ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಬೇಕು- ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ….? ಇಲ್ಲಿದೆ ಮಾಹಿತಿ‌ ಓದಿ

ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೆಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ, ಎಣ್ಣೆಕಾಳು ಅಭಿಯಾನ ಯೋಜನೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.

ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಬೆಳೆ ವಿಮೆಗೆ ನೋಂದಾಯಿಸಲು ಪ್ರೇರೇಪಿಸಿ ಎಂದರು.

*ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ*

ರಾಗಿ (ಮಳೆಯಾಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.
ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.
ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.
ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.
ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.
ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.
ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.
ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.

ರೈತರಿಗೆ ಕೃಷಿ ಕಾರ್ಯಾಗಾರವನ್ನು ಆಯೋಜನೆ ಮಾಡಿ, ರೋಗ ಬಾಧೆಯಿಂದ ಬೆಳೆಯ ರಕ್ಷಣೆ, ಗೊಬ್ಬರ ಪೂರೈಕೆ, ಇಳುವರಿ ಹೆಚ್ಚಿಸುವ ಬೆಳೆಗಳ ಕುರಿತು ಜಾಗೃತಿ ಮೂಡಿಸಿ. ಸಿರಿಧಾನ್ಯ, ಎಣ್ಣೆ ಕಾಳುಗಳ ಬೆಳೆಗೆ ಹೆಚ್ಚಿನ ಪ್ರೊತ್ಸಾಹ ಕಲ್ಪಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.

*ಬೆಳೆ ಸಮೀಕ್ಷೆ ನಿಖರವಾಗಿ ಆಗಬೇಕು*

ಜಿಲ್ಲೆಯಲ್ಲಿ ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಳ್ಳುತ್ತಿದ್ದು ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕಿದೆ. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು. ಮೊಬೈಲ್ ಅಪ್ಲಿಕೇಶನ್ ನಲ್ಲಿ ಸಮೀಕ್ಷೆ ನಡೆಸಿ ನಿಖರ ಅಂಕಿ ಅಂಕಿಅಂಶಗಳ ಕ್ರೂಡಿಕರಣ ಮಾಡಿ. ಬೆಳೆ ಸಮೀಕ್ಷೆಯಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಿಖರವಾಗಿ ಇರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

7 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

9 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

9 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

15 hours ago