಲ ನಂಬಿಕೆಗಳು.......…

18 hours ago