ಕೃಷಿ, ತೋಟಗಾರಿಕೆ ಅಧಿಕಾರಿಗಳು ಮತ್ತು ಬೆಳೆ ವಿಮಾ ಸಂಸ್ಥೆಗಳು ಜಂಟಿಯಾಗಿ ಸ್ಥಳೀಯ ಮಟ್ಟದಲ್ಲಿ ರೈತರಿಗೆ ಬೆಳೆ ವಿಮೆ ಬಗ್ಗೆ ಹಾಗೂ ಅದರಿಂದ ಆಗುವ ಅನುಕೂಲಗಳ ಬಗ್ಗೆ ಅರಿವು ಮೂಡಿಸುವ ಮೂಲಕ ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳಲು ಪ್ರೇರೆಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಸೂಚಿಸಿದರು.
ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ, ಬೆಳೆ ಸಮೀಕ್ಷೆ, ಎಣ್ಣೆಕಾಳು ಅಭಿಯಾನ ಯೋಜನೆಯ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ರೈತರು ಬೆಳೆ ವಿಮೆ ಮಾಡಿಸುವುದರಿಂದ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಇನ್ನೂ ಮುಂತಾದ ಪ್ರಕೃತಿ ವಿಕೋಪಗಳಿಂದ ಬೆಳೆಗಳಿಗೆ ಹಾನಿಯಾದರೆ ಅಂತಹ ಸಂದರ್ಭದಲ್ಲಿ ಬೆಳೆ ನಷ್ಟ ಪರಿಹಾರ ಸಿಗಲಿದೆ. ಹಾಗಾಗಿ ಅಧಿಕಾರಿಗಳು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಜಾಗೃತಿ ಮೂಡಿಸಿ ಬೆಳೆ ವಿಮೆಗೆ ನೋಂದಾಯಿಸಲು ಪ್ರೇರೇಪಿಸಿ ಎಂದರು.
*ಯಾವ ಬೆಳೆಗೆ ಎಷ್ಟು ವಿಮೆ ಸಿಗಲಿದೆ*
ರಾಗಿ (ಮಳೆಯಾಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 340 ಪಾವತಿಸಿದರೆ ವಿಮಾ ಮೊತ್ತ 17000 ಪಡೆಯಬಹುದು.
ರಾಗಿ (ನೀರಾವರಿ ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 406 ಪಾವತಿಸಿದರೆ ವಿಮಾ ಮೊತ್ತ 20300 ಪಡೆಯಬಹುದು.
ಭತ್ತ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 746 ಪಾವತಿಸಿದರೆ ವಿಮಾ ಮೊತ್ತ 37300 ಪಡೆಯಬಹುದು.
ಮುಸುಕಿನ ಜೋಳ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 452 ಪಾವತಿಸಿದರೆ ವಿಮಾ ಮೊತ್ತ 22600 ಪಡೆಯಬಹುದು.
ಮುಸುಕಿನ ಜೋಳ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 516 ಪಾವತಿಸಿದರೆ ವಿಮಾ ಮೊತ್ತ 25800 ಪಡೆಯಬಹುದು.
ಹುರಳಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 164 ಪಾವತಿಸಿದರೆ ವಿಮಾ ಮೊತ್ತ 8200 ಪಡೆಯಬಹುದು.
ನೆಲಗಡಲೆ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 436 ವತಿಸಿದರೆ ವಿಮಾ ಮೊತ್ತ 21800 ಪಡೆಯಬಹುದು.
ತೊಗರಿ (ಮಳೆಆಶ್ರಿತ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 384 ಪಾವತಿಸಿದರೆ ವಿಮಾ ಮೊತ್ತ 19200 ಪಡೆಯಬಹುದು.
ತೊಗರಿ (ನೀರಾವರಿ) ರೈತರು ಪ್ರೀಮಿಯಂ ಮೊತ್ತ ಎಕರೆಗೆ 402 ಪಾವತಿಸಿದರೆ ವಿಮಾ ಮೊತ್ತ 20100 ಪಡೆಯಬಹುದು.
ಟಮೊಟೊ ಬೆಳೆಗೆ ರೈತರು ಪ್ರೀಮಿಯಂ ಮೊತ್ತ ಎಕರೆಗೆ 1132 ಪಾವತಿಸಿದರೆ ವಿಮಾ ಮೊತ್ತ 56600 ಪಡೆಯಬಹುದು.
ರೈತರಿಗೆ ಕೃಷಿ ಕಾರ್ಯಾಗಾರವನ್ನು ಆಯೋಜನೆ ಮಾಡಿ, ರೋಗ ಬಾಧೆಯಿಂದ ಬೆಳೆಯ ರಕ್ಷಣೆ, ಗೊಬ್ಬರ ಪೂರೈಕೆ, ಇಳುವರಿ ಹೆಚ್ಚಿಸುವ ಬೆಳೆಗಳ ಕುರಿತು ಜಾಗೃತಿ ಮೂಡಿಸಿ. ಸಿರಿಧಾನ್ಯ, ಎಣ್ಣೆ ಕಾಳುಗಳ ಬೆಳೆಗೆ ಹೆಚ್ಚಿನ ಪ್ರೊತ್ಸಾಹ ಕಲ್ಪಿಸಿಕೊಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಿದರು.
*ಬೆಳೆ ಸಮೀಕ್ಷೆ ನಿಖರವಾಗಿ ಆಗಬೇಕು*
ಜಿಲ್ಲೆಯಲ್ಲಿ ಈ ಸಾಲಿನ ಬೆಳೆ ಸಮೀಕ್ಷೆ ಆರಂಭಗೊಳ್ಳುತ್ತಿದ್ದು ಸಮೀಕ್ಷೆಯು ಸರಿಯಾದ ಕ್ರಮದಲ್ಲಿ ಆಗಬೇಕಿದೆ. ಸಮೀಕ್ಷೆ ಮಾಡುವವರಿಗೆ ಸೂಕ್ತ ತರಬೇತಿ ನೀಡಬೇಕು. ಮೊಬೈಲ್ ಅಪ್ಲಿಕೇಶನ್ ನಲ್ಲಿ ಸಮೀಕ್ಷೆ ನಡೆಸಿ ನಿಖರ ಅಂಕಿ ಅಂಕಿಅಂಶಗಳ ಕ್ರೂಡಿಕರಣ ಮಾಡಿ. ಬೆಳೆ ಸಮೀಕ್ಷೆಯಿಂದ ಸೆರೆ ಹಿಡಿಯಲಾದ ದತ್ತಾಂಶವನ್ನು ಸರ್ಕಾರದ ವಿವಿಧ ಯೋಜನೆಗಳಲ್ಲಿ ಕನಿಷ್ಠ ಬೆಂಬಲ, ಸಬ್ಸಿಡಿ ಪಾವತಿ, ಬೆಳೆ ಪ್ರದೇಶದ ಅಂದಾಜು ಕೃಷಿ ಮತ್ತು ತೋಟಗಾರಿಕೆ ಯೋಜನೆಗಳ ಅಡಿಯಲ್ಲಿ ಫಲಾನುಭವಿಗಳ ಆಯ್ಕೆಗೆ ಮುಂತಾದ ಸೌಲಭ್ಯ ಒದಗಿಸಲು ಸಹಕಾರಿಯಾಗಲಿದೆ. ಆದ್ದರಿಂದ ಬೆಳೆ ಸಮೀಕ್ಷೆ ನಿಖರವಾಗಿ ಇರಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…